AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಬೇಲೂರು ಶಾಸಕ ಸುರೇಶ್​ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪ, ಜನರ ಆಕ್ರೋಶ

ಬೇಲೂರು ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ದಿಂದ ಗ್ರಾಮದ ಶಿವಣ್ಣ ಎಂಬಾತ ಮೃತಪಟ್ಟಿದ್ದಾರೆ ಎಂದು ಆರೋಪಿಸಿ, ಹೆಬ್ಬಾಳು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಬಂದ ಬೇಲೂರು ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ಅವರು ವೈದ್ಯರ ನಿರ್ಲಕ್ಷ್ಯ ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ

ವೈದ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುವ ಭರದಲ್ಲಿ ಬೇಲೂರು ಶಾಸಕ ಸುರೇಶ್​ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪ, ಜನರ ಆಕ್ರೋಶ
ಬೇಲೂರು ಶಾಸಕ ಸುರೇಶ್​ರಿಂದ ಆಕ್ಷೇಪಾರ್ಹ ಪದ ಬಳಕೆ ಆರೋಪ
ಮಂಜುನಾಥ ಕೆಬಿ
| Edited By: |

Updated on: Sep 21, 2023 | 12:27 PM

Share

ಹಾಸನ, ಸೆಪ್ಟೆಂಬರ್​​ 21: ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಚ್.ಕೆ.ಸುರೇಶ್ ವಿರುದ್ಧ (Belur BJP MLA HK Suresh) ಆಕ್ಷೇಪಾರ್ಹ ಪದ ಬಳಕೆ (Abusive Language) ಆರೋಪ ಕೇಳಿಬಂದಿದೆ. ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಳ್ಳೋ ಭರದಲ್ಲಿ ಸವಿತಾ ಸಮಾಜದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಇದಾಗಿದೆ. ಶಾಸಕ ಸುರೇಶ್ ಹಾಸನ ಜಿಲ್ಲಾ ವೈದ್ಯಾಧಿಕಾರಿ (ಡಿಎಚ್ಓ -DHO) ಜೊತೆ ಮಾತನಾಡುವಾಗ ಬಳಸಿದ ಆಕ್ಷೇಪಾರ್ಹ ಪದ ಬಳಕೆಯ ವೀಡಿಯೋ ಇದೀಗ ವೈರಲ್ ಆಗಿದೆ.

ಸೆಪ್ಟೆಂಬರ್ 18 ರ ಸೋಮವಾರ ಬೇಲೂರು ಆಸ್ಪತ್ರೆ ಎದುರು ಹೆಬ್ಬಾಳು ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರು. ವೈದ್ಯರ ನಿರ್ಲಕ್ಷ್ಯ ದಿಂದ ಹೆಬ್ಬಾಳು ಗ್ರಾಮದ ಶಿವಣ್ಣ(63) ಮೃತಪಟ್ಟಿದ್ದಾರೆ ಎಂದು ಆರೋಪಿಸಿ, ಆ ಪ್ರತಿಭಟನೆ ನಡೆದಿತ್ತು.

Also Read: ಬಾಗಲಕೋಟೆ: ಜಿಲ್ಲಾ ವೈದ್ಯಾಧಿಕಾರಿ ಖುರ್ಚಿ‌ಗಾಗಿ ಮತ್ತೆ ಕಿತ್ತಾಟ -ಅಳಿಯನ ಮೇಲೆ ಮತ್ತೊಮ್ಮೆ ಪ್ರೀತಿ ತೋರಿದರಾ ಹೆಚ್ ವೈ ಮೇಟಿ?

ಪ್ರತಿಭಟನೆ ವೇಳೆ ಸ್ಥಳಕ್ಕೆ ಬಂದ ಬೇಲೂರು ಬಿಜೆಪಿ ಶಾಸಕ ಎಚ್.ಕೆ. ಸುರೇಶ್ ಅವರು ವೈದ್ಯರ ನಿರ್ಲಕ್ಷ್ಯ ದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ, ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಶಾಸಕ ಸುರೇಶ್ ಮಾತಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಶಾಸಕರ ಮಾತಿನ ಬಗ್ಗೆ ಸಮುದಾಯದವರು ಅಸಮಾಧಾನ ಹೊರ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು