AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​ ಹೇಳಿದ್ದೇನು?

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ - ಕಂದಾಯ ಸಚಿವ ಆರ್​ ಅಶೋಕ್

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​  ಹೇಳಿದ್ದೇನು?
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 24, 2021 | 2:01 PM

Share

ಹಾಸನ: ಕಂದಾಯ ಸಚಿವ ಆರ್​ ಅಶೋಕ್​ ಇಂದು ಹಾಸನ ಜಿಲ್ಲೆಯಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡುತ್ತಿದ್ದಾರೆ. ಈ ಮಧ್ಯೆ, ಅರಕಲಗೂಡು ತಾಲೂಕಿನ ರಾಗಿಮರೂರು ರಾಗಿಮರೂರಿನಲ್ಲಿ ಮಾತನಾಡಿದ ಸಚಿವ ಅಶೋಕ್ ಅವರು ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ 300 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ. ರಾಜ್ಯದಲ್ಲಿ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿ ಆಗಿದೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಕೂಡಲೆ ರೈತರಿಗೆ ಬೆಳೆ ಪರಿಹಾರ ಸಿಗಬೇಕಿದೆ. ನೇರವಾಗಿ ರೈತರ ಖಾತೆಗೆ ಪರಿಹಾರ ಸಂದಾಯ ಆಗೋ ರೀತಿ ಕ್ರಮ ವಹಿಸಲಾಗುತ್ತೆ ಎಂದು ಹೇಳಿದ್ದಾರೆ.

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ. ನಾನು ಸಾಕಷ್ಟು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ ಡಿ ಆರ್ ಎಫ್ ಪರಿಹಾರ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ನಿಗದಿ ಆಗಿದ್ದು, ಅದು ಇನ್ನೂ ಪರಿಷ್ಕರಣೆ ಆಗಿರಲಿಲ್ಲ. ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ.

ಕನಿಷ್ಠ ಈಗಿರುವ ಮೂರು ಪಟ್ಟು ಹೆಚ್ಚು ಮಾಡಲು ಮನವಿ ಮಾಡಲಾಗಿದೆ. ಪರಿಹಾರ ಹೆಚ್ಚಿಸಬೇಕು ಎಂದು ಪತ್ರ ಬರೆದು ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕೇಂದ್ರ ಹಣಕಾಸು ಸಚಿವರು ಕೂಡಲೆ ಕ್ರಮ ವಹಿಸೊದಾಗಿ ಹೇಳಿದ್ದಾರೆ. ಈಗಾಗಲೆ 300 ಕೋಟಿ ಬೆಳೆ ಪರಿಹಾರ ವಿತರಣೆ ಮಾಡಲಾಗಿದೆ. ಕಾಫಿ ಬೆಳೆಗೂ ಕೂಡ ರಾಜ್ಯ ಸರ್ಕಾರದಿಂದ ಪರಿಹಾರ ಕೊಡುತ್ತೇವೆ. ಶೇಕಡಾ 33 ಕ್ಕಿಂತ ಹೆಚ್ಚು ಹಾನಿಯಾಗಿರೋ ಪ್ರದೇಶದ ಕಾಫಿಗೆ ಪರಿಹಾರ ನೀಡುತ್ತೇವೆ. ಹಾಸನ ಜಿಲ್ಲೆಯಲ್ಲಿ ಎನ್.ಡಿ.ಆರ್.ಎಫ್ ಮಾನದಂಡದ ಪ್ರಕಾರ 33 ಕೋಟಿ ರೂ ನಷ್ಟ ಆಗಿದೆ. ಆದರೆ ವಾಸ್ತವದಲ್ಲಿ ಕನಿಷ್ಠ ನೂರು ಕೋಟಿಗೂ ಹೆಚ್ಚು ಲಾಸ್ ಆಗಿದೆ. ಕೇವಲ ರಾಗಿ ಅಷ್ಟೆ ಅಲ್ಲ, ಎಲ್ಲ ರೀತಿಯ ಬೆಳೆ ಹಾನಿಗೆ ಪರಿಹಾರ ಸಿಗುತ್ತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಹೇಳಿದರು. ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?