AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?

ಸಕಲೇಶಪುರ(Sakleshpura)ದಲ್ಲಿ ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸಿಲುಕಿಸಲು ಹೋಗಿ ತಾವೆ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಪತಿಯನ್ನು ಪೊಲೀಸರಿಗೆ ಸಿಕ್ಕಿಸಲು ಪ್ಲಾನ್ ಮಾಡಿದ್ದ ನಾಲ್ವರು ಆರೋಪಿಗಳು ತಾವೇ ಅಂದರ್​ ಆಗಿದ್ದು, ನಾಲ್ವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್; ಥಾರ್ ವಾಹನದಲ್ಲಿ ಗಾಂಜಾ ಇಟ್ಟವರು ಸಿಕ್ಕಿಬಿದ್ದಿದ್ಹೇಗೆ?
ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಸಿಲುಕಿಸಲು ಖತರ್ನಾಕ್​ ಪ್ಲ್ಯಾನ್;
ಮಂಜುನಾಥ ಕೆಬಿ
| Edited By: |

Updated on: Oct 12, 2024 | 7:02 PM

Share

ಹಾಸನ, ಅ.12: ಅಕ್ರಮ‌ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಸಿಲುಕಿಸಲು ಹೋಗಿ ತಾವೆ ಸಿಕ್ಕಿಬಿದ್ದ ಘಟನೆ ಸಕಲೇಶಪುರ(Sakleshpura)ದಲ್ಲಿ ನಡೆದಿದೆ. ಪತಿಯನ್ನು ಪೊಲೀಸರಿಗೆ ಸಿಕ್ಕಿಸಲು ಪ್ಲಾನ್ ಮಾಡಿದ್ದ ನಾಲ್ವರು ಆರೋಪಿಗಳು, ಥಾರ್ ವಾಹನದಲ್ಲಿ ಗಾಂಜಾ ತಂದು ಮಹಿಳೆಯ ಪತಿಗೆ ನೀಡಿ ಪೊಲೀಸರಿಗೆ ಮಾಹಿತಿ ನೀಡಲು ಯತ್ನಿಸಿದ್ದರು. ಥಾರ್ ವಾಹನ ಓಡಾಟದಿಂದ ಅನುಮಾನಗೊಂಡ ಸಕಲೇಶಪುರ ನಗರ ಪೊಲೀಸ್ ಠಾಣೆ ಪೊಲೀಸರು, ವಾಹನ ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ವಾಹನದಲ್ಲಿ 1 ಕೆಜಿ 360 ಗ್ರಾಂ ಗಾಂಜಾ ಕಂಡುಬಂದಿದ್ದು, ವಶಕ್ಕೆ ಪಡೆಯಲಾಗಿದೆ.

ಆಗಿದ್ದೇನು?

ಇನ್ನು ವಿಚಾರಣೆ ವೇಳೆ ಆರೋಪಿಗಳು ಸತ್ಯಾಂಶ ಬಾಯ್ಬಿಟ್ಟಿದ್ದಾರೆ. ಸಕಲೇಶಪುರದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮುಕ್ತಾರ್ ಅಲಿ ಎಂಬಾತನ ಪತ್ನಿ ಜೊತೆ ಮೂಡಿಗೆರೆ ಮೂಲದ ಮಹಮದ್ ಎಂಬಾತ ಅಕ್ರಮ ಸಂಬಂಧ ಹೊಂದಿದ್ದ. ಈ ಹಿನ್ನಲೆ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಮುಕ್ತಾರ್ ಅಲಿಯನ್ನು ಪೊಲೀಸರು ಬಂಧಿಸುವಂತೆ ಮಾಡಲು ಆರೋಪಿ ಮಹಮದ್ ಹಾಗೂ ಮೂವರ ತಂಡ ಖತರ್ನಾಕ್​ ಪ್ಲಾನ್ ಮಾಡಿದ್ದರು.

ಇದನ್ನೂ ಓದಿ:ಸಹೋದರನ ಪತ್ನಿ ಜೊತೆ ಅಕ್ರಮ‌ ಸಂಬಂಧ: ಕೊನೆಗೆ ತಮ್ಮನಿಂದಲೇ ಹತ್ಯೆಯಾದ ಅಣ್ಣ

ಅದರಂತೆ ಚಿಕ್ಕಮಗಳೂರು ನೋಂದಣಿಯ KA-18-P-9557 ನಂಬರ್‌ನ ಥಾರ್ ವಾಹನದಲ್ಲಿ ಗಾಂಜಾ ತಂದಿದ್ದ ನಾಲ್ವರು, ಮುಕ್ತಾರ್ ಅಲಿಗೆ ಗಾಂಜಾ ಕೊಟ್ಟು ಪೊಲೀಸರಿಗೆ ಮಾಹಿತಿ ನೀಡಲು ತಯಾರಿ ನಡೆಸಿದ್ದರು. ಈ ವೇಳೆ ಅನುಮಾನಗೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ ಗಾಂಜಾ ಸಿಕ್ಕಿದ್ದು, ಸಧ್ಯ ಮಾಲು ಸಮೇತ ನಾಲ್ವರು ಹಾಗೂ ಥಾರ್‌ ಜೀಪ್​ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ನಾಲ್ವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೂಲದವರಾಗಿದ್ದು, ನಾಲ್ವರನ್ನು ಸಕಲೇಶಪುರ ನಗರ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್