Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ನನ್ನ ಒಂದು ಸಣ್ಣ ತಪ್ಪು ಕಂಡು ಹಿಡಿಯಲು ಆಗಲಿಲ್ಲ: ಜೆಡಿಎಸ್​​ ವರಿಷ್ಠ ಹೆಚ್​ಡಿ ದೇವೇಗೌಡ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಜೆಡಿಎಸ್​​ ವರಿಷ್ಠ ಹೆಚ್​​ಡಿ ದೇವೇಗೌಡ, ಹೆಚ್​.ಡಿ.ಕುಮಾರಸ್ವಾಮಿ 14 ತಿಂಗಳ ಕಾಲ ಸಿಎಂ ಆಗಿದ್ದರು.  ಯಾರಿಂದಲಾದರೂ ವರ್ಗಾವಣೆಗೆ ಹಣ ಪಡೆದಿದ್ದರೆ ಹೇಳಲಿ. ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ. ಕಾಂಗ್ರೆಸ್​ಗೆ ನನ್ನ ಒಂದು ಸಣ್ಣ ತಪ್ಪು ಕಂಡು ಹಿಡಿಯಲು ಆಗಲಿಲ್ಲ ಎಂದು ಕಿಡಿಕಾರಿದ್ದಾರೆ. 

ಕಾಂಗ್ರೆಸ್​ಗೆ ನನ್ನ ಒಂದು ಸಣ್ಣ ತಪ್ಪು ಕಂಡು ಹಿಡಿಯಲು ಆಗಲಿಲ್ಲ: ಜೆಡಿಎಸ್​​ ವರಿಷ್ಠ ಹೆಚ್​ಡಿ ದೇವೇಗೌಡ
ಜೆಡಿಎಸ್​​ ವರಿಷ್ಠ ಹೆಚ್​​ಡಿ ದೇವೇಗೌಡ
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 24, 2024 | 7:47 PM

ಹಾಸನ, ಜನವರಿ 24: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ 14 ತಿಂಗಳ ಕಾಲ ಸಿಎಂ ಆಗಿದ್ದರು.  ಯಾರಿಂದಲಾದರೂ ವರ್ಗಾವಣೆಗೆ ಹಣ ಪಡೆದಿದ್ದರೆ ಹೇಳಲಿ. ನಾನು ಕ್ಷಮೆ ಕೇಳುತ್ತೇನೆ ಎಂದು ಜೆಡಿಎಸ್​​ ವರಿಷ್ಠ ಹೆಚ್​​ಡಿ ದೇವೇಗೌಡ (HD Deve Gowda) ಹೇಳಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಜೆಡಿಎಸ್​ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 13 ತಿಂಗಳಿಗೆ ಕುಮಾರಣ್ಣನನ್ನು ಸಿಎಂ ಸ್ಥಾನದಿಂದ ಯಾಕೆ ತೆಗೆದರು. 25 ಸಾವಿರ ಕೋಟಿ ರೂ. ರೈತರ ಸಾಲಮನ್ನಾ ಮಾಡಿದರು. ಕಾಂಗ್ರೆಸ್​ಗೆ ನನ್ನ ಒಂದು ಸಣ್ಣ ತಪ್ಪು ಕಂಡು ಹಿಡಿಯಲು ಆಗಲಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಧಾನಿ ಸ್ಥಾನದಿಂದ ನನ್ನನ್ನು ಯಾಕೆ ತೆಗೆದರು. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನನ್ನನ್ನು ಸೋಲಿಸಿದರು. ನನ್ನನ್ನು ಏಕೆ ಸೋಲಿಸಿದರು ಎಂದು ಹೇಳಲು ಯೋಗ್ಯತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಜೆಡಿಎಸ್ ಪಕ್ಷ ಹೆಚ್​.ಡಿ.ದೇವೇಗೌಡರ ಆಸ್ತಿನಾ ಎಂದು ಹೇಳುತ್ತಾರೆ. ಜೆಡಿಎಸ್​​ ಪಕ್ಷ ದೇವೇಗೌಡರ ಕುಟುಂಬದ ಆಸ್ತಿ ಅಲ್ಲ. ಮುಸ್ಲಿಮರಿಗೆ ಮೀಸಲಾತಿ ಕೊಟ್ಟಿದ್ದೇನೆ ಎಂದರು.

ಇವತ್ತು ರಾಜ್ಯ ಕೆಟ್ಟ ಸ್ಥಿತಿಗೆ ತಲುಪಿದೆ

ಏನಾಗಿದೆ ಈ ರಾಜ್ಯ ಇವತ್ತು. ಯಾವ ಸಿದ್ದರಾಮಯ್ಯ ಅವರ ಬಗ್ಗೆ ಎತ್ತರದಲ್ಲಿ ಯೋಚನೆ ಮಾಡಿದ್ದೆ. ಇವತ್ತು ಸಿದ್ದರಾಮಯ್ಯ ಕಾಲದಲ್ಲಿ ಯಾವ ಪರಿಸ್ಥಿತಿ ಇದೆ. ಇವತ್ತು ರಾಜ್ಯ ಕೆಟ್ಟ ಸ್ಥಿತಿಗೆ ತಲುಪಿದೆ. ನಾನು ಅವರ ಬಗ್ಗೆ ಲಘುವಾಗಿ ಮಾತನಾಡಲ್ಲ. ಜನತಾದರ್ಶನದಲ್ಲಿ ಉಪಮುಖ್ಯಮಂತ್ರಿ ಮುಂದೆ ಮಹಿಳೆಯೊಬ್ಬರು ಅಧಿಕಾರ ವಿರುದ್ಧ ದೂರು ಹೇಳುತ್ತಾರೆ. ಕೂಡಲೇ ಅವರನ್ನು ಸಸ್ಪೆಂಡ್ ಮಾಡಿ ಅಂತಾರೆ. ಈ ದೇಶದಲ್ಲಿ ಕಾಂಗ್ರೆಸ್ ಈ ಸ್ಥಿತಿಗೆ ಬರಬೇಕಾದರೆ ಕಾರಣ ಇವರೇ. ಕುಮಾರಸ್ವಾಮಿ ಸರ್ಕಾರ ಏಕೆ ತೆಗೆದರು. ಹದಿನೆಂಟು ಜನರನ್ನು ಬಾಂಬೆಗೆ ಯಾರು ಕಳುಹಿಸಿದವರು ಹೇಳಲಿ ಎಂದು ವಾಗ್ದಾಳಿ ಮಾಡಿದ್ದಾರೆ.

ಮೊಮ್ಮಗ ಪರ ಹೆಚ್​ಡಿ ದೇವೇಗೌಡ ಪ್ರಚಾರ 

ಹಾಸನ ಲೋಕಸಭಾ ಕ್ಷೇತ್ರಕ್ಕೆ ಸಂಸದ ಪ್ರಜ್ವಲ್‌ ರೇವಣ್ಣರನ್ನು ಅಭ್ಯರ್ಥಿ ಎಂದು ಘೋಷಿಸಿರುವ ದೇವೇಗೌಡರು, ಮೊಮ್ಮಗ ಪರ ಪ್ರಚಾರ ನಡೆಸುತ್ತಿದ್ದಾರೆ. ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಎಂದು ಸಭೆಯಲ್ಲಿ ಮನವಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಐದು ಗ್ಯಾರಂಟಿಗಳು ನಿಲ್ಲುತ್ತವೆ: ಮಾಜಿ ಸಚಿವ ಹೆಚ್.ಡಿ.ರೇವಣ್ಣ

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿ, ಲೋಕಸಭೆ ಚುನಾವಣೆ ಬಳಿಕ ಐದು ಗ್ಯಾರಂಟಿಗಳು ನಿಲ್ಲುತ್ತವೆ. ಐದು ಗ್ಯಾರಂಟಿಗಳು ಎಲ್ಲೆಲ್ಲಿ ಇವೆಯೋ, ಅಲ್ಲಲ್ಲೇ ನಿಂತುಕೊಳ್ಳುತ್ತವೆ. ಮಹಿಳೆಯರು ಬರುತ್ತಾರೆ ಅಂತಾ ಹಳ್ಳಿಗಳಿಗೆ ಬಸ್​ಗಳನ್ನು ಬಿಡುತ್ತಿಲ್ಲ. ಲೋಕಸಭೆ ಚುನಾವಣೆ ಮುಗಿದ ತಕ್ಷಣವೇ ಗ್ಯಾರಂಟಿಗಳು ಖಾಲಿ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ