AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳ್ಳಕ್ಕೆ ಬಿದ್ದ ಟೂರಿಸ್ಟ್ ಬಸ್: ಓರ್ವ ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ

ಪ್ರವಾಸಕ್ಕೆ ಹೋಗಿದ್ದ ಬೆಂಗಳೂರು ಮೂಲದ ಜನರಿದ್ದ ಖಾಸಗಿ ಬಸ್​ವೊಂದು ಹಾಸನದ ಬೇಲೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಿ ಬಿದ್ದಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.

ಹಳ್ಳಕ್ಕೆ ಬಿದ್ದ ಟೂರಿಸ್ಟ್ ಬಸ್:  ಓರ್ವ ಮಹಿಳೆ ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ|

Updated on:Nov 04, 2023 | 8:38 AM

Share

ಹಾಸನ, (ನವೆಂಬರ್ 04): ಬೆಂಗಳೂರಿನಿಂದ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್ (private  Bus) ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಪರಿಣಾಮ ಸ್ಥಳದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಕೆ.ಆರ್.ಪುರಂನ ಸುರೇಖಾ (45) ಮೃತ ಮಹಿಳೆ. ಇನ್ನು ಗಾಯಗೊಂಡವರಲ್ಲಿ ಏಳು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 48ಕ್ಕೂ ಹೆಚ್ಚು ಪ್ರವಾಸಿಗರು ಬಸ್ಸಿನಲ್ಲಿದ್ದು, ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿತ್ತು. ಆದ್ರೆ, ಇಂದು (ನವೆಂಬರ್ 04) ಬೆಳಗಿನ ಜಾವ 4:45 ಸಮಯದಲ್ಲಿ ಹಳ್ಳಕ್ಕೆ ಬಿದ್ದಿದೆ.

ಬೆಂಗಳೂರಿನ ರಾಜನಗುಂಟೆಯಿಂದ 25 ಮಂದಿ ಹಾಗೂ ಕೆ.ಆರ್.ಪುರಂನಿಂದ 25 ಮಂದಿ ಸೇರಿಕೊಂಡು ಖಾಸಗಿ ಬಸ್​ನಲ್ಲಿ ಪ್ರವಾಸಕ್ಕೆ ಹೋಗಿದ್ದರು. ಧರ್ಮಸ್ಥಳ, ಸುಬ್ರಹ್ಮಣ್ಯ, ಶೃಂಗೇರಿಗೆ ಪ್ರವಾಸಕ್ಕೆ ಹೊರಟ್ಟಿದ್ದಾಗ ಬೇಲೂರು ತಾಲ್ಲೂಕಿನ ಕಸ್ಕೆ ಬಯಲು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಸದ್ಯ ಗಾಯಾಳುಗಳನ್ನು ಬೇಲೂರು ತಾಲ್ಲೂಕು ಆಸ್ಪತ್ರೆ ಹಾಗೂ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಬೇಲೂರು ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.

ಇದೇ ಜಾಗದಲ್ಲಿ 70ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ. ಇದರಿಂದ ಹಳಕ್ಕೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಹತ್ತಾರು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಸಹ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತಲೇ ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:34 am, Sat, 4 November 23

ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
Video: ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ ಕಾರು ಚಲಾಯಿಸಿದ ವ್ಯಕ್ತಿ
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
ಇಡೀ ಕುಟುಂಬವನ್ನು ಕಳೆದುಕೊಂಡು ಅನಾಥವಾದ 11ತಿಂಗಳ ಮಗು
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
‘ಗೋಲಿ ಚಲ್ ಜಾವೇಗಿ’ ಹಾಡಿಗೆ ನೃತ್ಯ ಮಾಡುತ್ತಲೇ ಗುಂಡು ಹಾರಿಸಿದ ವ್ಯಕ್ತಿ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ರಶ್ಮಿಕಾ ಮಂದಣ್ಣ ತಪ್ಪು ಮಾತಾಡಿದ್ದಾರೆ, ಕ್ಷಮಿಸಿ ಬಿಡೋಣ: ನಟಿ ಹರ್ಷಿಕಾ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ
ಭೀಕರ ಅಪಘಾತ: ಡಿಕ್ಕಿ ರಭಸಕ್ಕೆ ಎರಡು ಪೀಸ್ ಆದ ಟೆಂಪೊ, EXCLUSIVE ದೃಶ್ಯ