AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದನಿಂದಲೇ ಲೈಂಗಿಕ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್​ವುಡ್​ ನಟಿಯ ಸಂಬಂಧಿ

ಸ್ಯಾಂಡಲ್​ವುಡ್​ ನಟಿಯ ಸಂಬಂಧಿ ಪ್ರೀತಿಸಿದವನ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ನ.22 ರಂದು ಬೆಂಗಳೂರಿನ ಪಾಂಡುರಂಗ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತ ಯುವತಿ ತಂದೆ ದೂರಿನ ಮೇರೆಗೆ ಯುವಕ ಮತ್ತು ಆತನ ತಾಯಿ ವಿರುದ್ಧ ಎಫ್​ಐಆರ್ ದಾಖಲಾಗಿದೆ. ​

ಪ್ರೀತಿಸಿದನಿಂದಲೇ ಲೈಂಗಿಕ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್​ವುಡ್​ ನಟಿಯ ಸಂಬಂಧಿ
ಪ್ರೀತಿಸಿದನಿಂದಲೇ ಲೈಂಗಿಕ ಕಿರುಕುಳ: ಆತ್ಮಹತ್ಯೆ ಮಾಡಿಕೊಂಡ ಸ್ಯಾಂಡಲ್​ವುಡ್​ ನಟಿಯ ಸಂಬಂಧಿ
ಮಂಜುನಾಥ ಕೆಬಿ
| Updated By: ಭಾವನಾ ಹೆಗಡೆ|

Updated on:Nov 30, 2025 | 3:50 PM

Share

ಹಾಸನ, ನವೆಂಬರ್ 30: ನಟಿ ಆಶಿಕಾ ರಂಗನಾಥ್ ಸಂಬಂಧಿಯಾದ ಹಾಸನ (Hassan) ಮೂಲದ ಯುವತಿ ಬೆಂಗಳೂರಿನ ಪಾಂಡುರಂಗ ನಗರದಲ್ಲಿರುವ ಸಂಬಂಧಿಕರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇದೀಗ ಬೆಳಕಿಗೆ ಬಂದಿದೆ. ಘಟನೆ ನಡೆದು 10 ದಿನವಾಗಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಆಕೆಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಯುವತಿ ಪ್ರೀತಿಸಿದವನ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ಸಹಿಸಲಾಗದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ.

ಲೈಂಗಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದ ಪ್ರೇಮಿ

ಅಚಲ (22) ನಟಿ ಆಶಿಕಾ ರಂಗನಾಥ್ ಅವರ ಮಾವನ ಮಗಳಾಗಿದ್ದು, ಇಂಜಿನಿಯರಿಂಗ್ ಮುಗಿಸಿ ಕೆಲಸಕ್ಕೆ ಸೇರುವ ಹಂತದಲ್ಲಿದ್ದರು.ಆಕೆ ತನ್ನ ದೂರದ ಸಂಬಂಧಿ ಮಯಾಂಕ್ ಜೊತೆ ಸ್ನೇಹ ಬೆಳೆಸಿಕೊಂಡಿದ್ದರು. ಆತನೂ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕಕ್ಕೆ ಪೀಡಿಸಿದ್ದು, ಇದಕ್ಕೊಪ್ಪದ ಆಕೆಯ ಮೇಲೆ ಮಯಾಂಕ್ ದೈಹಿಕ ಹಲ್ಲೆ, ಮಾನಸಿಕ ಕಿರುಕುಳ ನೀಡುತ್ತಿದ್ದ. ಪದೇಪದೆ ಫೋನ್ ಮಾಡಿ ಬೆದರಿಸುತ್ತಿದ್ದ ಎಂದು ಅಚಲ ಕುಟುಂಬಸ್ಥರು ಆರೋಪಿಸಿದ್ದಾರೆ.

ಡ್ರಗ್ ಅಡಿಕ್ಟ್ ಆಗಿರುವ ಮಯಾಂಕ್‌ನಿಂದ ನಿರಂತರ ಹಿಂಸೆ ಎದುರಿಸುತ್ತಿದ್ದ ಆಕೆ, ಆತ ಮತ್ತೊಂದು ಯುವತಿಯೊಂದಿಗೆ ಸಂಬಂಧ ಹೊಂದಿದ್ದ ವಿಚಾರ ತಿಳಿದು ಮಾನಸಿಕವಾಗಿ ಕುಗ್ಗಿದ್ದರು. ಈ ಎಲ್ಲಾ ಸಮಸ್ಯೆಗಳಿಗೆ ಬೇಸತ್ತ ಅಚಲ ನೇಣಿಗೆ ಶರಣಾಗಿದ್ದಾರೆ ಎಂದು ಆಕೆಯ ಪಾಲಕರು ಹೇಳಿದ್ದಾರೆ. ಈ ಘಟನೆಯ ಸಂಬಂಧ ಹಾಸನದ ಮಯಾಂಕ್ ಹಾಗೂ ಅವನ ತಾಯಿ ಮೈನಾ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಅಚಲ ಪೋಷಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ, ಮಗ ಸಾವು

ನಿನ್ನ ಬಿಟ್ಟು ಬದುಕಲು ಸಾಧ್ಯವಿಲ್ಲ ಎಂದು ಮೆಸೇಜ್ ಮಾಡಿದ್ದ ಅಚಲ

ಪ್ರೇಮಿ ಮಯಾಂಕ್ ತನ್ನನ್ನು ಮೋಸ ಮಾಡಿದ್ದಾನೆಂಬ ಶಂಕೆ ದೃಢಪಟ್ಟ ನಂತರ ಆತನಿಗೆ ಮೆಸೇಜ್ ಮಾಡಿದ್ದ ಅಚಲ, ಜೀವನದಲ್ಲಿ ನಿನ್ನ ಬಿಟ್ಟು ನನಗೆ ಬದುಕಲು ಸಾಧ್ಯವಿಲ್ಲ. ನೀನು ನನಗೆ ಮೋಸ ಮಾಡಿದರೂ ನಿನ್ನನ್ನು ಮರೆಯಲು ಆಗುತ್ತಿಲ್ಲ. ನನ್ನ ಕನಸುಗಳನ್ನು ನೀನು ನುಚ್ಚು ನೂರು ಮಾಡಿದ್ದೀಯ. ನನಗೆ ನೀನು ಮೋಸ ಮಾಡಿಲ್ಲವಾದರೆ ರಾಘವೇಂದ್ರ ಸ್ವಾಮಿ ಮೇಲೆ ಆಣೆ ಮಾಡು. ನೀನು ಮಾಡಿದ ಮೋಸಕ್ಕೆ ತಕ್ಕ ಬೆಲೆ ಕಟ್ಟಲೇ ಬೇಕು ಎಂದು ತನ್ನ ನೋವನ್ನು ಎಳೆ ಎಳೆಯಾಗಿ ವ್ಯಕ್ತಪಡಿಸಿದ್ದರು. ಇಷ್ಟೇ ಅಲ್ಲದೇ ತನ್ನ ನಂಬರ್ ಬ್ಕಾಕ್ ಮಾಡಬೇಡ ಎಂದೂ ಮಯಾಂಕ್​ ಬಳಿ ಬೇಡಿಕೊಂಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:01 pm, Sun, 30 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ