AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​ ಹೇಳಿದ್ದೇನು?

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ - ಕಂದಾಯ ಸಚಿವ ಆರ್​ ಅಶೋಕ್

ಚೆನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ: ಹಾಸನದಲ್ಲಿ ರೈತರನ್ನು ಎಚ್ಚರಿಸಿದ ಸಚಿವ ಅಶೋಕ್​  ಹೇಳಿದ್ದೇನು?
ಆರ್ ಅಶೋಕ್ (ಸಂಗ್ರಹ ಚಿತ್ರ)
TV9 Web
| Updated By: ಸಾಧು ಶ್ರೀನಾಥ್​|

Updated on: Nov 24, 2021 | 2:01 PM

Share

ಹಾಸನ: ಕಂದಾಯ ಸಚಿವ ಆರ್​ ಅಶೋಕ್​ ಇಂದು ಹಾಸನ ಜಿಲ್ಲೆಯಲ್ಲಿ ನೆರೆ ಪ್ರದೇಶಗಳಿಗೆ ಭೇಟಿ ನೀಡಿ, ಬೆಳೆ ಹಾನಿ ಪ್ರದೇಶಗಳ ವೀಕ್ಷಣೆ ಮಾಡುತ್ತಿದ್ದಾರೆ. ಈ ಮಧ್ಯೆ, ಅರಕಲಗೂಡು ತಾಲೂಕಿನ ರಾಗಿಮರೂರು ರಾಗಿಮರೂರಿನಲ್ಲಿ ಮಾತನಾಡಿದ ಸಚಿವ ಅಶೋಕ್ ಅವರು ಹಾಸನ ಜಿಲ್ಲೆಯಲ್ಲಿ ಒಟ್ಟು 47 ಸಾವಿರ ಹೆಕ್ಟೇರ್ ಕೃಷಿ ಹಾಗೂ 300 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ ಆಗಿದೆ. ರಾಜ್ಯದಲ್ಲಿ ಐದು ಲಕ್ಷಕ್ಕೂ ಅಧಿಕ ಹೆಕ್ಟೇರ್ ಬೆಳೆ ಹಾನಿ ಆಗಿದೆ. ಕಂದಾಯ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಪರಿಶೀಲನೆ ನಡೆಸಿ ವರದಿ ನೀಡಲು ಸೂಚನೆ ನೀಡಲಾಗಿದೆ. ಕೂಡಲೆ ರೈತರಿಗೆ ಬೆಳೆ ಪರಿಹಾರ ಸಿಗಬೇಕಿದೆ. ನೇರವಾಗಿ ರೈತರ ಖಾತೆಗೆ ಪರಿಹಾರ ಸಂದಾಯ ಆಗೋ ರೀತಿ ಕ್ರಮ ವಹಿಸಲಾಗುತ್ತೆ ಎಂದು ಹೇಳಿದ್ದಾರೆ.

ಹವಾಮಾನ ವರದಿ ಪ್ರಕಾರ ಮಳೆ ಇನ್ನೂ ಮುಂದುವರೆಯುತ್ತೆ. ಚನ್ನೈ ಸೈಕ್ಲೋನ್ ಶುರುವಾದ್ರೆ ಮತ್ತೊಂದು ಸುತ್ತು ಮಳೆ ಬರಲಿದೆ. ರಾಗಿ ಉದುರಿ ಮೊಳಕೆ ಬರುತ್ತಿದೆ, ಹುಲ್ಲು ಕೂಡ ಕೊಳೆಯುತ್ತಿದೆ. ಹಾಗಾಗಿ ಕೂಡಲೆ ರೈತರಿಗೆ ಪರಿಹಾರ ಕೊಡೋದು ಸರ್ಕಾರದ ಕರ್ತವ್ಯ ಇದೆ. ನಾನು ಸಾಕಷ್ಟು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಎನ್ ಡಿ ಆರ್ ಎಫ್ ಪರಿಹಾರ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ನಿಗದಿ ಆಗಿದ್ದು, ಅದು ಇನ್ನೂ ಪರಿಷ್ಕರಣೆ ಆಗಿರಲಿಲ್ಲ. ತಿಂಗಳ ಹಿಂದೆಯೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ.

ಕನಿಷ್ಠ ಈಗಿರುವ ಮೂರು ಪಟ್ಟು ಹೆಚ್ಚು ಮಾಡಲು ಮನವಿ ಮಾಡಲಾಗಿದೆ. ಪರಿಹಾರ ಹೆಚ್ಚಿಸಬೇಕು ಎಂದು ಪತ್ರ ಬರೆದು ಸರ್ಕಾರದ ಜೊತೆ ಸಂಪರ್ಕದಲ್ಲಿ ಇದ್ದೇವೆ. ಕೇಂದ್ರ ಹಣಕಾಸು ಸಚಿವರು ಕೂಡಲೆ ಕ್ರಮ ವಹಿಸೊದಾಗಿ ಹೇಳಿದ್ದಾರೆ. ಈಗಾಗಲೆ 300 ಕೋಟಿ ಬೆಳೆ ಪರಿಹಾರ ವಿತರಣೆ ಮಾಡಲಾಗಿದೆ. ಕಾಫಿ ಬೆಳೆಗೂ ಕೂಡ ರಾಜ್ಯ ಸರ್ಕಾರದಿಂದ ಪರಿಹಾರ ಕೊಡುತ್ತೇವೆ. ಶೇಕಡಾ 33 ಕ್ಕಿಂತ ಹೆಚ್ಚು ಹಾನಿಯಾಗಿರೋ ಪ್ರದೇಶದ ಕಾಫಿಗೆ ಪರಿಹಾರ ನೀಡುತ್ತೇವೆ. ಹಾಸನ ಜಿಲ್ಲೆಯಲ್ಲಿ ಎನ್.ಡಿ.ಆರ್.ಎಫ್ ಮಾನದಂಡದ ಪ್ರಕಾರ 33 ಕೋಟಿ ರೂ ನಷ್ಟ ಆಗಿದೆ. ಆದರೆ ವಾಸ್ತವದಲ್ಲಿ ಕನಿಷ್ಠ ನೂರು ಕೋಟಿಗೂ ಹೆಚ್ಚು ಲಾಸ್ ಆಗಿದೆ. ಕೇವಲ ರಾಗಿ ಅಷ್ಟೆ ಅಲ್ಲ, ಎಲ್ಲ ರೀತಿಯ ಬೆಳೆ ಹಾನಿಗೆ ಪರಿಹಾರ ಸಿಗುತ್ತೆ ಎಂದು ಕಂದಾಯ ಸಚಿವ ಆರ್ ಅಶೋಕ್ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಹೇಳಿದರು. ಕಂದಾಯ, ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು.

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!