AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ – ಈಶ್ವರ ಖಂಡ್ರೆ

ಕಾಡಾನೆ ಕಾರ್ಯಾಚರಣೆ ವೇಳೆ ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ ಹೇಳಿದರು.

ಅರ್ಜುನ ಆನೆ ಸಾವು: ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ - ಈಶ್ವರ ಖಂಡ್ರೆ
ಸಚಿವ ಈಶ್ವರ್​ ಖಂಡ್ರೆ
ಮಂಜುನಾಥ ಕೆಬಿ
| Edited By: |

Updated on: Dec 10, 2023 | 2:13 PM

Share

ಹಾಸನ, ಡಿಸೆಂಬರ್​ 10: ಕಾಡಾನೆ ಕಾರ್ಯಾಚರಣೆ ವೇಳೆ ಮಾಜಿ ಕ್ಯಾಪ್ಟನ್​​ ಅರ್ಜುನ ಆನೆ (Arjun Elephant) ಮೃತಪಟ್ಟಿದ್ದಾನೆ. ಅರ್ಜುನ ಸಾವಿನ ಬಗ್ಗೆ ಅನೇಕರು ಶಂಕೆ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯ (Forest Department) ನಿವೃತ್ತ ವನ್ಯಜೀವಿ ಪಾಲಕರ ನೇತೃತ್ವದಲ್ಲಿ ತನಿಖಾ ಸಮಿತಿ ನೇಮಕ ಮಾಡಿದ್ದೇವೆ. ಅವರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, 15 ದಿನದ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತಾರೆ. ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್​ ಖಂಡ್ರೆ (Eshwar Khandre) ಹೇಳಿದರು.

ಅರ್ಜುನನ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಮಾತನಾಡಿದ ಅವರು, ದಸರಾ ಆನೆ ಅರ್ಜುನ‌ನನ್ನು ಕಳೆದುಕೊಂಡಿದ್ದು ದುಃಖಕರ. ಎಂಟು ಬಾರಿ ಅಂಬಾರಿ ಹೊತ್ತಿದ್ದ ಅರ್ಜುನನ ಸಾವು ನೋವು ತಂದಿದೆ. ಅರ್ಜುನನಿಗೆ ನಾವು ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಅರ್ಜುನ ಸಮಾಧಿ ಸ್ಥಳ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಮದವೇರಿದ ಕಾಡಾನೆ ಜೊತೆ ಕಾದಾಡಿ ಮಂಡಿ ಊರಿದ ಅರ್ಜುನ; ಕಾರ್ಯಾಚರಣೆ ವಿಡಿಯೋ ಲಭ್ಯ

ಕಾರ್ಯಾಚರಣೆ ಅತ್ಯಂತ ಅಪಾಯದ್ದು. ಈ ಬಾಗದಲ್ಲಿ ಸಾಕಷ್ಟು ಆನೆಗಳು ಬೆಳೆ ನಾಶ ಮಾಡಿವೆ. ಚಿಕ್ಕಮಗಳೂರಿನಲ್ಲಿ ಆನೆ ದಾಳಿಗೆ ಇಬ್ಬರು ಬಲಿಯಾದರು. ಹೀಗಾಗಿ ಆನೆ ಸೆರೆ ಹಿಡಿಯಲು ಸಾಕಷ್ಟು ಒತ್ತಡ ಇತ್ತು. ಈ ಸಂಬಂಧ ನವೆಂಬರ್ 24 ರಿಂದ ಕಾರ್ಯಾಚರಣೆ ಆರಂಭ ಆಗಿತ್ತು. ಕಾರ್ಯಾಚರಣೆಯಲ್ಲಿ ನಮ್ಮ ಅಧಿಕಾರಿಗಳು ಎಲ್ಲ ಮಾನದಂಡ ಅನುಸರಣೆ ಮಾಡಿದ್ದಾರೆ. ಪುಂಡಾನೆ ಏಕಾ ಏಕಿ ದಾಳಿ ಮಾಡಿದೆ. ಹೀಗಾಗಿ ಅವಘಡ ಸಂಭವಿಸಿದೆ ಎಂದು ಮಾಹಿತಿ ನೀಡಿದರು.

ಆದರು ಕೆಲವರು ಘಟನೆ ಬಗ್ಗೆ ಸಾಕಷ್ಟು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್​ಗೆ ಅರವಳಿಕೆ ಮದ್ದು ಬಿದ್ದಿದೆ, ಅರ್ಜುನನಿಗೆ ಗುಂಡು ತಗುಲಿದೆ ಎಂಬ ಆರೋಪವಿದೆ. ಬಾಹ್ಯ ಮರಣೋತ್ತರ ಪರೀಕ್ಷೆ ಆಗಿದೆ. ಈ ವರದಿಯಲ್ಲಿ ಗುಂಡು ತಗುಲಿದ ಬಗ್ಗೆ ಮಾಹಿತಿ ಇಲ್ಲ. ಎಸ್​ಓಪಿ ಅಪ್ಡೇಡ್ ಆಗಬೇಕಿದೆ. ಈ ಬಗ್ಗೆ ಕೂಡ ಕ್ರಮ ವಹಿಸುತ್ತೇವೆ. ಹೀಗಾಗಿ ಅರಣ್ಯ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಯಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್