ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

|

Updated on: May 12, 2023 | 11:22 AM

ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಒದ್ದಾಡಿ ನಡುರಸ್ತೆಯಲ್ಲೇ ಯುವಕ ಪ್ರಾಣಬಿಟ್ಟಿದ್ದಾನೆ.

ಅಪಘಾತವಾಗಿ 1 ಗಂಟೆ ಕಳೆದರೂ ಬಾರದ ಆಂಬುಲೆನ್ಸ್: ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ
ಘಟನಾ ಸ್ಥಳ ಹಾಗೂ ಮೃತ ಆನಂದ್
Follow us on

ಹಾಸನ: ಅಪಘಾತ ಸಂಭವಿಸಿ ಒಂದು ಗಂಟೆ ಕಳೆದರೂ ಆಂಬುಲೆನ್ಸ್ ಬಾರದೆ ನಡುರಸ್ತೆಯಲ್ಲೇ ಒದ್ದಾಡಿ ಯುವಕ ಪ್ರಾಣ ಬಿಟ್ಟ ಮನಕಲಕುವ ಘಟನೆ ಹಾಸನ ತಾಲೂಕಿನ ಬೇಲೂರು ರಸ್ತೆಯ ಕಲ್ಕೆರೆ ಗ್ರಾಮದ ಬಳಿ ತಡ ರಾತ್ರಿ ನಡೆದಿದೆ. ಮೂಲತಃ ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ಆನಂದ್ (30) ಮೃತ ದುರ್ದೈವಿ.

ಆನಂದ್ ಬೇಲೂರು ಕಡೆಯಿಂದ ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ. ಈ ವೇಳೆ ಮಾರ್ಗ ಮಧ್ಯೆ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಒದ್ದಾಡಿ ನಡುರಸ್ತೆಯಲ್ಲೇ ಯುವಕ ಪ್ರಾಣಬಿಟ್ಟಿದ್ದಾನೆ. ಘಟನೆಗೆ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಜೆಪಿ ಕಾರ್ಯಕರ್ತನ ಶವ ಪತ್ತೆ: ಆತ್ಮಹತ್ಯೆಯಲ್ಲ, ಕೊಲೆ ಎನ್ನುತ್ತಿರುವ ಕುಟುಂಬಸ್ಥರು

ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿಗಾಗಿ ಬಂದಿದ್ದ ಕಾರ್ಮಿಕ ಸಾವು

ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಕೂಲಿಗಾಗಿ ಬಂದಿದ್ದ ಕಾರ್ಮಿಕ‌ ಮೃತಪಟ್ಟ ಘಟನೆ ನಡೆದಿದೆ. ದೇಹದ ಅಂಗಾಂಗಗಳು ರಸ್ತೆ ಮಧ್ಯೆ ಚೆಲ್ಲಾಪಲ್ಲಿಯಾಗಿ ಬಿದ್ದಿದ್ದು ಕರಳುಹಿಂಡುವಂತಿದೆ. ರಾಯಚೂರಿನ ತೋರಣದಿನ್ನಿ ಗ್ರಾಮದ ಮಂಜುನಾಥ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಕಳೆದ ರಾತ್ರಿ ಘಟನೆ ನಡೆದಿದೆ. ಅಪಘಾತದಿಂದ ರಸ್ತೆ ತುಂಬಾ ರಕ್ತ ಚೆಲ್ಲಿದ್ದು ಸ್ಥಳೀಯರು ಕ್ಲೀನ್ ಮಾಡಿದ್ದಾರೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:14 am, Fri, 12 May 23