AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮೀನು ಅತಿಕ್ರಮಣ ಮಾಡಿ ಕಟ್ಟಡ ನಿರ್ಮಾಣ , ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ವಿರುದ್ಧ ವೃದ್ಧ ದಂಪತಿ ಆರೋಪ

ಜಮೀನು ಅತಿಕ್ರಮಣ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದಾರೆಂದು ಹಾಸನ ಬಿಜೆಪಿ ಜಿಲ್ಲಾಧ್ಯಕ್ಷರ ವಿರುದ್ಧ ವೃದ್ಧ ದಂಪತಿ ಆರೋಪ ಮಾಡಿದ್ದಾರೆ

ಜಮೀನು ಅತಿಕ್ರಮಣ ಮಾಡಿ ಕಟ್ಟಡ ನಿರ್ಮಾಣ , ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ವಿರುದ್ಧ ವೃದ್ಧ ದಂಪತಿ ಆರೋಪ
ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ ಸುರೇಶ
TV9 Web
| Edited By: |

Updated on:May 15, 2022 | 10:20 AM

Share

ಹಾಸನ: ಜಮೀನು ಅತಿಕ್ರಮಣ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದಾರೆಂದು ಹಾಸನ (Hassan) ಬಿಜೆಪಿ (BJP) ಜಿಲ್ಲಾಧ್ಯಕ್ಷರ ವಿರುದ್ಧ ವೃದ್ಧ ದಂಪತಿ ಆರೋಪ ಮಾಡಿದ್ದಾರೆ. ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್ ವಿರುದ್ಧ ವೃದ್ಧ ದಂಪತಿ ರಾಮಗುಪ್ತಾ ಮತ್ತು ಸುಧಾ ಆರೋಪ ಮಾಡಿದ್ದಾರೆ. ಬಿಜೆಪಿ ಜಿಲ್ಲಾಧ್ಯಕ್ಷ ಹೆಚ್.ಕೆ.ಸುರೇಶ್ ಬೇಲೂರು ಪಟ್ಟಣದ ಕೋಟೆ ಬೀದಿಯಲ್ಲಿ ಮನೆ ಖರೀದಿ ಮಾಡಿದ್ದಾರೆ. ಖರೀದಿಸಿರುವ ಮನೆ ಹಿಂಬದಿಯಿರುವ ಖಾಲಿ ನಿವೇಶನ ಅತಿಕ್ರಮಣ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನಿವೇಶನ ವಿವಾದಕ್ಕೆ ಸಂಬಂಧಪಟ್ಟಂತೆ ವೃದ್ಧ ದಂಪತಿ ಕೋರ್ಟ್ ಮೊರೆ ಹೋಗಿದ್ದರು. ಕೋರ್ಟ್ (court) ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಡೆಯಾಜ್ಞೆ ನೀಡಿತ್ತು. ಆದರೆ ತಡೆಯಾಜ್ಞೆ ನಡುವೆಯೂ ಭೂಮಿ ಅತಿಕ್ರಮಣ ಮಾಡಿದ್ದಾರೆ ಎಂದು ವೃದ್ಧ ದಂಪತಿ ಆರೋಪ ಮಾಡಿದ್ದಾರೆ. ಈ ಸಂಬಂಧ ವೃದ್ಧ ದಂಪತಿ ರಾಮಗುಪ್ತಾ ಮತ್ತು ಸುಧಾ ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದಾರೆ. ವಿಡಿಯೋದಲ್ಲಿ ಹೆಚ್.ಕೆ.ಸುರೇಶ್ ಬೆಂಬಲಿಗರು ನಮ್ಮ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ.

ಇದನ್ನೂ ಓದಿ
Image
ಗುರಿ ಸಾಧನೆಗೆ ಹಣಕಾಸಿನ ಚಿಂತೆಯೇ? ಹಾಗಿದ್ದರೆ ಹಣಕಾಸಿನ ಯೋಜನೆ ರೂಪಿಸಿಕೊಳ್ಳಲು ನೆರವಾಗುವ ಈ ಅಂಶಗಳನ್ನು ಫಾಲೋ ಮಾಡಿ
Image
ಟಿಸಿಎಸ್​ ವಿಶ್ವ 10ಕೆ ಓಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ: 19 ಸಾವಿರಕ್ಕಿಂತ ಹೆಚ್ಚು ಅಥ್ಲೀಟ್​ಗಳು ಭಾಗಿ
Image
ಹೊನ್ನಾವರದ ಗೇರುಸೊಪ್ಪಾ ಸರ್ಕಲ್ ಬಳಿ ವ್ಯಕ್ತಿ ಮೇಲೆ ಹರಿದ ಲಾರಿ, ಬೆಂಗಳೂರಿನಲ್ಲಿ ನಟೋರಿಯಸ್ ಕಳ್ಳನ ಬಂಧನ, ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ನಮ್ಮ ಜಾಗದಲ್ಲಿ ಅಕ್ರಮವಾಗಿ ಕಾಂಪೌಂಡ್, ರೂಮ್ ನಿರ್ಮಾಣ ಮಾಡಿದ್ದಾರೆ. ಹುಲಹಳ್ಳಿ ಸುರೇಶ್, ಕೃಷ್ಣಮೂರ್ತಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ಬೇಲೂರು ಠಾಣೆಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ಅತಿಕ್ರಮ ಪ್ರವೇಶಿಸಿ ದಬ್ಬಾಳಿಕೆಯಿಂದ ಕಟ್ಟಡ ನಿರ್ಮಾಣ ಆರೋಪ ಮಾಡಿದ್ದಾರೆ. ತಮ್ಮ ಮೇಲೆ ದೌರ್ಜನ್ಯ ಆಗುತ್ತಿದೆ ಯಾರೂ ರಕ್ಷಣೆಗೆ ಬರ್ತಿಲ್ಲ ಎಂದು ವೃದ್ಧ ದಂಪತಿ ಅಳಲು ತೋಡಿಕೊಂಡಿದ್ದಾರೆ.

Published On - 10:20 am, Sun, 15 May 22

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ