AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜೆಡಿಎಸ್​ ನನ್ನ ನೈಜ ಎದುರಾಳಿ ಎಂದ ಬಿಜೆಪಿ ಶಾಸಕ ಪ್ರೀತಂಗೌಡ

ಕ್ಷೇತ್ರದಲ್ಲಿ ಬಿಜೆಪಿ ಒಂದು ಲಕ್ಷ ಮತ ಪಡೆಯುವುದು ನಿಶ್ಚಿತ. ಜೆಡಿಎಸ್​​ ಅಭ್ಯರ್ಥಿ ಸ್ವರೂಪ್​ ಎರಡನೇ ಸ್ಥಾನಕ್ಕಾಗಿ ಫೈಟ್​ ಮಾಡಲಿ ಎಂದು ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂಗೌಡ (Preethamgowda) ಹೇಳಿದ್ದಾರೆ.

ಹಾಸನ: ಜೆಡಿಎಸ್​ ನನ್ನ ನೈಜ ಎದುರಾಳಿ ಎಂದ ಬಿಜೆಪಿ ಶಾಸಕ ಪ್ರೀತಂಗೌಡ
ಬಿಜೆಪಿ ಶಾಸಕ ಪ್ರೀತಂ ಗೌಡ
ಕಿರಣ್ ಹನುಮಂತ್​ ಮಾದಾರ್
|

Updated on: Apr 15, 2023 | 10:43 AM

Share

ಹಾಸನ: ‘ಕ್ಷೇತ್ರದಲ್ಲಿ ಬಿಜೆಪಿ ಒಂದು ಲಕ್ಷ ಮತ ಪಡೆಯುವುದು ನಿಶ್ಚಿತ. ಜೆಡಿಎಸ್​​ ಅಭ್ಯರ್ಥಿ ಸ್ವರೂಪ್​ ಎರಡನೇ ಸ್ಥಾನಕ್ಕಾಗಿ ಫೈಟ್​ ಮಾಡಲಿ ಎಂದು ಹಾಸನ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ (Preetham gowda) ಹೇಳಿದ್ದಾರೆ. ನಿನ್ನೆ ಹಾಸನ ಜನರು ನನ್ನ ಎದುರಾಳಿಗಳಿಗೆ ಸಂದೇಶ ಕೊಟ್ಟಿದ್ದಾರೆ. ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿಯಿಂದ ಕೂಡ ಅಭ್ಯರ್ಥಿ ಇರುತ್ತಾರೆ. ಆದರೆ ಜೆಡಿಎಸ್​ ನನ್ನ ನೈಜ ಎದುರಾಳಿ, ಉಳಿದ ಮೂರು ಪಕ್ಷಗಳು 2ನೇ ಸ್ಥಾನಕ್ಕೆ ಹೋರಾಟ ಮಾಡುತ್ತವೆ ಎಂದಿದ್ದಾರೆ.

ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಹಾಸನ ಲೂಟಿಯಾಗಿದೆ ಎಂಬ H​​.D.ರೇವಣ್ಣ ಹೇಳಿಕೆ ವಿಚಾರ ಕುರಿತು ಮಾತನಾಡಿದ ಪ್ರೀತಂಗೌಡ ಅವರು ‘ ಹೌದು ನಾನು ಕ್ಷೇತ್ರದ ಜನರ ಪ್ರೀತಿಯನ್ನು ಲೂಟಿ ಮಾಡಿದ್ದೇನೆ. ಜನರ ಪ್ರೀತಿ ಲೂಟಿ ಮಾಡಿದ್ದಕ್ಕೆ ನಿನ್ನೆ ಅಷ್ಟೊಂದು ಜನ ಸೇರಿದ್ದು. ಸ್ವರೂಪ್​​ ಟಿಕೆಟ್​ ಪಡೆಯುವುದಕ್ಕೆ ಎಷ್ಟೊಂದು ಪರದಾಡಿದರು. ಇನ್ನು ಅವರು ಏನು ಕೆಲಸ ಮಾಡುತ್ತಾರೆ ಎಂದು ಜನ ಯೋಚನೆ ಮಾಡುತ್ತಾರೆ. ಒಂದು ಪತ್ರ ಕೊಡುವುದಕ್ಕೂ ಹೊಳೆನರಸೀಪುರದ ಅನುಮತಿ ಬೇಕು. ಹಾಗಾಗಿ ಹಾಸನದ ಜನರು ಕೆಲಸಗಾರನಿಗೆ ಅವಕಾಶ ಕೊಡುತ್ತಾರೆ ಎಂದು ರೇವಣ್ಣಗೆ ಟಾಂಗ್​ ನೀಡಿದ್ದಾರೆ.

ಇದನ್ನೂ ಓದಿ:S Angara: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ, ಭಾಗೀರಥಿ ಮುರುಳ್ಯ ಪರ ಪ್ರಚಾರ ಮಾಡುವೆ

ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟಿದ್ದೇವೆ ಎಂಬ ದಳಪತಿಗಳ ಹೇಳಿಕೆಗೆ ತಿರುಗೇಟು

ಸ್ವರೂಪ್ ಅವರ ತಂದೆ ನಗರಸಭೆ ಅಧ್ಯಕ್ಷರಾಗಿ, ಆರು ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಆಗಿದ್ದರು, 40 ವರ್ಷ ಆಕ್ಟೀವ್ ರಾಜಕೀಯದಲ್ಲಿ ಇದ್ದವರು. ಎನ್ನುವ ಮೂಲಕ ದಳಪತಿಗಳ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾನು ಮಾಡಿದ ಕೆಲಸ ಏನೆಂದು ನಿನ್ನೆ ಜನರು ಉತ್ತರ ಕೊಟ್ಟಿದಾರೆ. ನಾನು ಯಾರಿಗು ಸಂದೇಶ ಕೊಟ್ಟಿಲ್ಲ. ಜನರೇ ನನ್ನ ಎದುರಾಳಿಗಳಿಗೆ ಸಂದೇಶ ಕೊಟ್ಟಿದ್ದಾರೆ ಎಂದರು.

ರೇವಣ್ಣ ಸ್ಪರ್ಧೆ ಮಾಡಿದ್ರೆ ಐವತ್ತು ಸಾವಿರ ಮತಗಳ ಅಂತರದಲ್ಲಿ ಗೆಲುವು

ರೇವಣ್ಣ ಸ್ಪರ್ಧೆ ಮಾಡಿದ್ರೆ ಐವತ್ತು ಸಾವಿರ ಮತಗಳ ಅಂತರದಲ್ಲಿ ಗೆಲುವು ಎಂಬ ಸವಾಲು ವಿಚಾರ ‘ಅವರು ಈಗ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಹಾಗಾಗಿ ಇದು ಈಗ ಅಪ್ರಸ್ತುತ. ‘ಯಾರೇ ಅಭ್ಯರ್ಥಿಯಾದರೂ ಒಂದು ಲಕ್ಷ ಓಟು ಪಡೆದುಕೊಳ್ಳಬೇಕು ಎಂದು ಕಾರ್ಯಕರ್ತರು ನಿರ್ಧರಿಸಿದ್ದಾರೆ. ‘ಹದಿನೆಂಟು ತಿಂಗಳ ಹಿಂದೆ ಸವಾಲು ಹಾಕಿದ್ದೆ. ಆಗ ಯಾರು ಉತ್ತರ ಕೊಡಬೇಕು ಕೊಟ್ಟರೆ ಅದಕ್ಕೆ ಮಾನ್ಯತೆ ಇರುತ್ತಿತ್ತು. ಈಗ ಅವರು ಮಾತನಾಡಿದರೆ ನಾನು ಚರ್ಚೆ ಮಾಡುತ್ತೇನೆ. ಐವತ್ತು ಸಾವಿರ ಮತಗಳ ಲೀಡ್‌ಗೆ ಈಗಲೂ ಬದ್ದ, ಮುಂದಿನ ಚುನಾವಣೆಗೂ ಅವಕಾಶ ಕೋಡುತ್ತೇನೆ ಎಂದಿದ್ದರು.

ಇನ್ನಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!