AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಾಲಕ ಸಾವು: ಲಕ್ಷಾಂತರ ರೂ. ಮೌಲ್ಯದ ಗುಲಾಬಿ, ಟೊಮ್ಯಾಟೊ ನಾಶ

ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಗುಲಾಬಿ ತೋಟ ನೀರಿನಲ್ಲಿ ಮುಳುಗಡೆಯಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯನಗರ ಬಳಿ ಕಂಡು ಬಂದಿದೆ.

ಹಾಸನ: ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಾಲಕ ಸಾವು: ಲಕ್ಷಾಂತರ ರೂ. ಮೌಲ್ಯದ ಗುಲಾಬಿ, ಟೊಮ್ಯಾಟೊ ನಾಶ
ಮಳೆಯಿಂದಾಗಿ ಗೋಡೆ ಕುಸಿದಿರುವುದು, ಗುಲಾಗಿ ತೋಟ ನಾಶವಾಗಿರುವುದು.
TV9 Web
| Edited By: |

Updated on:Aug 05, 2022 | 11:21 AM

Share

ಹಾಸನ: ಮಳೆಯಿಂದಾಗಿ ಮನೆ ಗೋಡೆ (wall) ಕುಸಿದು ಬಾಲಕ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಭುವನಹಳ್ಳಿಯಲ್ಲಿ ನಡೆದಿದೆ. ಪ್ರಜ್ವಲ್(13) ಮೃತ ಬಾಲಕ. ನೆನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಅವಾಂತರ ನಡೆದಿದ್ದು, ಗ್ರಾಮದ ತನ್ಮ ಮನೆಯಿಂದ ತಾತನ ಮನೆಯಲ್ಲಿ ಬಾಲಕ ಬಂದು ಮಲಗಿದ್ದು, ಬೆಳಗಿನ ಜಾವ ಏಕಾ ಏಕಿ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮನೆಯಲ್ಲಿದ್ದ ಮತ್ತೋರ್ವ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಂದಾಯ ಇಲಾಖೆ, ಪೊಲೀಸ್ ಇಲಾಖೆ ಅದಿಕಾರಿಗಳ ಭೇಟಿ ನೀಡಿ, ಪರಿಶೀಲನೆ ಮಾಡಿದರು. ನುಗ್ಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ನಿರಂತರ ಮಳೆಯಿಂದಾಗಿ ಗುಲಾಬಿ ತೋಟ ಜಲಾವೃತ

ಕೋಲಾರ: ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಗುಲಾಬಿ ತೋಟ ನೀರಿನಲ್ಲಿ ಮುಳುಗಡೆಯಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯನಗರ ಬಳಿ ಕಂಡು ಬಂದಿದೆ. ರಮೇಶ್ ಎಂಬುವರ ಗುಲಾಬಿ ತೋಟ, ನೀರಿನಲ್ಲಿ ಮುಳುಗಡೆಯಾಗಿ ಭಾರೀ ನಷ್ಟ ಆಗಿದೆ. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ಭಾರೀ ಲಾಭದ ನಿರೀಕ್ಷೆಯಲ್ಲಿದ್ದ ರೈತ, ಮುಳುಗಡೆಯಿಂದಾಗಿ ಲಕ್ಷಾಂತರ ರೂಪಾಯಿ ಹೂವಿನ ತೋಟ ನಾಶವಾಗಿದೆ. ಅದೇ ರೀತಿಯಾಗಿ  ಆರೋಹಳ್ಳಿಯಲ್ಲಿ ಕಳೆದ 4-5 ದಿನಗಳಿಂದ ಭಾರಿ ಮಳೆಯಿಂದಾಗಿ ಲಕ್ಷಾಂತರ ರೂ. ಮೌಲ್ಯದ ಟೊಮ್ಯಾಟೊ ಬೆಳೆ ಹಾನಿ ಯಾಗಿದೆ. ಭಾರಿ ಮಳೆಯಿಂದಾಗಿ ತೋಟದಲ್ಲೇ‌ ಟೊಮ್ಯಾಟೊ ಕೊಳೆಯುತ್ತಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ರೈತ ಪರಿಹಾರ ಆಗ್ರಹಿಸಿದರು.

ರಣಮಳೆಗೆ ಅಪಾರ ಹಾನಿ

ಗದಗ: ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು, ಆ. 1ರಿಂದ 4ರವರೆಗೆ 136 ಮನೆಗಳಿಗೆ ಭಾಗಶಃ ಹಾನಿಯಾಗಿವೆ. ನಾಲ್ಕು ದಿನಗಳಲ್ಲಿ ಮಳೆಗೆ 87.3 ಹೆಕ್ಟೇರ್​ ಬೆಳೆ ಹಾನಿಯಾಗಿದ್ದು, ಮಳೆಯಿಂದಾಗಿ ಹೆಸರು, ಗೋವಿನಜೋಳ, ಶೇಂಗಾ, ಸೂರ್ಯಕಾಂತಿ ಸೇರಿದಂತೆ 76,657 ಹೆಕ್ಟೇರ್ ತೋಟಗಾರಿಕಾ ಬೆಳೆ, 13.96 ಕಿ.ಮೀ ರಸ್ತೆಗಳು ಮತ್ತು 20 ಸೇತುವೆಗಳು ಹಾನಿಯಾಗಿವೆ.

ಮಳೆಯ ಅಬ್ಬರಕ್ಕೆ ತುಂಬಿ ಹರಿಯುತ್ತಿರುವ ಜಲಾಶಯ

ತುಮಕೂರು: ಮಳೆಯ ಅಬ್ಬರಕ್ಕೆ ಜಲಾಶಯ ಕೆರೆ ಕುಂಟೆಗಳು ತುಂಬಿ ತುಳುಕುತ್ತಿದ್ದು, ಒಂದೇ ವರ್ಷದಲ್ಲಿ ಎರಡನೇ ಬಾರಿಗೆ ಜಲಾಶಯ ತುಂಬಿ ಹರಿಯುತ್ತಿವೆ. ಜಿಲ್ಲೆಯ ಎರಡು ತಾಲೂಕಿಗೆ ಜೀವನಾಡಿಯಾಗಿರುವ ಕೊರಟಗೆರೆ ತಾಲೂಕಿನ ತೀತಾ ಜಲಾಶಯ ಅತಿ ರಭಸವಾಗಿ ಹರಿಯುತ್ತಿದೆ. ಆಂಧ್ರದವರೆಗೂ ಜಲಾಶಯ ನೀರು ಹರಿಯುತ್ತಿದ್ದು, ಒಂದೆಡೆ ರೈತರಲ್ಲಿ ಸಂತಸ, ಮತ್ತೊಂದು ಕಡೆ ಗ್ರಾಮಗಳು ಜಲಾವೃತ ಆಗುವ ಆತಂಕ ಎದುರಾಗಿದೆ.

ಮನೆಗಳಿಗೆ ನುಗ್ಗಿದ ಮಳೆ ನೀರು

ಚಿಕ್ಕಮಗಳೂರು: ಭಾರಿ ಮಳೆಯಿಂದ ಮನೆಗಳಿಗೆ ನೀರು ನುಗ್ಗಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ನಿಡುವಳ್ಳಿ ಗ್ರಾಮದಲ್ಲಿ ನಡೆದಿದೆ. ಸುಮಾರು ಹತ್ತಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ದಿಢೀರ್ ಮಳೆಯಿಂದಾಗಿ ಮನೆಯಲ್ಲಿದ್ದ ದವಸ ಧಾನ್ಯಗಳು ಹಾನಿಯಾಗಿವೆ. ಭಾರಿ ಮಳೆಯಿಂದ ರಾತ್ರಿಯಿಡೀ ಜನರ ಪರದಾಡಿದ್ದು, ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಎಲ್ಲೆಂದರಲ್ಲಿ ನೀರು ನುಗ್ಗಿದೆ. ಅಧಿಕಾರಿಗಳ ಸೂಚನೆ ಮೇರೆಗೆ ಮುಖ್ಯ ರಸ್ತೆಯನ್ನೇ ಜನರು ತುಂಡರಿಸಿದ್ದಾರೆ.

Published On - 11:06 am, Fri, 5 August 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ