AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ನಾಟಕವಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಸಾಲ ತೀರಿಸಲು ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲೆಂದು ದಂಪತಿ ಖತರ್ನಾಕ್ ಪ್ಲಾನ್ ಮಾಡಿ ಸಿಕ್ಕಿಬಿದ್ದಿದ್ದಾರೆ. ಮುನಿಸ್ವಾಮಿ ಎಂಬುವವರು ಇನ್ಶೂರೆನ್ಸ್ ಹಣಕ್ಕಾಗಿ ತಮ್ಮನ್ನೇ ಹೋಲುವ ವ್ಯಕ್ತಿಯನ್ನು ಹುಡುಕಿ ಕೊಲೆ ಮಾಡಿ ಅಪಘಾತವೆಂಬಂತೆ ಬಿಂಬಿಸಿದ್ದಾರೆ. ಸದ್ಯ ತನನ್ನು ಬಜಾವ್ ಮಾಡುವಂತೆ ಆರೋಪಿ ಶಿಡ್ಲಘಟ್ಟ ಇನ್ಸ್ಪೆಕ್ಟರ್ ಮೊರೆ ಹೋಗಿದ್ದು ಶಿಡ್ಲಘಟ್ಟ ಇನ್ಸ್ಪೆಕ್ಟರ್ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ್ದಾರೆ.

ಹಾಸನ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ನಾಟಕವಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್
ಇನ್ಶೂರೆನ್ಸ್ ಹಣ ಪಡೆಯಲು ಖತರ್ನಾಕ್ ಪ್ಲಾನ್ ಮಾಡಿ ಸಿಕ್ಕಿಬಿದ್ದ ದಂಪತಿ
ಮಂಜುನಾಥ ಕೆಬಿ
| Edited By: |

Updated on:Aug 24, 2024 | 11:58 AM

Share

ಹಾಸನ, ಆಗಸ್ಟ್​.24: ಕೋಟಿ ಕೋಟಿ ಇನ್ಶೂರೆನ್ಸ್ ಹಣಕ್ಕಾಗಿ (Insurance Money) ಅಮಾಯಕನನ್ನು ಕೊಲೆ (Murder) ಮಾಡಿ ಅಪಘಾತವೆಂದು ಬಿಂಬಿಸಿ ನಾಟಕವಾಡಿದ್ದ ಖತರ್ನಾಕ್ ದಂಪತಿಯನ್ನು ಬಂಧಿಸಲಾಗಿದೆ. ಈ ನಟೋರಿಯಸ್ ದಂಪತಿ ಅಮಾಯಕನನ್ನು ಕೊಂದು ಹಣ ಪೀಕಲು ಪ್ಲಾನ್ ಮಾಡಿದ್ದರು. ಹತ್ತು ದಿನಗಳ ನಂತರ ಸಿನಿಮೀಯ ಮಾದರಿ ಕೊಲೆ ಪ್ರಕರಣದ ರಹಸ್ಯ ಬಯಲಾಗಿದೆ.

ಆಗಸ್ಟ್​ 12ರಂದು ಅರಸೀಕೆರೆ ತಾಲೂಕಿನ, ಗೊಲ್ಲರಹೊಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದ. ಸ್ಥಳದಲ್ಲಿ ಇದ್ದ ಕಾರಿನ ಆಧಾರದಲ್ಲಿ ಪೊಲೀಸರು ಮೃತನ ಗುರುತು ಪತ್ತೆ ಹಚ್ಚಿದ್ದರು. ಬೆಂಗಳೂರು ಹೊಸಕೋಟೆ ಮೂಲದ ಶಿಲ್ಪರಾಣಿ ಎಂಬುವವರು ಆ.13ರಂದು ಜಿಲ್ಲಾಸ್ಪತ್ರೆಗೆ ಬಂದು ಶವದ ಗುರುತು ಪತ್ತೆ ಹಚ್ಚಿದ್ದರು. ಈ ಮೃತದೇಹ ನನ್ನ ಪತಿ ಮುನಿಸ್ವಾಮಿಗೌಡರದ್ದು ಎಂದು ಕಣ್ಣೀರು ಹಾಕಿದ್ದರು. ಆ.13 ರಂದು ಹೊಸಕೋಟೆ ತಾಲೂಕಿನ, ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ಕೂಡ ನಡೆಸಲಾಗಿತ್ತು. ಇಷ್ಟೆಲ್ಲ ಆದ ನಂತರ ಮೃತ ವ್ಯಕ್ತಿಯ ಕುತ್ತಿಗೆಯಲ್ಲಿದ್ದ ಗಾಯದ ಗುರುತು ಕಂಡು ಅನುಮಾನಗೊಂಡ ಪೊಲೀಸರು ತೀವ್ರ ತನಿಖೆಗೆ ಇಳಿದ್ರು.

ಕುತ್ತಿಗೆ ಬಳಿ ಪತ್ತೆಯಾದ ಗುರುತಿನಿಂದ ಆರೋಪಿಗಳ ನಾಟಕ ಬಯಲು

ಮೃತ ವ್ಯಕ್ತಿಯ ಕುತ್ತಿಗೆ ಭಾಗದಲ್ಲಿ ಕಂಡು ಬಂದಿದ್ದ ಗುರುತಿನಿಂದ ಅನುಮಾನಗೊಂಡ ಗಂಡಸಿ ಠಾಣೆಯ ಪಿಎಸ್​ಐ ಹಾಗೂ ಅರಸೀಕೆರೆ ಗ್ರಾಮಾಂತರ ವೃತ್ತ ನಿರೀಕ್ಷರರು ತನಿಖೆ ನಡೆಸಿದ್ದು ತನಿಖೆ ವೇಳೆ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹೊಸಕೋಟೆಯಲ್ಲಿ ಎಮ್‌ಆರ್​ಎಫ್ ಟೈರ್ ಅಂಗಡಿ ಇಟ್ಟುಕೊಂಡಿದ್ದ ಮುನಿ ಸ್ವಾಮಿ ಗೌಡ, ಸಾಕಷ್ಟು ಸಾಲ ಮಾಡಿಕೊಂಡಿದ್ದ. ಈ ಸಾಲ ತೀರಿಸಲು ಹಣಕ್ಕಾಗಿ ಈ ದಂಪತಿ ಮಾಡಿದ ಪ್ಲಾನ್ ಅಂತಿಂತದ್ದಲ್ಲ.

ಇದನ್ನೂ ಓದಿ: ಕೊಪ್ಪಳದಲ್ಲಿ ವಿವಾದಕ್ಕೆ ಕಾರಣವಾದ ಬೀದಿದೀಪಗಳು; ಕಂಬಗಳ ಮೇಲೆ ಗದೆ, ಬಿಲ್ಲುಬಾಣ, ತಿಮ್ಮಪ್ಪನ ನಾಮದ ಚಿತ್ರ

ಸಾಲ ತೀರಿಸಲು ಖತರ್ನಾಕ್ ಪ್ಲಾನ್

ಮುನಿಸ್ವಾಮಿ ಗೌಡ ಹಾಗೂ ಆಕೆಯ ಹೆಂಡತಿ ಶಿಲ್ಪರಾಣಿ ಇಬ್ಬರೂ ಸೇರಿಕೊಂಡು ಸಾಲ ತೀರಿಸಲು ಇನ್ಶೂರೆನ್ಸ್ ಹಣಬೇಕೆಂದು ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ಮುನಿಸ್ವಾಮಿಗೌಡನನ್ನೇ ಹೋಲುವ ವ್ಯಕ್ತಿಯನ್ನ ಹುಡುಕಿ ಹತ್ಯೆಗೆ ಪ್ಲಾನ್ ಮಾಡಿದ್ದಾರೆ. ವ್ಯಕ್ತಿಯನ್ನು ಕಾರಿನಲ್ಲಿ ಕರೆತಂದು ಅರಸೀಕೆರೆ ತಾಲೂಕಿನ ಗೊಲ್ಲರಹೊಸಳ್ಳಿ ಬಳಿ ಹತ್ಯೆ ಮಾಡಿ ಲಾರಿ ಚಾಲಕನ ಜೊತೆ ಸೇರಿ ಲಾರಿ ಡಿಕ್ಕಿ ಹೊಡೆಸಿ ಅಪಘಾತದಿಂದ ಸಾವು ಎಂಬಂತೆ ಬಿಂಭಿಸಿದ್ದಾರೆ.

ಈ ಘಟನೆ ಬಳಿಕ ಮುನಿಸ್ವಾಮಿ ತಲೆಮರಿಸಿಕೊಂಡಿದ್ದ. ತನ್ನದೇ ಸಾವಲ್ಲಿ ಏನಾಗುತ್ತಿದೆ ಎಂದು ತಿಳಿಯದೆ ಗೊಂದಲಕ್ಕೆ ಬಿದ್ದಿದ್ದ. ಇತ್ತ ಪತಿ ಕಳೆದುಕೊಂಡ ನೋವಿನಲ್ಲಿ ಇದ್ದಂತೆ ಪತ್ನಿ ಶಿಲ್ಪರಾಣಿ ಕೂಡ ನಾಟಕವಾಡಿದ್ದಳು. ಮುಂದೇನು ಮಾಡಬೇಕೆಂದು ತಿಳಿಯದೆ ಆರೋಪಿ ಮುನಿಸ್ವಾಮಿ ತನ್ನ ಸಂಬಂಧಿ ಇನ್ಸ್ಪೆಕ್ಟರ್ ಒಬ್ಬರ ಮುಂದೆ ಹಾಜರಾಗಿದ್ದ. ನಡೆದ ಘಟನೆ ವಿವರಿಸಿ ರಕ್ಷಣೆಗೆ ಅಂಗಲಾಚಿದ್ದ. ಆ ಇನ್ಸ್ಪೆಕ್ಟರ್, ಮುನಿಸ್ವಾಮಿ ಮಾಹಿತಿ ಬಳಿಕ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಆರೋಪಿಯನ್ನ ಬಂಧಿಸಲಾಗಿದೆ. ಶಿಡ್ಲಘಟ್ಟ ಇನ್ಸ್ಪೆಕ್ಟರ್ ರ ಕರ್ತವ್ಯ ಪ್ರಜ್ಞೆ ಹಾಗು ನಿಷ್ಠಾವಂತಿಕೆಯಿಂದ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಮೂರು ಬಾರಿ ಹತ್ಯೆಗೆ ಯತ್ನಿಸಿದ್ದ ದಂಪತಿ

ಇನ್ನು ಮೂರು ಬಾರಿ ಹತ್ಯೆಗೆ ಯತ್ನ ಮಾಡಿ ನಾಲ್ಕನೇ ಬಾರಿಗೆ ಸಕ್ಸಸ್ ಆಗಿದ್ದಾರೆ. ಅರಸೀಕೆರೆ ತಾಲ್ಲೂಕಿನ ಗಂಡಸಿ ರಸ್ತೆಯಲ್ಲೇ ಮೂರು ಬಾರಿಗೆ ಹತ್ಯೆ ಯತ್ನ ನಡೆದಿತ್ತು. ಮೂರು ಬಾರಿ ಫೇಲ್ಯೂರ್ ಆಗಿದ್ದ ಮುನಿಸ್ವಾಮಿ ಗೌಡ ನಾಲ್ಕನೇ ಬಾರಿಗೆ ಕೊಲೆಗೈದು ಅಪಘಾತ ಎಂದು ಬಿಂಬಿಸಿದ್ದ. ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಮುನಿಸ್ವಾಮಿ ಹಾಗು ಲಾರಿ ಚಾಲಕ ಪೊಲೀಸರ ವಶದಲ್ಲಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:18 am, Sat, 24 August 24

Follow Us
Manjunath KB
Manjunath KB
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ