AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಯಾವ ಗೊಂದಲವೂ ಇಲ್ಲ: ಬಿವೈ ವಿಜಯೇಂದ್ರ

ಬಿಜೆಪಿ-ಜೆಡಿಎಸ್ ಮೈತ್ರಿಗೆ ಸಂಬಂಧಿಸಿದಂತೆ ಯಾವ ಗೊಂದಲವೂ ಇಲ್ಲ: ಬಿವೈ ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 09, 2025 | 11:30 AM

Share

ಬಿಜೆಪಿಯ ಪೇಮೆಂಟ್ ಸೀಟು ರಾಜ್ಯಾದ್ಯಕ್ಷ ತಮ್ಮ ವಿರುದ್ಧ ಪಕ್ಷದಲ್ಲಿ ಎದ್ದಿರುವ ಆಂತರಿಕ ಆಕ್ರೋಶವನ್ನು ಮುಚ್ಚಿ ಹಾಕಲು ಪ್ರತಿಭಟನೆಯ ಬೀದಿ ನಾಟಕ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿರುವುದಕ್ಕೆ ವಿಜಯೇಂದ್ರ, ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ ವನ್ ಎಂದು ಅವರ ಆರ್ಥಿಕ ಸಲಹೆಗಾರರೇ ಹೇಳಿದ್ದಾರೆ, ಸಿಎಂ ಅದಕ್ಕೆ ಮೊದಲು ಉತ್ತರ ಕೊಡಲಿ ಎಂದರು.

ಹಾಸನ, ಏಪ್ರಿಲ್ 9: ಹಾಸನದಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಬಿಜೆಪಿ ಬೆಲೆಯೇರಿಕೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟದಿಂದ ಜೆಡಿಎಸ್ ಪಕ್ಷವನ್ನು (JDS party) ಹೊರಗಿಟ್ಟಿಲ್ಲ, ಸದನದೊಳಗೆ ಎರಡೂ ಪಕ್ಷಗಳು ಸರ್ಕಾರದ ವಿರುದ್ಧ ಒಟ್ಟಿಗೆ ಹೋರಾಟ ನಡೆಸುತ್ತಿವೆ, ಅದರೆ ಒಂದು ರಾಷ್ಟ್ರೀಯ ಮತ್ತು ವಿರೋಧ ಪಕ್ಷವಾಗಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಹೆಚ್ಚಳದ ವಿರುದ್ಧ ಕೂಡಲೇ ಸ್ಪಂದಿಸಬೇಕಾಗಿದ್ದರಿಂದ ಬಿಜೆಪಿ ಒಬ್ಬಂಟಿಯಾಗಿ ಹೋರಾಟಕ್ಕಿಳಿದಿದೆ, ಎರಡು ಪಕ್ಷಗಳ ನಡುವಿನ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.

ಇದನ್ನೂ ಓದಿ:   ಬಿಜೆಪಿ-ಜೆಡಿಎಸ್ ನಡುವೆ ಯಾವ ಗೊಂದಲವೂ ಇಲ್ಲ, ಮಾತುಕತೆ ಮೂಲಕ ಸರಿಮಾಡಿಕೊಳ್ಳುತ್ತೇವೆ: ವಿಜಯೇಂದ್ರ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.