AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ ದಾಖಲು

ಮೂಡಿಗೆರೆ ತಾಲೂಕಿನ ಬಿಜೆಪಿ ಯುವಮೋರ್ಚಾ ಸ್ಥಳೀಯ ಘಟಕದ ಅಧ್ಯಕ್ಷ ಅವಿನಾಶ್ ಅವರು ಸಕಲೇಶಪುರ ಪೊಲೀಸರ ವಿರುದ್ಧ ಆರೋಪ ಮಾಡಿದ್ದಾರೆ. ಯಾವುದೇ ಆಧಾರವಿಲ್ಲದೆ ನನ್ನನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದಿದ್ದಾರೆ.

ಬಿಜೆಪಿ ಯುವಮೋರ್ಚಾ ಅಧ್ಯಕ್ಷನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ ದಾಖಲು
ಅವಿನಾಶ್
TV9 Web
| Edited By: ಆಯೇಷಾ ಬಾನು|

Updated on: Jul 03, 2023 | 3:29 PM

Share

ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಮೇಲೆ ಸಕಲೇಶಪುರ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರಿಂದ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಿಂದ ಠಾಣೆಗೆ ಕರೆದೊಯ್ದು ಚಿತ್ರ ಹಿಂಸೆ ನೀಡಿ ಹಲ್ಲೆ ಮಾಡಿದ್ದಾರೆ ಎಂದು ಅವಿನಾಶ್ ಆರೋಪ ಮಾಡಿದ್ದಾರೆ.

ಬಜರಂಗದಳದ ಮಾಜಿ ಸಂಚಾಲಕ ರಘು ಸಕಲೇಶಪುರನೊಂದಿಗೆ ಸಂಪರ್ಕ ಹಿನ್ನೆಲೆ ಅವಿನಾಶ್​ನನ್ನ ವಿಚಾರಣೆಗಾಗಿ ಯಾವುದೇ ವಾರಂಟ್ ಅಥವಾ ನೋಟಿಸ್ ನೀಡದೆ ಸಕಲೇಶಪುರ ಪೊಲೀಸರು ಠಾಣೆಗೆ ಕರೆದೊಯ್ದಿದ್ದರು. ಜನ್ನಾಪುರದ ಮನೆಯಿಂದ ಸಕಲೇಶಪುರ ಠಾಣೆಗೆ ಕರೆದುಕೊಂಡು ಹೋಗಿ ಅವಿನಾಶ್ ಕಾಲು, ಕಿವಿ, ಮುಖದ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಅವಿನಾಶ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಇದಕಿಂತ ದುರಂತ ಮತ್ತೊಂದಿಲ್ಲ, ವೀಕ್ಷಿಸಿ: ರೈಲಿನಲ್ಲಿ ಎರಡು ಬೋಗಿಗಳ ಜಾಯಿಂಟ್ ಮೇಲೆ ಮಗುವಿನೊಂದಿಗೆ ಕುಳಿತು ಮಹಿಳೆ ಅಪಾಯಕಾರಿ ಪ್ರಯಾಣ

ಸುಮಾರು 10-15 ಪೊಲೀಸರು ನನ್ನನ್ನು ನನ್ನ ಮನೆಯಿಂದ ಬಂಧಿಸಿ, ನನ್ನನ್ನು ಮೂಡಿಗೆರೆಗೆ ಕರೆದೊಯ್ದರು. ನಂತರ ಸಕಲೇಶಪುರಕ್ಕೆ ಕರೆದೊಯ್ದರು. ರಘು ಬಗ್ಗೆ ನನ್ನ ಬಳಿ ವಿಚಾರಿಸಿದರು.  ಆಗ ನಾನು ರಘು ಬಗ್ಗೆ ನನಗೆ ಗೊತ್ತು. ಆದ್ರೆ ಈಗ ನನಗೆ ಅವನೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದೆ. ಅವರು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇದ್ದರು. ರಘು ಅವರು ನನಗೆ ಕರೆ ಮಾಡಿ ಧರ್ಮಸ್ಥಳಕ್ಕೆ ಹೋಗುವುದಾಗಿ ಹೇಳಿದ್ದರು ಎಂದು ನಾನು ಹೇಳಿದೆ ಎಂದು ಹಲ್ಲೆಗೊಳಗಾದ ಅವಿನಾಶ್ ತಿಳಿಸಿದ್ದಾರೆ.  ಇನ್ನು ಗಾಯಗೊಂಡ ಅವಿನಾಶ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಹಲ್ಲೆ ಖಂಡಿಸಿ ಬಿಜೆಪಿ, ಬಜರಂಗದಳ ಬೃಹತ್ ಪ್ರತಿಭಟನೆ ನಡೆಸುತ್ತಿದೆ.

ಸಕಲೇಶಪುರ DYSP ಮಿಥುನ್ ಅಮಾನತಿಗೆ ಆಗ್ರಹಿಸಿ ಮೂಡಿಗೆರೆ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ವಿವಾದಾತ್ಮಕ ಹೇಳಿಕೆ ಸಂಬಂಧ ರಘು ಸಕಲೇಶಪುರ ಮೇಲೆ ಪ್ರಕಾರ ದಾಖಲು ಮಾಡಿದ್ದ ಹಾಸನ ಪೊಲೀಸರು ಈ ವಿಚಾರಕ್ಕೆ ಸಂಬಂಧಿಸಿ ಅವಿನಾಶ್​ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು.

ಚಿಕ್ಕಮಗಳೂರು ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು