AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧನಿಗೆ ಭರ್ಜರಿ ಸ್ವಾಗತ; ಪುಷ್ಪಾರ್ಚನೆ, ಜೈಕಾರ ಕೂಗಿದ ಜನ

ಹಾನುಬಾಳು ಹೋಬಳಿಯ ಹುನುಮನಹಳ್ಳಿ ಗ್ರಾಮದ ಹೆಚ್‌.ಕೆ. ಲಕ್ಷ್ಮಣಗೌಡ ಅವರ ಪುತ್ರ ಹೆಚ್‌.ಎಲ್‌. ಹಿರಣ್ಣಯ್ಯ ಬಿಎಸ್‌ಎಫ್‌ ನಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿಹೊಂದಿ ನೆನ್ನೆ ತವರಿಗೆ ಹಿಂದಿರುಗಿದರು. ಬರೊಬ್ಬರಿ 22 ವರ್ಷ ಭಾರತೀಯ ಸೇನೆಯಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿ ತವರಿಗೆ ಬರೋದು ಅಂದ್ರೆ ಮರು ಹುಟ್ಟು ಪಡೆದಂತೆ ಹಾಗಾಗಿಗೇ ಅವರ ಆಗಮನ ಊರಿನಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡಿತ್ತು.

22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧನಿಗೆ ಭರ್ಜರಿ ಸ್ವಾಗತ; ಪುಷ್ಪಾರ್ಚನೆ, ಜೈಕಾರ ಕೂಗಿದ ಜನ
22 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ವೀರ ಯೋಧನಿಗೆ ಭರ್ಜರಿ ಸ್ವಾಗತ
Follow us
TV9 Web
| Updated By: ಆಯೇಷಾ ಬಾನು

Updated on: Aug 08, 2021 | 9:53 AM

ಹಾಸನ: ಭಾರತೀಯ ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಹಿಂತಿರುಗಿದ ವೀರ-ಯೋಧನಿಗೆ ಜನರು ಭವ್ಯ ಸ್ವಾಗತ ಕೋರಿದ್ದಾರೆ. ವೀರ ಯೋಧನ ಪರ ಘೋಷಣೆ ಮೊಳಗಿಸುತ್ತಾ ಪಟಾಕಿ ಸಿಡಿಸಿ, ಪುಷ್ಪಾರ್ಚನೆ ಮಾಡಿ ಅದ್ಧೂರಿ ಸ್ವಾಗತ ಮಾಡಿ ಸಂಭ್ರಮಿಸಿದರು. ಸಕಲೇಶಪುರ ತಾಲ್ಲೂಕಿನ ಹಾನುಬಾಳು ಗ್ರಾಮಕ್ಕೆ ನಿನ್ನೆ ಆಗಮಿಸಿದ ಯೋಧ ಹೆಚ್.ಎಲ್ ಹಿರಣ್ಣಯ್ಯ ಕಂಡು ಊರಿಗೆ ಊರೇ ಸಂಭ್ರಮಿಸಿತ್ತು.

ಹಾನುಬಾಳು ಹೋಬಳಿಯ ಹುನುಮನಹಳ್ಳಿ ಗ್ರಾಮದ ಹೆಚ್‌.ಕೆ. ಲಕ್ಷ್ಮಣಗೌಡ ಅವರ ಪುತ್ರ ಹೆಚ್‌.ಎಲ್‌. ಹಿರಣ್ಣಯ್ಯ ಬಿಎಸ್‌ಎಫ್‌ ನಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿಹೊಂದಿ ನೆನ್ನೆ ತವರಿಗೆ ಹಿಂದಿರುಗಿದರು. ಬರೊಬ್ಬರಿ 22 ವರ್ಷ ಭಾರತೀಯ ಸೇನೆಯಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡಿ ತವರಿಗೆ ಬರೋದು ಅಂದ್ರೆ ಮರು ಹುಟ್ಟು ಪಡೆದಂತೆ ಹಾಗಾಗಿಗೇ ಅವರ ಆಗಮನ ಊರಿನಲ್ಲಿ ಹಬ್ಬದ ವಾತಾವರಣ ಸೃಷ್ಟಿ ಮಾಡಿತ್ತು. ಗ್ರಾಮದ ಜನರು ಬಂಧುಗಳು, ಸ್ನೇಹಿತರೆಲ್ಲಾ ಸೇರಿ ಭವ್ಯ ಸ್ವಾಗತ ಕೋರಿ ವೀರ ಸೇನಾನಿಯ ಸೇವೆಯನ್ನ ಕೊಂಡಾಡಿದ್ರು. ಇನ್ನು 22 ವರ್ಷ ಮನೆಯಿಂದ ದೂರವಿದ್ದು ದೇಶಕ್ಕಾಗಿ ಬದುಕಿದ್ದ ಮನೆ ಮಗ ಮನೆಗೆ ಬಂದಾಗ ಮನೆಯಲ್ಲಿ ಸಂಭ್ರಮ‌ ಸಡಗರ ಮೇಳೈಸಿತ್ತು. ಎಲ್ಲೆಲ್ಲೂ ಹೂವ ಚೆಲ್ಲಿ ಭಾರತ್ ಮಾತಾಕಿ‌ ಜೈ ಎಂದು ಕೊಂಡಾಡಿ ಮನೆಗೆ ಬರಮಾಡಿಕೊಂಡರು.

ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಸಕಲೇಶಪುರದಲ್ಲಿ ಪಿಯುಸಿ ಮತ್ತು ಪದವಿ ಶಿಕ್ಷಣ ಪಡೆದ ಹಿರಣ್ಣಯ್ಯ ರವರು 2000 ನೇ ಇಸವಿಯಲ್ಲಿ ಬಿಎಸ್ಎಫ್ ಗಡಿ‌ಭದ್ರತಾಪಡೆಗೆ ಸೇರಿದ್ರು, ಬಹುತೇಕ‌ ಸಮಯ ಉಗ್ರರ‌ ಕರಿನೆರಳಿನಲ್ಲೇ‌ ಕೆಲಸ ಮಾಡಿ ದುಷ್ಟರ ಸಂಹಾರ ಮಾಡಿ ವಿಜಯಿಯಾಗಿ ಈಗ ತವರಿಗೆ ಮರಳಿದ್ದಾರೆ. ಪಶ್ಚಿಮ ಬಂಗಾಳ, ಜಮ್ಮು ಕಾಶ್ಮೀರ್, ಪಂಜಾಬ್‌, ಗುಜರಾತ್‌, ರಾಜಸ್ತಾನ್‌, ದೆಹಲಿ, ಮಣಿಪುರ ಗಳಲ್ಲಿ ಸೇವೆ ಸಲ್ಲಿಸಿ ಈಗ ಹುಟ್ಟೂರಿಗೆ ಮರಳಿದ್ದಾರೆ.

bsf soldier

ಗ್ರಾಮದ ಜನರು ಬಂಧುಗಳು, ಸ್ನೇಹಿತರೆಲ್ಲಾ ಸೇರಿ ಭವ್ಯ ಸ್ವಾಗತ ಕೋರಿ ವೀರ ಸೇನಾನಿಯ ಸೇವೆಯನ್ನ ಕೊಂಡಾಡಿದ್ರು

bsf soldier

ಹೆಚ್‌.ಎಲ್‌. ಹಿರಣ್ಣಯ್ಯ ಬಿಎಸ್‌ಎಫ್‌ ನಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿಹೊಂದಿ ನೆನ್ನೆ ತವರಿಗೆ ಹಿಂದಿರುಗಿದರು

ಇದನ್ನೂ ಓದಿ: Pulwama Encounter: ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಪುಲ್ವಾಮಾ ದಾಳಿಯ ಮೋಸ್ಟ್ ವಾಂಟೆಡ್ ಉಗ್ರನ ಹತ್ಯೆ

ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ದರ್ಶನ್ ಹೆಸರು ಹೇಳಿ ವಿನೋದ್ ಪ್ರಭಾಕರ್ ಅವರ ಕೊಂಡಾಡಿದ ಶ್ರುತಿ
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು