AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM BS Yediyurappa: ಯಡಿಯೂರಪ್ಪಗೆ ಜೆಡಿಎಸ್ ಪರೋಕ್ಷ ಆಹ್ವಾನ; ಪ್ರಾದೇಶಿಕ ಪಕ್ಷ ಕಟ್ಟಲು ಶಾಸಕ ಲಿಂಗೇಶ್ ಸಲಹೆ

ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು, ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲಾ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪಕ್ಷ ಅಧಿಕಾರಿಗಳ ತಂದು ಉತ್ತಮ ಆಡಳಿತ ನೀಡಬೇಕು ಎಂದು ಹೇಳಿರುವ ಜೆಡಿಎಸ್ ಶಾಸಕ ಲಿಂಗೇಶ್ ಸಿಎಂ ಯಡಿಯೂರಪ್ಪರನ್ನ ಪರೋಕ್ಷವಾಗಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

CM BS Yediyurappa: ಯಡಿಯೂರಪ್ಪಗೆ ಜೆಡಿಎಸ್ ಪರೋಕ್ಷ ಆಹ್ವಾನ; ಪ್ರಾದೇಶಿಕ ಪಕ್ಷ ಕಟ್ಟಲು ಶಾಸಕ ಲಿಂಗೇಶ್ ಸಲಹೆ
ಬಿ.ಎಸ್​. ಯಡಿಯೂರಪ್ಪ ಮತ್ತು ಎಚ್​. ಡಿ.ದೇವೇಗೌಡ
TV9 Web
| Updated By: guruganesh bhat|

Updated on:Jul 22, 2021 | 4:07 PM

Share

ಹಾಸನ: ಅವಧಿ ಮುಗಿಯುವವರೆಗೂ ಬಿ.ಎಸ್.ಯಡಿಯೂರಪ್ಪ (CM BS Yediyurappa) ಮುಖ್ಯಮಂತ್ರಿಯಾಗಿ ಮುಂದುವರೆಯಲಿ. ಸಿಎಂ ಯಡಿಯೂರಪ್ಪ ಅವರನ್ನ ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ಬಿ.ಎಸ್.ಯಡಿಯೂರಪ್ಪ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ (HD Devegowda) ಅವರ ಜತೆ ಸೇರಿ ಪ್ರಬಲ ಪ್ರಾದೇಶಿಕ ಪಕ್ಷ ಕಟ್ಟಲಿ (Karnataka Politics)  ಎಂದು ಬೇಲೂರಿನಲ್ಲಿ ಜೆಡಿಎಸ್ ಶಾಸಕ ಲಿಂಗೇಶ್ ಸಲಹೆ ನೀಡಿದ್ದಾರೆ.

ಇತ್ತೀಚಿನ ರಾಜಕೀಯ ಬೆಳವಣಿಗೆ ಬೇಸರ ತರುತ್ತಿದೆ. ಎರಡು ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮುಗಿಸುತ್ತಿವೆ. ಸಂಪೂರ್ಣ ಅಧಿಕಾರವಿದ್ದರೆ ಯಾರಾದರೂ ಸಾಧನೆ ಮಾಡಬಹುದು. ಕೇಂದ್ರ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಾಯಕತ್ವ ಬದಲಾವಣೆ ತಂದು ರಾಜಕೀಯ ದೊಂಬರಾಟ ಸೃಷ್ಟಿಸಿದ್ದಾರೆ. ಸೈದ್ಧಾಂತಿಕವಾಗಿ ನಾವು ಬಿಜೆಪಿಯನ್ನು ವಿರೋಧಿಸುತ್ತೇವೆ. ಆದರೆ ವೈಯುಕ್ತಿಕವಾಗಿ ಅಧಿಕಾರ ಮುಗಿಯುವವರೆಗೂ ಯಡಿಯೂರಪ್ಪ ಅವರನ್ನು ಮುಂದುವರಿಸಬೇಕು. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು. ಬದಲಾವಣೆ ಮಾಡಿದರೆ ದೇವೇಗೌಡರು, ಯಡಿಯೂರಪ್ಪ ಸೇರಿ ಪ್ರಾದೇಶಿಕ ಪಕ್ಷ ಕಟ್ಟಬೇಕು. ಪಕ್ಷಗಳಿಂದ ಹೊರಬರುವ ಎಲ್ಲಾ ಶಾಸಕರನ್ನು ಪ್ರಾದೇಶಿಕ ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಪಕ್ಷ ಅಧಿಕಾರಿಗಳ ತಂದು ಉತ್ತಮ ಆಡಳಿತ ನೀಡಬೇಕು ಎಂದು ಹೇಳಿರುವ ಜೆಡಿಎಸ್ ಶಾಸಕ ಲಿಂಗೇಶ್ ಸಿಎಂ ಯಡಿಯೂರಪ್ಪರನ್ನ ಪರೋಕ್ಷವಾಗಿ ಜೆಡಿಎಸ್ ಪಕ್ಷಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: 

BS Yediyurappa: ಕರ್ನಾಟಕದಲ್ಲಿ ಯಡಿಯೂರಪ್ಪ ನಂತರ ಬಿಜೆಪಿ ನಾಯಕ ಇವರೇನಾ? ಇಷ್ಟಕ್ಕೂ ಬಿಎಸ್​ವೈ ರಾಜೀನಾಮೆಗೆ ಕಾರಣವೇನು?

ಸಿಎಂ ಯಡಿಯೂರಪ್ಪ ಕೈಗೊಂಡ ನಿರ್ಧಾರ ಮತ್ತು ಹೇಳಿಕೆ ನನಗೆ ಸಮಾಧಾನ, ಖುಷಿ ತಂದಿದೆ: ಸಚಿವ ಈಶ್ವರಪ್ಪ

(CM Yediyurappa invited to JDS party to build a regional party by JDS MLA Lingesh in Hassan)

Published On - 4:02 pm, Thu, 22 July 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ