AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​ ಹೇಳಿದ್ದೇನು?

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ - ಕಂದಾಯ ಸಚಿವ ಆರ್​ ಅಶೋಕ್

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​  ಹೇಳಿದ್ದೇನು?
ಆರ್ ಅಶೋಕ್ (ಸಂಗ್ರಹ ಚಿತ್ರ)
Follow us
TV9 Web
| Updated By: ಸಾಧು ಶ್ರೀನಾಥ್​

Updated on: Nov 24, 2021 | 2:01 PM

ಹಾಸನ: ಕಂದಾಯ ಸಚಿವ ಆರ್​ ಅಶೋಕ್​ ಇಂದು ಹಾಸನ ಜಿಲ್ಲೆಯಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡುತ್ತಿದ್ದಾರೆ. ಈ ಮಧ್ಯೆ, ಅರಕಲಗೂಡು ತಾಲೂಕಿನ ರಾಗಿಮರೂರು ರಾಗಿಮರೂರಿನಲ್ಲಿ ಮಾತನಾಡಿದ ಸಚಿವ ಅಶೋಕ್ ಅವರು ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ 300 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ. ರಾಜ್ಯದಲ್ಲಿ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿ ಆಗಿದೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಕೂಡಲೆ ರೈತರಿಗೆ ಬೆಳೆ ಪರಿಹಾರ ಸಿಗಬೇಕಿದೆ. ನೇರವಾಗಿ ರೈತರ ಖಾತೆಗೆ ಪರಿಹಾರ ಸಂದಾಯ ಆಗೋ ರೀತಿ ಕ್ರಮ ವಹಿಸಲಾಗುತ್ತೆ ಎಂದು ಹೇಳಿದ್ದಾರೆ.

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ. ನಾನು ಸಾಕಷ್ಟು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ ಡಿ ಆರ್ ಎಫ್ ಪರಿಹಾರ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ನಿಗದಿ ಆಗಿದ್ದು, ಅದು ಇನ್ನೂ ಪರಿಷ್ಕರಣೆ ಆಗಿರಲಿಲ್ಲ. ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ.

ಕನಿಷ್ಠ ಈಗಿರುವ ಮೂರು ಪಟ್ಟು ಹೆಚ್ಚು ಮಾಡಲು ಮನವಿ ಮಾಡಲಾಗಿದೆ. ಪರಿಹಾರ ಹೆಚ್ಚಿಸಬೇಕು ಎಂದು ಪತ್ರ ಬರೆದು ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕೇಂದ್ರ ಹಣಕಾಸು ಸಚಿವರು ಕೂಡಲೆ ಕ್ರಮ ವಹಿಸೊದಾಗಿ ಹೇಳಿದ್ದಾರೆ. ಈಗಾಗಲೆ 300 ಕೋಟಿ ಬೆಳೆ ಪರಿಹಾರ ವಿತರಣೆ ಮಾಡಲಾಗಿದೆ. ಕಾಫಿ ಬೆಳೆಗೂ ಕೂಡ ರಾಜ್ಯ ಸರ್ಕಾರದಿಂದ ಪರಿಹಾರ ಕೊಡುತ್ತೇವೆ. ಶೇಕಡಾ 33 ಕ್ಕಿಂತ ಹೆಚ್ಚು ಹಾನಿಯಾಗಿರೋ ಪ್ರದೇಶದ ಕಾಫಿಗೆ ಪರಿಹಾರ ನೀಡುತ್ತೇವೆ. ಹಾಸನ ಜಿಲ್ಲೆಯಲ್ಲಿ ಎನ್.ಡಿ.ಆರ್.ಎಫ್ ಮಾನದಂಡದ ಪ್ರಕಾರ 33 ಕೋಟಿ ರೂ ನಷ್ಟ ಆಗಿದೆ. ಆದರೆ ವಾಸ್ತವದಲ್ಲಿ ಕನಿಷ್ಠ ನೂರು ಕೋಟಿಗೂ ಹೆಚ್ಚು ಲಾಸ್ ಆಗಿದೆ. ಕೇವಲ ರಾಗಿ ಅಷ್ಟೆ ಅಲ್ಲ, ಎಲ್ಲ ರೀತಿಯ ಬೆಳೆ ಹಾನಿಗೆ ಪರಿಹಾರ ಸಿಗುತ್ತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಹೇಳಿದರು. ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.

ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ಸಿದ್ದರಾಮಯ್ಯ ಮನೆ ಸಮೀಪವೇ ಕಳ್ಳತನ: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ
ವಿಮಾನ ದುರಂತದ ಬಗ್ಗೆ ಪ್ರತ್ಯಕ್ಷದರ್ಶಿ ಬಿಚ್ಚಿಟ್ಟ ಭಯಾನಕ ಅನುಭವ ಇಲ್ಲಿದೆ