AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಾಲಕ ಸಾವು: ಲಕ್ಷಾಂತರ ರೂ. ಮೌಲ್ಯದ ಗುಲಾಬಿ, ಟೊಮ್ಯಾಟೊ ನಾಶ

ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಗುಲಾಬಿ ತೋಟ ನೀರಿನಲ್ಲಿ ಮುಳುಗಡೆಯಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯನಗರ ಬಳಿ ಕಂಡು ಬಂದಿದೆ.

ಹಾಸನ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಾಲಕ ಸಾವು: ಲಕ್ಷಾಂತರ ರೂ. ಮೌಲ್ಯದ ಗುಲಾಬಿ, ಟೊಮ್ಯಾಟೊ ನಾಶ
ಮಳೆಯಿಂದಾಗಿ ಗೋಡೆ ಕುಸಿದಿರುವುದು, ಗುಲಾಗಿ ತೋಟ ನಾಶವಾಗಿರುವುದು.
TV9 Web
| Edited By: |

Updated on:Aug 05, 2022 | 11:21 AM

Share

ಹಾಸನ: ಮಳೆಯಿಂದಾಗಿ ಮನೆ ಗೋಡೆ (wall) ಕುಸಿದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಭುವನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್(13) ಮೃತ ಬಾಲಕ. ನೆನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಅವಾಂತರ ನಡೆದಿದ್ದು, ಗ್ರಾಮದ ತನ್ಮ ಮನೆಯಿಂದ ತಾತನ ಮನೆಯಲ್ಲಿ ಬಾಲಕ ಬಂದು ಮಲಗಿದ್ದು, ಬೆಳಗಿನ ಜಾವ ಏಕಾ ಏಕಿ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮನೆಯಲ್ಲಿದ್ದ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅದಿಕಾರಿಗಳ ಭೇಟಿ ನೀಡಿ, ಪರಿಶೀಲನೆ ಮಾಡಿದರು. ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ನಿರಂತರ ಮಳೆಯಿಂದಾಗಿ ಗುಲಾಬಿ ತೋಟ ಜಲಾವೃತ

ಕೋಲಾರ: ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಗುಲಾಬಿ ತೋಟ ನೀರಿನಲ್ಲಿ ಮುಳುಗಡೆಯಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯನಗರ ಬಳಿ ಕಂಡು ಬಂದಿದೆ. ರಮೇಶ್ ಎಂಬುವರ ಗುಲಾಬಿ ತೋಟ, ನೀರಿನಲ್ಲಿ ಮುಳುಗಡೆಯಾಗಿ ಭಾರೀ ನಷ್ಟ ಆಗಿದೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಭಾರೀ ಲಾಭದ ನಿರೀಕ್ಷೆಯಲ್ಲಿದ್ದ ರೈತ, ಮುಳುಗಡೆಯಿಂದಾಗಿ ಲಕ್ಷಾಂತರ ರೂಪಾಯಿ ಹೂವಿನ ತೋಟ ನಾಶವಾಗಿದೆ. ಅದೇ ರೀತಿಯಾಗಿ  ಆರೋಹಳ್ಳಿಯಲ್ಲಿ ಕಳೆದ 4-5 ದಿನಗಳಿಂದ ಭಾರಿ ಮಳೆಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ಟೊಮ್ಯಾಟೊ ಬೆಳೆ ಹಾನಿ ಯಾಗಿದೆ. ಭಾರಿ ಮಳೆಯಿಂದಾಗಿ ತೋಟದಲ್ಲೇ‌ ಟೊಮ್ಯಾಟೊ ಕೊಳೆಯುತ್ತಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತ ಪರಿಹಾರ ಆಗ್ರಹಿಸಿದರು.

ರಣಮಳೆಗೆ ಅಪಾರ ಹಾನಿ

ಗದಗ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಆ. 1ರಿಂದ 4ರವರೆಗೆ 136 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ನಾಲ್ಕು ದಿನಗಳಲ್ಲಿ ಮಳೆಗೆ 87.3 ಹೆಕ್ಟೇರ್​ ಬೆಳೆ ಹಾನಿಯಾಗಿದ್ದು, ಮಳೆಯಿಂದಾಗಿ ಹೆಸರು, ಗೋವಿನಜೋಳ, ಶೇಂಗಾ, ಸೂರ್ಯಕಾಂತಿ ಸೇರಿದಂತೆ 76,657 ಹೆಕ್ಟೇರ್ ತೋಟಗಾರಿಕಾ ಬೆಳೆ, 13.96 ಕಿ.ಮೀ ರಸ್ತೆಗಳು ಮತ್ತು 20 ಸೇತುವೆಗಳು ಹಾನಿಯಾಗಿವೆ.

ಮಳೆಯ ಅಬ್ಬರಕ್ಕೆ ತುಂಬಿ ಹರಿಯುತ್ತಿರುವ ಜಲಾಶಯ

ತುಮಕೂರು: ಮಳೆಯ ಅಬ್ಬರಕ್ಕೆ ಜಲಾಶಯ ಕೆರೆ ಕುಂಟೆಗಳು ತುಂಬಿ ತುಳುಕುತ್ತಿದ್ದು, ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಜಲಾಶಯ ತುಂಬಿ ಹರಿಯುತ್ತಿವೆ. ಜಿಲ್ಲೆಯ ಎರಡು ತಾಲೂಕಿಗೆ ಜೀವನಾಡಿಯಾಗಿರುವ ಕೊರಟಗೆರೆ ತಾಲೂಕಿನ ತೀತಾ ಜಲಾಶಯ ಅತಿ ರಭಸವಾಗಿ ಹರಿಯುತ್ತಿದೆ. ಆಂಧ್ರದವರೆಗೂ ಜಲಾಶಯ ನೀರು ಹರಿಯುತ್ತಿದ್ದು, ಒಂದೆಡೆ ರೈತರಲ್ಲಿ ಸಂತಸ, ಮತ್ತೊಂದು ಕಡೆ ಗ್ರಾಮಗಳು ಜಲಾವೃತ ಆಗುವ ಆತಂಕ ಎದುರಾಗಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು

ಚಿಕ್ಕಮಗಳೂರು: ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಯಾಗಿವೆ. ಭಾರಿ ಮಳೆಯಿಂದ ರಾತ್ರಿಯಿಡೀ ಜನರ ಪರದಾಡಿದ್ದು, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಎಲ್ಲೆಂದರಲ್ಲಿ ನೀರು ನುಗ್ಗಿದೆ. ಅಧಿಕಾರಿಗಳ ಸೂಚನೆ ಮೇರೆಗೆ ಮುಖ್ಯ ರಸ್ತೆಯನ್ನೇ ಜನರು ತುಂಡರಿಸಿದ್ದಾರೆ.

Published On - 11:06 am, Fri, 5 August 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ