AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ – ಈಶ್ವರ ಖಂಡ್ರೆ

ಕಾಡಾನೆ ಕಾರ್ಯಾಚರಣೆ ವೇಳೆ ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಹೇಳಿದರು.

ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ - ಈಶ್ವರ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on: Dec 10, 2023 | 2:13 PM

ಹಾಸನ, ಡಿಸೆಂಬರ್​ 10: ಕಾಡಾನೆ ಕಾರ್ಯಾಚರಣೆ ವೇಳೆ ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ (Arjun Elephant) ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ (Forest Department) ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, 15 ದಿನದ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಹೇಳಿದರು.

ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ದಸರಾ ಆನೆ ಅರ್ಜುನ‌ನನ್ನು ಕಳೆದುಕೊಂಡಿದ್ದು ದುಃಖಕರ. ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ನೋವು ತಂದಿದೆ. ಅರ್ಜುನನಿಗೆ ನಾವು ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮದವೇರಿದ ಕಾಡಾನೆ ಜೊತೆ ಕಾದಾಡಿ ಮಂಡಿ ಊರಿದ ಅರ್ಜುನ; ಕಾರ್ಯಾಚರಣೆ ವಿಡಿಯೋ ಲಭ್ಯ

ಕಾರ್ಯಾಚರಣೆ ಅತ್ಯಂತ ಅಪಾಯದ್ದು. ಈ ಬಾಗದಲ್ಲಿ ಸಾಕಷ್ಟು ಆನೆಗಳು ಬೆಳೆ ನಾಶ ಮಾಡಿವೆ. ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದರು. ಹೀಗಾಗಿ ಆನೆ ಸೆರೆ ಹಿಡಿಯಲು ಸಾಕಷ್ಟು ಒತ್ತಡ ಇತ್ತು. ಈ ಸಂಬಂಧ ನವೆಂಬರ್ 24 ರಿಂದ ಕಾರ್ಯಾಚರಣೆ ಆರಂಭ ಆಗಿತ್ತು. ಕಾರ್ಯಾಚರಣೆಯಲ್ಲಿ ನಮ್ಮ ಅಧಿಕಾರಿಗಳು ಎಲ್ಲ ಮಾನದಂಡ ಅನುಸರಣೆ ಮಾಡಿದ್ದಾರೆ. ಪುಂಡಾನೆ ಏಕಾ ಏಕಿ ದಾಳಿ ಮಾಡಿದೆ. ಹೀಗಾಗಿ ಅವಘಡ ಸಂಭವಿಸಿದೆ ಎಂದು ಮಾಹಿತಿ ನೀಡಿದರು.

ಆದರು ಕೆಲವರು ಘಟನೆ ಬಗ್ಗೆ ಸಾಕಷ್ಟು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್​ಗೆ ಅರವಳಿಕೆ ಮದ್ದು ಬಿದ್ದಿದೆ, ಅರ್ಜುನನಿಗೆ ಗುಂಡು ತಗುಲಿದೆ ಎಂಬ ಆರೋಪವಿದೆ. ಬಾಹ್ಯ ಮರಣೋತ್ತರ ಪರೀಕ್ಷೆ ಆಗಿದೆ. ಈ ವರದಿಯಲ್ಲಿ ಗುಂಡು ತಗುಲಿದ ಬಗ್ಗೆ ಮಾಹಿತಿ ಇಲ್ಲ. ಎಸ್​ಓಪಿ ಅಪ್ಡೇಡ್ ಆಗಬೇಕಿದೆ. ಈ ಬಗ್ಗೆ ಕೂಡ ಕ್ರಮ ವಹಿಸುತ್ತೇವೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ