AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಅಕ್ರಮದಲ್ಲಿ ಶಾಮೀಲಾಗಿ ಅಭ್ಯರ್ಥಿಗೆ ಕೆಲಸ ಕೊಡಿಸಿದ್ದ ಚನ್ನರಾಯಪಟ್ಟಣ ಪುರಸಭೆ ಸದಸ್ಯ ಬಂಧನ

ಪಿಎಸ್​ಐ ನೇಮಕಾತಿ ಹಗರಣದ ಆರೋಪಿ ಶಶಿಧರನನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

PSI Recruitment Scam: ಅಕ್ರಮದಲ್ಲಿ ಶಾಮೀಲಾಗಿ ಅಭ್ಯರ್ಥಿಗೆ ಕೆಲಸ ಕೊಡಿಸಿದ್ದ ಚನ್ನರಾಯಪಟ್ಟಣ ಪುರಸಭೆ ಸದಸ್ಯ ಬಂಧನ
ಸಿಐಡಿ ಬಂಧಿಸಿರುವ ರುದ್ರಗೌಡ ಮತ್ತು ಕೇಶವ ಪ್ರಸಾದ್
TV9 Web
| Edited By: |

Updated on:May 10, 2022 | 8:47 AM

Share

ಹಾಸನ: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ಪುರಸಭೆಯ ಹಾಲಿ ಸದಸ್ಯ ಸಿ.ಎನ್.ಶಶಿಧರ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಶಶಿಧರನನ್ನು ವಿಚಾರಣೆಗಾಗಿ 10 ದಿನಗಳ ಅವಧಿಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಿಎಸ್​ಐ ಹುದ್ದೆಗೆ ಆಯ್ಕೆಯಾಗಿದ್ದ ಬೆಕ್ಕ ಗ್ರಾಮದ ವೆಂಕಟೇಶ್​ ಅವರಿಗೆ ಕೆಲಸ ಪಡೆಯಲು ಡೀಲ್ ಮಾಡಿಸಿದ್ದ ಆರೋಪದ ಮೇಲೆ ಶಶಿಯನ್ನು ಬಂಧಿಸಲಾಗಿದೆ. ಈ ಹಿಂದೆ ಜೆಡಿಎಸ್​ನಲ್ಲಿದ್ದ ಶಶಿ, ನಂತರದ ದಿನಗಳಲ್ಲಿ ಜೆಡಿಎಸ್ ತೊರೆದು ಬಿಜೆಪಿ ನಾಯಕರ ಜೊತೆಗೆ ಸಖ್ಯ ಬೆಳೆಸಿಕೊಂಡರು.

ಶಶಿ‌ ಸಂಬಂಧಿಯೂ ಆಗಿರುವ ಬೆಕ್ಕ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಕೇಶವಮೂರ್ತಿ ಅವರನ್ನು ಮೂರು ದಿನಗಳ ಹಿಂದೆ ಬಂಧಿಸಲಾಗಿತ್ತು. ನಂತರ ಪಿಎಸ್​ಐ ಆಗಿ ಆಯ್ಕೆ ಆಗಿದ್ದ ವೆಂಕಟೇಶ್ ಮತ್ತು ಆತನ ತಂದೆ ಚಂದ್ರಶೇಖರ್​ ಅವರನ್ನು ಬಂಧಿಸಲಾಗಿತ್ತು. ಪ್ರಭಾವಿಗಳು ಮತ್ತು ಪೊಲೀಸ್ ಅಧಿಕಾರಿಗಳ ಜೊತೆ ಸಂಬಂಧ ಹೊಂದಿ ಡೀಲ್ ಕುದುರಿಸಿರುವ ಆರೋಪದ ಮೇಲೆ ಶಶಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಶಶಿ ವಿಚಾರಣೆ ನಂತರ ಮತ್ತಷ್ಟು ವಿಚಾರ ಬಹಿರಂಗಗೊಳ್ಳುವ ಸಾಧ್ಯತೆಯಿದೆ.

ಪಿಡಬ್ಲ್ಯುಡಿ ಪರೀಕ್ಷೆ ಅಕ್ರಮದಲ್ಲಿಯೂ ರುದ್ರಗೌಡ ಕಿಂಗ್​ಪಿನ್

ಪಿಎಸ್​ಐ ಹುದ್ದೆಗಳ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ರುದ್ರಗೌಡ ಪಾಟೀಲ್ ಈ ಹಿಂದೆ ನಡೆದಿದ್ದ ಪಿಡಬ್ಲ್ಯುಡಿ ನೇಮಕಾತಿ ಅಕ್ರಮದಲ್ಲಿಯೂ ಮುಖ್ಯ ಪಾತ್ರ ವಹಿಸಿದ್ದ ಸಂಗತಿ ಬೆಳಕಿಗೆ ಬಂದಿದೆ. ಈ ಸಂಬಂಧ ಕಳೆದ ಡಿಸೆಂಬರ್ 14ರಂದು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಡಬ್ಲ್ಯುಡಿ ನೇಮಕಾತಿ ಅಕ್ರಮ ಪ್ರಕರಣದಲ್ಲಿ ರುದ್ರಗೌಡ 7ನೇ ಆರೋಪಿಯಾಗಿದ್ದ. ಈ ಸಂಬಂಧ ಬೆಂಗಳೂರಿನ ಸೇಂಟ್​ಜಾನ್ಸ್ ಶಾಲೆಯ ಸಿಬ್ಬಂದಿ ದೂರು ನೀಡಿದ್ದರು.

ಅಭ್ಯರ್ಥಿಯೊಬ್ಬ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ್ದ ಸಂದರ್ಭದಲ್ಲಿ ಸಿಕ್ಕಿಹಾಕಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಅನೇಕರಿಗೆ ಅಕ್ರಮವಾಗಿ ಪರೀಕ್ಷೆ ಬರೆಸಿರುವ ರುದ್ರಗೌಡನಿಗೆ ಇದೀಗ ಕೇಸ್​ ರೀ ಓಪನ್ ಆದ​ ಹಿನ್ನೆಲೆಯಲ್ಲಿ ಹೊಸ ಸಂಕಷ್ಟ ಎದುರಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ರುದ್ರಗೌಡನನ್ನು ವಶಕ್ಕೆ ಪಡೆದುಕೊಳ್ಳಲು ಕಲಬುರಗಿಗೆ ಬಂದಿದ್ದಾರೆ. ಸದ್ಯ ಪಿಎಸ್​ಐ ಅಕ್ರಮ ನೇಮಕಾತಿ ಅಕ್ರಮದ ಆರೋಪ ಹೊತ್ತಿರುವ ರುದ್ರಗೌಡ ಜೈಲು ಸೇರಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅಕ್ರಮದ ಮೂಲ ಕಿಂಗ್​​ಪಿನ್​​ ಹೆಸರು ಹೇಳಿದ್ರೆ ಸರ್ಕಾರವೇ ಉರುಳುತ್ತೆ: ಹೊಸ ಬಾಂಬ್​ ಸಿಡಿಸಿದ, ಮಾಜಿ ಸಿಎಂ ಹೆಚ್.​​ಡಿ. ಕುಮಾರಸ್ವಾಮಿ

ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಅಕ್ರಮ: ಬಂಧಿತ ಸಿಪಿಐ ಆನಂದ್ PSI ಪರೀಕ್ಷೆ ಬಳಿಕ ಬರೋಬ್ಬರಿ 22 ಎಕರೆ ಜಮೀನು ಖರೀದಿ ಮಾಡಿದ್ದ

Published On - 8:47 am, Tue, 10 May 22

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!