AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ.

ಹಾಸನ: ಅಂತ್ಯಸಂಸ್ಕಾರ ಮಾಡಿದ 3 ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ; ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ
ಅಂತ್ಯ ಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆ
TV9 Web
| Edited By: |

Updated on:Sep 25, 2021 | 11:33 AM

Share

ಹಾಸನ: ಅಂತ್ಯಸಂಸ್ಕಾರ ಮಾಡಿದ ಮೂರು ತಿಂಗಳ ಬಳಿಕ ಸಮಾಧಿಯಿಂದ ಶವ ನಾಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ನಡೆದಿದೆ. ರಾತ್ರೋ ರಾತ್ರಿ ಸಮಾಧಿ‌ ಬಗೆದು ಕಿರಾತಕರು ಶವ ಹೊತ್ತೊಯ್ದಿದ್ದು, ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದ ವಿಚಿತ್ರ ಪ್ರಕರಣ ನಡೆದಿದೆ. ವಾಮಾಚಾರಕ್ಕಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ.

ಜೂನ್ ತಿಂಗಳಲ್ಲಿ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದ ಲಕ್ಷ್ಮಮ್ಮ ಅವರನ್ನು ಕುಟುಂಬಸ್ಥರು ತಮ್ಮದೇ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಸೆಪ್ಟೆಂಬರ್ 21 ರ ರಾತ್ರಿ ಸಮಾಧಿ ಬಗೆದು ಕಿಡಿಗೇಡಿಗಳು ಶವ ಹೊತ್ತೊಯ್ದಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಶವ ಪತ್ತೆ ಮಾಡಿಕೊಡಲು ಪೊಲೀಸರಿಗೆ ದೂರು ನೀಡಿದ್ದಾರೆ.

ಲಕ್ಷ್ಮಮ್ಮ ಅವರ ಪುತ್ರ ಮಂಜುನಾಥ್ ಸೇರಿದಂತೆ ಇನ್ನಿತರ ಕುಟುಂಬದ ಸದಸ್ಯರು, ಅರಸೀಕೆರೆ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿ ಶವ ಪತ್ತೆಗಾಗಿ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ತಾಲ್ಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ತಹಸಿಲ್ದಾರ್ ಸಂತೋಷ ಕುಮಾರ್ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿದೆ.

ಇದನ್ನೂ ಓದಿ:

ಅಂತ್ಯ ಸಂಸ್ಕಾರಕ್ಕೆ ಹಣ ಪಡೆಯಲು ಶವವನ್ನೇ ಬ್ಯಾಂಕ್​ಗೆ ಹೊತ್ತೊಯ್ದ ಗ್ರಾಮಸ್ಥರು!

ಗದಗ: ರಜೆಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Published On - 7:34 am, Sat, 25 September 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು