AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಕೆಹೆಚ್​ ಮುನಿಯಪ್ಪ

ರಾಜ್ಯದಲ್ಲಿ ಬಿಪಿಲ್​​ ಕಾರ್ಡ್​​ಗಳನ್ನು ರದ್ದು ಮಾಡಲಾಗುತ್ತದೆ ಎಂದು ಊಹಾಪೋಹಗಳು ಎದ್ದಿದ್ದವು. ಇದಕ್ಕೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್​ ಮುನಿಯಪ್ಪ ತೆರೆ ಎಳೆದಿದ್ದು, ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದಿದ್ದಾರೆ.

ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಕೆಹೆಚ್​ ಮುನಿಯಪ್ಪ
ಸಚಿವ ಕೆಹೆಚ್​​ ಮುನಿಯಪ್ಪ
ಮಂಜುನಾಥ ಕೆಬಿ
| Edited By: |

Updated on: Aug 26, 2023 | 1:46 PM

Share

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಬಿಪಿಎಲ್ (BPL)​ ಕಾರ್ಡ್​ ರದ್ದು ಮಾಡುವುದಿಲ್ಲ. ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್​ ಮುನಿಯಪ್ಪ (KH Muniyappa) ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇನ್ನು ಮೂರು ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್​, ಎಪಿಎಲ್​​ ಕಾರ್ಡ್ ನೀಡಲಾಗುತ್ತೆ. ಬ್ಯಾಂಕ್ ಖಾತೆ ಇಲ್ಲದಿದ್ದಕ್ಕೆ ಕೆಲವರ ಕಾರ್ಡ್ ರದ್ದಾಗಿತ್ತು. ಈ ಬಗ್ಗೆಯೂ ಕೂಡ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ನಾಲ್ಕು ಚಕ್ರ ವಾಹನ ಇದ್ದರೆ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಮಾತನಾಡಿದ ಅವರು ಈ ನಿಯಮ ಬಿಜೆಪಿ ಸರ್ಕಾರದ ಅವದಿಯದ್ದು ಸದ್ಯಕ್ಕೆ ಈ ವಿಚಾರದಲ್ಲಿ ಯಾವುದೆ ತೀರ್ಮಾನವಿಲ್ಲ. 1.28 ಕೋಟಿ ಜನರು ಪಡಿತರ ಚೀಟಿ ಹೊಂದಿದ್ದಾರೆ. ಎಲ್ಲವನ್ನು ಪರಿಶೀಲನೆ ಮಾಡಿ ಎಲ್ಲರಿಗೂ ಅಕ್ಕಿ ವಿತರಣೆ ಮಾಡುವ ಬಗ್ಗೆ ಕ್ರಮವಹಿಸುತ್ತೇವೆ. ಯಾರು ಅರ್ಹರಿರುತ್ತಾರೆ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ:BPL Card: ಬಿಪಿಎಲ್​ ಕಾರ್ಡ್​ಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ; ಮಾನದಂಡಗಳೇನು?

ಹೊಸ ಪಡಿತರ ಚೀಟಿ ಅರ್ಜಿಗೆ ಅನುಮತಿ ಇಲ್ಲ

ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿಸಂಹಿತೆ ಜಾರಿಯಾಗುತ್ತಿದ್ದಂತೆಯೇ, ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸುವ ಆನ್‌ಲೈನ್‌ ಪೋರ್ಟಲ್ ಸ್ಥಗಿತಗೊಳಿಸಲಾಗಿತ್ತು. ಇದೀಗ ಹೊಸ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದು ಈ ಪೋರ್ಟ್​​ಲ್​ ಅನ್ನು ಆರಂಭಮಾಡಿಲ್ಲ. ಈ ಬಗ್ಗೆ ಇತ್ತೀಚಿಗೆ ಕೆ.ಹೆಚ್​ ಮುನಿಯಪ್ಪ ಮಾತನಾಡಿ ಹೊಸ ಪಡಿತರ ಚೀಟಿ (ಎಪಿಎಲ್)​, (ಬಿಪಿಎಲ್)​ ಕಾರ್ಡ್​​ಗೆ ಅರ್ಜಿ ಸಲ್ಲಿಸಲು ಇನ್ನೂ ಒಂದಿಷ್ಟು ದಿನ ಅನುಮತಿ ಇಲ್ಲ ಎಂದು ಹೇಳಿದ್ದರು. ಆದರೆ ಇದಕ್ಕೆ ಕಾರಣ ಮಾತ್ರ ನೀಡಿರಲಿಲ್ಲ.

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರ ಶಾಕ್​

ಅರ್ಹತೆ ಇಲ್ಲದಿದ್ದರೂ ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ನಾಗರಿಕರಿಗೆ ಆರೋಗ್ಯ ಶಾಕ್​ ನೀಡಿತ್ತು. ಆಹಾರ ಇಲಾಖೆಯು ಸರ್ವೇ ನಡೆಸಿ 35 ಸಾವಿರಕ್ಕೂ ಹೆಚ್ಚು ಕಾರ್ಡ್​​​ಗಳನ್ನು ರದ್ದುಗೊಳಿಸಿತ್ತು. ಅಲ್ಲದೇ ಮರಣ ಹೊಂದಿದ 4.55 ಲಕ್ಷ ಜನರ ಹೆಸರನ್ನು ಕಡಿತಗೊಳಿಸುವ ಮೂಲಕ ಸರ್ಕಾರಕ್ಕೆ 6 ರಿಂದ 7 ಕೋಟಿ ರೂ. ಉಳಿತಾಯವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ