AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಹಾಸನಾಂಬ ಗರ್ಭಗುಡಿ ಪ್ರವೇಶಿಸಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ನಿರ್ಬಂಧ

ಹಾಸನಾಂಬ ದೇವಾಲಯ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ಮಹತ್ವದ ನಿರ್ದಾರ ಕೈಕೊಂಡಿದೆ. ಹಾಸನಾಂಬೆ ಗರ್ಭಗುಡಿ ಒಳಗಡೆ ಪ್ರವೇಶ ಮಾಡಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿದೆ. ಶುಕ್ರವಾರ ರಾತ್ರಿಯಿಂದಲೇ‌ ಜಾರಿಗೆ ಬರುವಂತೆ ಅರ್ಚಕರನ್ನು ಹೊರತುಪಡಿಸಿ ಉಳಿದ ಯಾರಿಗೂ ಗರ್ಭಗುಡಿ ಪ್ರವೇಶವಿಲ್ಲವೆಂದು ಆದೇಶ ಹೊರಡಿಸಿದೆ.

ಹಾಸನ: ಹಾಸನಾಂಬ ಗರ್ಭಗುಡಿ ಪ್ರವೇಶಿಸಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ನಿರ್ಬಂಧ
ಹಾಸನಾಂಬೆ ದೇವಿ
ಮಂಜುನಾಥ ಕೆಬಿ
| Edited By: |

Updated on:Nov 11, 2023 | 9:35 AM

Share

ಹಾಸನ ನ.11: ಹಾಸನಾಂಬ (Hasanamba) ದೇವಾಲಯ ಆಡಳಿತ ಮಂಡಳಿ ಮತ್ತು ಜಿಲ್ಲಾಡಳಿತ ಹಾಸನಾಂಬೆ ದರ್ಶನೋತ್ಸವದ ಇತಿಹಾಸದಲ್ಲೇ ಮಹತ್ವದ ನಿರ್ದಾರ ಕೈಕೊಂಡಿದೆ. ಹಾಸನಾಂಬೆ ಗರ್ಭಗುಡಿ ಒಳಗಡೆ ಪ್ರವೇಶ ಮಾಡಿ ದರ್ಶನ ಪಡೆಯುವುದಕ್ಕೆ ಸಂಪೂರ್ಣ ಬ್ರೇಕ್ ಹಾಕಿದೆ. ಶುಕ್ರವಾರ ರಾತ್ರಿಯಿಂದಲೇ‌ ಜಾರಿಗೆ ಬರುವಂತೆ ಅರ್ಚಕರನ್ನು ಹೊರತುಪಡಿಸಿ ಉಳಿದ ಯಾರಿಗೂ ಗರ್ಭಗುಡಿ ಪ್ರವೇಶವಿಲ್ಲವೆಂದು ಆದೇಶ ಹೊರಡಿಸಿದೆ. ಹಾಗೆ ಶಿಷ್ಟಾಚಾರ ದರ್ಶನ ವ್ಯವಸ್ಥೆಯನ್ನು ಕೂಡ ಸ್ಥಗಿತಗೊಳಿಸಿ ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಗಣ್ಯರು, ಅತಿಗಣ್ಯರು ಗರ್ಭಗುಡಿ ಪ್ರವೇಶ ಮಾಡಿ ದರ್ಶನ ಪಡೆಯುತ್ತಿದ್ದರು. ಹಾಗೇ ಶಿಷ್ಟಾಚಾರ ಕೋಟಾದಡಿಯಲ್ಲೂ ಗರ್ಭಗುಡಿ ಒಳಗೆ ಪ್ರವೇಶ ದರ್ಶನ ಪಡೆಯುತ್ತಿದ್ದರು. ಇದರಿಂದ ಧರ್ಮದರ್ಶನ ಸಾಲಿನಲ್ಲಿ ಬರುವ ಅಪಾರ ಭಕ್ತರಿಗೆ ತೊಂದರೆಯಾಗುತ್ತಿತ್ತು. ಈ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಜನರ ಒತ್ತಡಕ್ಕೆ ಮಣಿದು ಆಡಳಿತ ಮಂಡಳಿ ಮಹತ್ತರ ನಿರ್ಣಯ ಕೈಗೊಂಡಿದೆ.

ಹಾಸನಾಂಬ ದರ್ಶನಕ್ಕೆ 9 ನೇ ದಿನವೂ ಹರಿದು ಬಂದ ಭಕ್ತಸಾಗರ

ಹಾಸನಾಂಬೆ ದರ್ಶನಕ್ಕೆ 9 ನೇ ದಿನವೂ ಭಕ್ತರ ದಂಡೇ ಹರಿದು ಬಂದಿದೆ. ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಬಂರುತ್ತಿದ್ದಾರೆ. ಇನ್ನೂ ದೇವಿ ದರ್ಶನಕ್ಕೆ ನಾಲ್ಕು ದಿನ ಮಾತ್ರ ಬಾಕಿ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಆಗಮಿಸಿದ್ದಾರೆ.

ಇದನ್ನೂ ಓದಿ: ಕೇವಲ 7 ದಿನಗಳಲ್ಲಿ ಹಾಸನಾಂಬೆಗೆ ಕೋಟಿ ಕೋಟಿ ಆದಾಯ: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಹೆಚ್ಚು ಹಣ ಸಂಗ್ರಹ

ವಿಐಪಿ ದರ್ಶನಕ್ಕೆ ಮುಗಿಬಿದ್ದ ಜನರು; ಮಹಿಳೆ ಅಸ್ವಸ್ಥ

ಧರ್ಮದರ್ಶನ ಸಾಲಿನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದರಿಂದ ಭಕ್ತರು VIP ದರ್ಶನಕ್ಕೆ ಮುಗಿಬಿದ್ದಿದ್ದಾರೆ. ಭಕ್ತರು 300 ,1000 ರೂಪಾಯಿ ನೀಡಿ ವಿಐಪಿ ದರ್ಶನ ಸಾಲಿನಲ್ಲಿ ನಿಂತಿದ್ದಾರೆ. ಧರ್ಮದರ್ಶನ ಸಾಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರು ಹಣ ನೀಡಿ ದರ್ಶನಕ್ಕೆ ತೆರಳುತ್ತಿದ್ದಾರೆ. ಈ ವಿಐಪಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತ ಹಿನ್ನೆಲೆಯಲ್ಲಿ ಮಹಿಳೆ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥಗೊಂಡ ಮಹಿಳೆಯನ್ನು ಪೊಲೀಸ್ ಸಿಬ್ಬಂದಿ  ತಕ್ಷಣ ಆರೈಕೆ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:20 am, Sat, 11 November 23

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು