AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​ ಹೇಳಿದ್ದೇನು?

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ - ಕಂದಾಯ ಸಚಿವ ಆರ್​ ಅಶೋಕ್

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​  ಹೇಳಿದ್ದೇನು?
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 24, 2021 | 2:01 PM

Share

ಹಾಸನ: ಕಂದಾಯ ಸಚಿವ ಆರ್​ ಅಶೋಕ್​ ಇಂದು ಹಾಸನ ಜಿಲ್ಲೆಯಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡುತ್ತಿದ್ದಾರೆ. ಈ ಮಧ್ಯೆ, ಅರಕಲಗೂಡು ತಾಲೂಕಿನ ರಾಗಿಮರೂರು ರಾಗಿಮರೂರಿನಲ್ಲಿ ಮಾತನಾಡಿದ ಸಚಿವ ಅಶೋಕ್ ಅವರು ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ 300 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ. ರಾಜ್ಯದಲ್ಲಿ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿ ಆಗಿದೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಕೂಡಲೆ ರೈತರಿಗೆ ಬೆಳೆ ಪರಿಹಾರ ಸಿಗಬೇಕಿದೆ. ನೇರವಾಗಿ ರೈತರ ಖಾತೆಗೆ ಪರಿಹಾರ ಸಂದಾಯ ಆಗೋ ರೀತಿ ಕ್ರಮ ವಹಿಸಲಾಗುತ್ತೆ ಎಂದು ಹೇಳಿದ್ದಾರೆ.

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ. ನಾನು ಸಾಕಷ್ಟು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ ಡಿ ಆರ್ ಎಫ್ ಪರಿಹಾರ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ನಿಗದಿ ಆಗಿದ್ದು, ಅದು ಇನ್ನೂ ಪರಿಷ್ಕರಣೆ ಆಗಿರಲಿಲ್ಲ. ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ.

ಕನಿಷ್ಠ ಈಗಿರುವ ಮೂರು ಪಟ್ಟು ಹೆಚ್ಚು ಮಾಡಲು ಮನವಿ ಮಾಡಲಾಗಿದೆ. ಪರಿಹಾರ ಹೆಚ್ಚಿಸಬೇಕು ಎಂದು ಪತ್ರ ಬರೆದು ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕೇಂದ್ರ ಹಣಕಾಸು ಸಚಿವರು ಕೂಡಲೆ ಕ್ರಮ ವಹಿಸೊದಾಗಿ ಹೇಳಿದ್ದಾರೆ. ಈಗಾಗಲೆ 300 ಕೋಟಿ ಬೆಳೆ ಪರಿಹಾರ ವಿತರಣೆ ಮಾಡಲಾಗಿದೆ. ಕಾಫಿ ಬೆಳೆಗೂ ಕೂಡ ರಾಜ್ಯ ಸರ್ಕಾರದಿಂದ ಪರಿಹಾರ ಕೊಡುತ್ತೇವೆ. ಶೇಕಡಾ 33 ಕ್ಕಿಂತ ಹೆಚ್ಚು ಹಾನಿಯಾಗಿರೋ ಪ್ರದೇಶದ ಕಾಫಿಗೆ ಪರಿಹಾರ ನೀಡುತ್ತೇವೆ. ಹಾಸನ ಜಿಲ್ಲೆಯಲ್ಲಿ ಎನ್.ಡಿ.ಆರ್.ಎಫ್ ಮಾನದಂಡದ ಪ್ರಕಾರ 33 ಕೋಟಿ ರೂ ನಷ್ಟ ಆಗಿದೆ. ಆದರೆ ವಾಸ್ತವದಲ್ಲಿ ಕನಿಷ್ಠ ನೂರು ಕೋಟಿಗೂ ಹೆಚ್ಚು ಲಾಸ್ ಆಗಿದೆ. ಕೇವಲ ರಾಗಿ ಅಷ್ಟೆ ಅಲ್ಲ, ಎಲ್ಲ ರೀತಿಯ ಬೆಳೆ ಹಾನಿಗೆ ಪರಿಹಾರ ಸಿಗುತ್ತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಹೇಳಿದರು. ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!