ಹಾಸನ: ಹಾಸನ ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಅದು ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತದೇಹ ಎಂದು ಪತ್ತೆ ಹಚ್ಚಲಾಗಿದೆ.
ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಹೊಂಡರವಳ್ಳಿಯ ಶರಣ್ಯ ಹಾಸನ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದರು. ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.