AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರವಣಬೆಳಗೊಳ ದಿಗಂಬರ ಜೈನ ಮಠಕ್ಕೆ ನೂತನ ಭಟ್ಟಾರಕರಾಗಿ ಚಾರೂಕೀರ್ತಿ ಆಗಮಕೀರ್ತಿ ಶ್ರೀ ನೇಮಕ

ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಜೈನಕಾಶಿ ಎಂದೇ ಕರೆಯಲ್ಪಡುವ ಹಾಸನ ಜಿಲ್ಲೆಯ ಶ್ರವಣಬೆಳಗೊಳದ ದಿಗಂಬರ ಜೈನ ಮಠದ ನೂತನ ಭಟ್ಟಾರಕರಾಗಿ ಶ್ರೀ ಚಾರೂಕೀರ್ತಿ ಆಗಮಕೀರ್ತಿ ಭಟ್ಟಾಕರ ಸ್ವಾಮೀಜಿ ನೇಮಕಗೊಂಡಿದ್ದಾರೆ.

ಶ್ರವಣಬೆಳಗೊಳ ದಿಗಂಬರ ಜೈನ ಮಠಕ್ಕೆ ನೂತನ ಭಟ್ಟಾರಕರಾಗಿ ಚಾರೂಕೀರ್ತಿ ಆಗಮಕೀರ್ತಿ ಶ್ರೀ  ನೇಮಕ
ಶ್ರೀ ಚಾರೂಕೀರ್ತಿ ಆಗಮಕೀರ್ತಿ ಭಟ್ಟಾಕರ ಸ್ವಾಮೀಜಿ
ವಿವೇಕ ಬಿರಾದಾರ
|

Updated on:Mar 27, 2023 | 7:23 PM

Share

ಶ್ರವಣಬೆಳಗೊಳ: ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಜೈನಕಾಶಿ (Jain Kashi) ಎಂದೇ ಕರೆಯಲ್ಪಡುವ ಹಾಸನ (Hassan) ಜಿಲ್ಲೆಯ ಶ್ರವಣಬೆಳಗೊಳದ (Shravanabelagola) ದಿಗಂಬರ ಜೈನ ಮಠದ ನೂತನ ಭಟ್ಟಾರಕರಾಗಿ ಶ್ರೀ ಚಾರೂಕೀರ್ತಿ ಆಗಮಕೀರ್ತಿ ಭಟ್ಟಾಕರ ಸ್ವಾಮೀಜಿ (Charukeerthi Agam Kirti Swamiji) ನೇಮಕಗೊಂಡಿದ್ದಾರೆ. ಜೈನ ಮಠದ 20 ನೇ ಭಟ್ಟಾರಕರಾಗಿ, ಇಂದು (ಮಾ.27) ರಾಜ್ಯದ ಜೈನ ಮಠಗಳ ಭಟ್ಟಾರಕರ ಸಮ್ಮುಖದಲ್ಲಿ ಶ್ರೀ ಚಾರೂಕೀರ್ತಿ ಆಗಮಕೀರ್ತಿ ಭಟ್ಟಾಕರ ಪಟ್ಟಾಭಿಷೇಕ ನೆರವೇರಿತು.

4 ತಿಂಗಳ ಹಿಂದೆ ಕ್ಷುಲ್ಲಕ ದೀಕ್ಷೆ

ನಾಲ್ಕು ತಿಂಗಳ ಹಿಂದೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಆಗಮ ಇಂದ್ರ ಇವರಿಗೆ ಕ್ಷುಲ್ಲಕ ದೀಕ್ಷೆ ನೀಡುವ ಮೂಲಕ ಆಗಮಕೀರ್ತಿ ಎಂದು ನಾಮಕರಣ ಮಾಡಿದ್ದರು. ತಮ್ಮ ಮಠದಲ್ಲಿಯೇ ಅವರಿಗೆ ಆಶ್ರಯ ನೀಡಿ ಮಠದ ಪರಂಪರೆ, ಸಂಸ್ಕಾರ, ಕ್ಷೇತ್ರದ ಪರಿಚಯ ಮಾಡಿಸಿದ್ದರು. ಉತ್ತರಾಧಿಕಾರಿ ನೇಮಕ ಮಾಡಿದ ಮೂರು ತಿಂಗಳಲ್ಲಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಕಾಲಿಕವಾಗಿ ಜಿನೈಕ್ಯರಾದರು. ಶ್ರೀಮಠದ ಭಟ್ಟಾರಕ ಪರಂಪರೆ ಕ್ರಿ.ಶ.904 ರಿಂದಲೂ ಬೆಳೆದು ಬಂದಿದೆ.

ಆಗಮ ಶ್ರೀಗಳ ಪರಿಚಯ

ಇವರು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಅಶೋಕ್ ಕುಮಾರ್ ಇಂದಿರಾ ಮತ್ತು ಅನಿತಾ ಅಶೋಕ್ ಕುಮಾರ್ ದಂಪತಿಗಳ ಪುತ್ರ. 2001ರ ಫೆಬ್ರವರಿ 26ರಂದು ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಸಾಗರ ಪಟ್ಟಣದ ರೋಟರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಗೂ ಪ್ರೌಢ ಶಿಕ್ಷಣವನ್ನು ಎಂಜೆಎನ್ ಪೈ ಪ್ರೌಢಶಾಲೆಯಲ್ಲಿ ಮತ್ತು ಪದವಿಪೂರ್ವ ಶಿಕ್ಷಣವನ್ನು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಮುಗಿಸಿದರು. ಪದವಿ ಶಿಕ್ಷಣವನ್ನು ಎಲ್​ಬಿ ಮತ್ತು ಎಸ್ ಬಿ ಎಸ್ ಕಾಲೇಜು ಸಾಗರದಲ್ಲಿ ಪಡೆದಿದ್ದಾರೆ. ಗಣಕಯಂತ್ರ ತರಬೇತಿಯನ್ನು ಪಡೆದಿರುವ ಇವರು ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಸುಲಲಿತವಾಗಿ ಮಾತನಾಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:23 pm, Mon, 27 March 23

‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ