AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್​​ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ

ಶಿರಾಡಿಘಾಟ್​​ನಲ್ಲಿ ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ. ‘‘ಎರಡು ದಿನದಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ವಾಹನಗಳ‌ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದಿದ್ದಾರೆ.

ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್​​ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ
ಶಿರಾಡಿಘಾಟ್​​ನಲ್ಲಿ ಎಲ್ಲಾ ವಾಹನಗಳಿಗೂ ಸಂಚಾರಕ್ಕೆ ಅವಕಾಶ
ಮಂಜುನಾಥ ಕೆಬಿ
| Edited By: |

Updated on:Aug 07, 2024 | 3:01 PM

Share

ಹಾಸನ, ಆ.07:  ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್(Shiradighat) ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ

ಇನ್ನು ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟದ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ. ‘ಎರಡು ದಿನದಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ವಾಹನಗಳ‌ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ಎನ್​ಹೆಚ್ ಟೀಂ ದಿನದ 24 ಗಂಟೆಯೂ ಸ್ಥಳದಲ್ಲಿರಲಿದೆ. ಯಾವುದೇ ಅವಘಡ ಸಂಭವಿಸದಂತೆ ಎಚ್ಚರ ವಹಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.

ಇದನ್ನೂ ಓದಿ:ಶಿರಾಡಿ ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಸ್ಥಳೀಯರ ಅಭಿಪ್ರಾಯ ಕೇಂದ್ರಕ್ಕೆ ತಿಳಿಸುತ್ತೇನೆಂದ ಸಿಎಂ

ಇತ್ತ ಜುಲೈ.26 ರಿಂದ ಬೆಂಗಳೂರು-ಮಂಗಳೂರು ರೈಲ್ವೆ ಮಾರ್ಗ ಬಂದ್ ಆಗಿತ್ತು. ಕಿ.ಮೀ ನಂ.63ರಲ್ಲಿ ರೈಲ್ವೆ ಹಳಿ ಮೇಲೆ‌ ಗುಡ್ಡ ಕುಸಿದಿದ್ದ ಹಿನ್ನಲೆ ಇಲಾಖೆ ಕಾರ್ಮಿಕರು ಬರೋಬ್ಬರಿ 11 ದಿನಗಳ ಕಾಲ ಕಾರ್ಯಾಚರಣೆ ನಡೆಸಿ ಆ.05 ರಂದು ಹಳಿ ಮರುಸ್ಥಾಪಿಸಿದ್ದರು. ಕೇವಲ ಸಣ್ಣಪುಟ್ಟ ದುರಸ್ತಿ ಕೆಲಸಗಳು ಮಾತ್ರ ಬಾಕಿ ಇತ್ತು. ಈ ಹಿನ್ನಲೆ ಗೂಡ್ಸ್‌ ರೈಲುಗಳ ಸಂಚಾರಕ್ಕಷ್ಟೇ ಅವಕಾಶ ನೀಡಲಾಗಿದೆ. ಶೀಘ್ರದಲ್ಲಿಯೇ ರೈಲುಗಳ ಪುನರ್ ಸಂಚಾರ ಸಾಧ್ಯತೆ ನಿರೀಕ್ಷೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Wed, 7 August 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್