AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಸೀಕೆರೆ ನಗರಸಭೆಯಲ್ಲಿ ಆಪರೇಶನ್ ಕಮಲ? ಜೆಡಿಎಸ್​ ಸದಸ್ಯರಿಂದ ಬಿಜೆಪಿಗೆ ಒಕ್ಕೊರಲ ಬೆಂಬಲ

31 ಸದಸ್ಯರ ಬಲದ ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆಯು ಸದ್ಯ 21 ಜೆಡಿಎಸ್, 6 ಬಿಜೆಪಿ, 3 ಪಕ್ಷೇತರರು, ಕಾಂಗ್ರೆಸ್‌ನ ಓರ್ವ ಸದಸ್ಯರನ್ನು ಹೊಂದಿದೆ. ಮೀಸಲಾತಿ ಬಲದಿಂದ ಬಿಜೆಪಿ ಅಭ್ಯರ್ಥಿ ನಗರಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೋರಂ ಕೊರತೆ ನೀಗಿಸಲು ಬಿಜೆಪಿಯಿಂದ ಆಪರೇಷನ್ ಕಮಲ ಮಾಡಿರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅರಸೀಕೆರೆ ನಗರಸಭೆಯಲ್ಲಿ ಆಪರೇಶನ್ ಕಮಲ? ಜೆಡಿಎಸ್​ ಸದಸ್ಯರಿಂದ ಬಿಜೆಪಿಗೆ ಒಕ್ಕೊರಲ ಬೆಂಬಲ
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Jun 22, 2021 | 11:10 PM

ಹಾಸನ: ಜಿಲ್ಲೆಯ ಅರಸೀಕೆರೆ ನಗರಸಭೆಯಲ್ಲಿ ಕೋರಂ ಕೊರತೆ ನೀಗಿಸಲು ಆಪರೇಷನ್ ಕಮಲ ಮಾಡಲಾಗಿದೆ ಎಂಬ ಕೂಗು ಕೇಳಿಬಂದಿದೆ. ನಗರಸಭೆಯಲ್ಲಿ ತಮಗೆ ಪ್ರತ್ಯೇಕ ಆಸನ ಮೀಸಲಿಡುವಂತೆ ಪಕ್ಷೇತರರಿಬ್ಬರ ಜತೆ ಜೆಡಿಎಸ್​ ಸದಸ್ಯರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ಜೆಡಿಎಸ್​ ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಸ್ಥಳೀಯ ಕೆಲವು ಜೆಡಿಎಸ್​ ಮುಖಂಡರ ವಿರುದ್ಧ ಅರಸಿಕೆರೆ ನಗರಸಭೆಯ ಜೆಡಿಎಸ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶಾಸಕ ಕೆ.ಎಂ.ಶಿವಲಿಂಗೇಗೌಡ ಮತ್ತು ಕೆಲವು ಜೆಡಿಎಸ್ ಮುಖಂಡರಿಂದ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಬೇಸತ್ತು ಅವರ ಗುಂಪಿನಿಂದ ಹೊರ ಬಂದಿದ್ದೇವೆ. ನಾವು ಪಕ್ಷ ತೊರೆದಿಲ್ಲ, 3ನೇ ಒಂದು ಭಾಗ ಗುಂಪಾಗಿ ಪ್ರತ್ಯೇಕವಾಗಿದ್ದು ನಗರದ ಅಭಿವೃದ್ಧಿ ದೃಷ್ಟಿಯಿಂದ ನಗರಸಭೆ ಅಧ್ಯಕ್ಷರಿಗೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ಸದಸ್ಯರು ತಿಳಿಸಿದ್ದಾರೆ. ಆದರೆ ಅರಸೀಕೆರೆ ಜೆಡಿಎಸ್​ ಸದಸ್ಯರು ಬಿಜೆಪಿಯವರಾಗಿದ್ದು, ಜೆಡಿಎಸ್ ಸದಸ್ಯರು ಬಿಜೆಪಿಗೆ ಬೆಂಬಲ ನೀಡಿದಂತಾಗಿದೆ.

31 ಸದಸ್ಯರ ಬಲದ ಹಾಸನ ಜಿಲ್ಲೆಯ ಅರಸೀಕೆರೆ ನಗರಸಭೆಯು ಸದ್ಯ 21 ಜೆಡಿಎಸ್, 6 ಬಿಜೆಪಿ, 3 ಪಕ್ಷೇತರರು, ಕಾಂಗ್ರೆಸ್‌ನ ಓರ್ವ ಸದಸ್ಯರನ್ನು ಹೊಂದಿದೆ. ಮೀಸಲಾತಿ ಬಲದಿಂದ ಬಿಜೆಪಿ ಅಭ್ಯರ್ಥಿ ನಗರಸಭೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕೋರಂ ಕೊರತೆ ನೀಗಿಸಲು ಬಿಜೆಪಿಯಿಂದ ಆಪರೇಷನ್ ಕಮಲ ಮಾಡಿರುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇತ್ತೀಚಿಗಷ್ಟೇ ಹಾಸನ ನಗರಸಭೆಯೂ ಜೆಡಿಎಸ್​ ಕೈಬಿಟ್ಟಿತ್ತು ಇದೇ ಮೊದಲ ಬಾರಿಗೆ ಹಾಸನ ನಗರಸಭೆ ಬಿಜೆಪಿ ತೆಕ್ಕೆಗೆ ಒಲಿದಿದೆ. ಜೆಡಿಎಸ್ ಪಕ್ಷ ಬಹುಮತಕ್ಕೆ ಹತ್ತಿರವಿದ್ದರೂ ಅಧಿಕಾರದಿಂದ ವಂಚಿತವಾಗಿದೆ. 35 ಸದಸ್ಯ ಬಲದ ನಗರಸಭೆಯಲ್ಲಿ 17 ಸ್ಥಾನ ಗೆದ್ದಿದ್ದ ಜೆಡಿಎಸ್​ಗೆ ನಿರಾಸೆ ಮೂಡಿದ್ದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ. ಬಿಜೆಪಿ ನಗರಸಭೆ ಸದಸ್ಯರಾದ ಮೋಹನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇದ್ದಿದ್ದ ಕಾರಣ ಜೆಡಿಎಸ್​ ಕೈಯಿಂದ ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನ ಕೈಬಿಟ್ಟಿತ್ತು. ಆದರೆ ಜೆಡಿಎಸ್​ನಿಂದ ಆಯ್ಕೆಯಾಗಿದ್ದ ನಗರಸಭೆ ಸದಸ್ಯರು ಉಪಾಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಇದ್ದ ಕಾರಣದಿಂದಲೇ ಅರ್ಜಿ ಸಲ್ಲಿಸಲಿಲ್ಲ. ಹೀಗಾಗಿ ಉಪಾಧ್ಯಕ್ಷ ಸ್ಥಾನವೂ ಜೆಡಿಎಸ್​ ಕೈಬಿಟ್ಟಿದೆ. ಶಾಸಕ‌ ಪ್ರೀತಂಗೌಡ ಸಮ್ಮುಖದಲ್ಲಿ ಮೋಹನ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ. ಕೇವಲ 13 ಸ್ಥಾನ ಗೆದ್ದರೂ ಮೀಸಲಾತಿ ನೆರವಿನಿಂದ ಬಿಜೆಪಿ ಇದೇ ಮೊದಲ ಬಾರಿಗೆ ಹಾಸನ ನಗರಸಭೆಯಲ್ಲಿ ಅಧಿಕಾರ ಪಡೆದಿದೆ.

ಇದನ್ನೂ ಓದಿ: ದಾವಣಗೆರೆಯಲ್ಲಿ ಒಂದು ಮಗುವಿಗೆ MIS-C ಸೋಂಕಿನ ಲಕ್ಷಣ ಪತ್ತೆ; ಜಿಲ್ಲಾಧಿಕಾರಿಯಿಂದ ಅಧಿಕೃತ ಮಾಹಿತಿ

ಕೊವಿಡ್ 2ನೇ ಅಲೆಯಲ್ಲಿ ಮಾಸ್ಕ್ ಹಾಕದವರಿಂದ ಬೆಂಗಳೂರು ನಗರದಲ್ಲಿ 4,54,69,677 ರೂ. ದಂಡ ವಸೂಲಿ, 43,206 ದ್ವಿಚಕ್ರ ವಾಹನ ಸೀಜ್

(Arsikere municipality JDS members supports BJP president likely to operation Kamala)

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ