AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ನಲ್ಲಿ ಯಾರ್ಯಾರು ಎಲ್ಲೆಲ್ಲಿ ನಿಂತಿದ್ರು ಮೊದಲು ಚರ್ಚೆ ಮಾಡಿ: ಡಿಕೆ ಶಿವಕುಮಾರ್​ಗೆ​ ಸಂಸದ ಪ್ರಜ್ವಲ್‌ ರೇವಣ್ಣ ತಿರುಗೇಟು

ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ರಾಮನಗರದವರಲ್ಲ, ಹೊಳೆನರಸೀಪುರದವರೆಂದು ಡಿಕೆ ಶಿವಕುಮಾರ್​​ ಹೇಳಿಕೆ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಂಸದ ಪ್ರಜ್ವಲ್‌ ರೇವಣ್ಣ, ನಮ್ಮ ಬಗ್ಗೆ ಮಾತಾಡುವ ಮುನ್ನ ಕಾಂಗ್ರೆಸ್‌ನಲ್ಲಿ ಯಾರು ಯಾರು ಎಲ್ಲೆಲ್ಲಿ ನಿಂತಿದ್ದರು ಅನ್ನೋದನ್ನ ಮೊದಲು ಚರ್ಚೆ ಮಾಡಿ ನಮ್ಮ ಬಗ್ಗೆ ಮಾತಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​​ಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಯಾರ್ಯಾರು ಎಲ್ಲೆಲ್ಲಿ ನಿಂತಿದ್ರು ಮೊದಲು ಚರ್ಚೆ ಮಾಡಿ: ಡಿಕೆ ಶಿವಕುಮಾರ್​ಗೆ​ ಸಂಸದ ಪ್ರಜ್ವಲ್‌ ರೇವಣ್ಣ ತಿರುಗೇಟು
ಜೆಡಿಎಸ್‌ ಪಕ್ಷದ ಸಂಸದ ಪ್ರಜ್ವಲ್‌ ರೇವಣ್ಣ
ಮಂಜುನಾಥ ಕೆಬಿ
| Edited By: |

Updated on:Oct 26, 2023 | 8:14 PM

Share

ಹಾಸನ, ಅಕ್ಟೋಬರ್​​​​​ 26: ನಮ್ಮ ಬಗ್ಗೆ ಮಾತಾಡುವ ಮುನ್ನ ಕಾಂಗ್ರೆಸ್‌ನಲ್ಲಿ ಯಾರು ಯಾರು ಎಲ್ಲೆಲ್ಲಿ ನಿಂತಿದ್ದರು ಅನ್ನೋದನ್ನ ಮೊದಲು ಚರ್ಚೆ ಮಾಡಿ ನಮ್ಮ ಬಗ್ಗೆ ಮಾತಾಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ತಿರುಗೇಟು ನೀಡಿದ್ದಾರೆ. ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ರಾಮನಗರದವರಲ್ಲ, ಹೊಳೆನರಸೀಪುರದವರೆಂದು ಡಿಕೆ ಶಿವಕುಮಾರ್​​ ಹೇಳಿಕೆ ವಿಚಾರವಾಗಿ ನಗದರಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಹೆಚ್​ಡಿ ದೇವೇಗೌಡ ಹಾಸನದಿಂದ ಹೋಗಿ ದೆಹಲಿ ಆಳಿದರು, ಅದನ್ನು ತಪ್ಪು ಅಂತಾರಾ. ಪ್ರಧಾನಿ ಮೋದಿ ಗುಜರಾತ್‌ನಿಂದ ಬಂದಿರುವವರು, ವಾರಣಾಸಿಯಲ್ಲಿ ಸ್ಪರ್ಧಿಸಿಲ್ವಾ? ಪ್ರಜಾಪ್ರಭುತ್ವದಲ್ಲಿ ಎಲ್ಲಾದ್ರೂ ಸ್ಪರ್ಧಿಸಿ ಗೆಲ್ಲಬಹುದು ಅಥವಾ ಸೋಲಬಹುದು ಎಂದಿದ್ದಾರೆ.

ಇದನ್ನೂ ಓದಿ: ಈ ಹಿಂದೆ ಕೂಡ ಚರ್ಚೆ ಮಾಡಿ ಕ್ಷಮೆ ಕೇಳಿದ್ದ ಹೆಚ್​ಡಿ ಕುಮಾರಸ್ವಾಮಿ: ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಹೊಳೆನರಸೀಪುರದವ್ರು ಹೊಳೆನರಸೀಪುರದಲ್ಲೇ, ಕನಕಪುರದವ್ರು ಕನಕಪುರದಲ್ಲೇ, ರಾಮನಗರದವರು, ರಾಮನಗರದಲ್ಲೇ ಸ್ಪರ್ಧಿಸಬೇಕು ಅಂತಾ ಕಾನೂನು ಮಾಡಲಿ. ಎಷ್ಟು ಜನ ಎಷ್ಟು ಕಡೆಯಿಂದ ವಲಸೆ ಬಂದು ಸ್ಪರ್ಧಿಸಿಲ್ಲ. ಸಿಎಂ ಬಾದಾಮಿಯಲ್ಲಿ ಸ್ಪರ್ಧಿಸಿದ್ದರಲ್ಲಾ, ಹಾಗಾದರೆ ಅವರು ಬಾದಾಮಿಯವರಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಮನಗರ ಹೆಸರು ಬದಲಾವಣೆ ಮಾಡಿದ್ರೆ ಉಪವಾಸ ಸತ್ಯಾಗ್ರಹ: ಡಿಕೆಶಿಗೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು ರಾಮನಗರ ಬೆಳೆಯಲಿ ಅಂತಾ ಜಿಲ್ಲೆ ಮಾಡಿದ್ದರು. ಈ ವಿಚಾರದಲ್ಲಿ ಹೆಚ್‌.ಡಿ.ಕುಮಾರಸ್ವಾಮಿರವರ ಬೆಂಬಲಕ್ಕೆ ನಾವಿದ್ದೇವೆ. ರಾಮನಗರ ಬೆಂಗಳೂರಿಗೆ ಸೇರಿಸಿದರೆ ಯಾವ ರೀತಿ ಮಾನ್ಯತೆ ಸಿಗುತ್ತೆ? ಹೆಚ್‌ಡಿಕೆ ಹೋರಾಟದ ತೀರ್ಮಾನ ಕೈಗೊಂಡರೆ ಅವರ ಪರ ನಿಲ್ಲುತ್ತೇನೆ. ಒಬ್ಬರ ಅನುಕೂಲಕ್ಕಾಗಿ ತೀರ್ಮಾನಿಸಿದರೆ ಖಂಡಿತಾ ವಿರೋಧಿಸುತ್ತೇವೆ. ಸಾರ್ವಜನಿಕರಿಗೆ ಅನುಕೂಲ ಆಗುತ್ತೋ, ಇಲ್ಲವೋ ಗೊತ್ತಿಲ್ಲ ಆದರೆ ಯಾರಿಗೆ ಅನುಕೂಲ ಆಗುತ್ತೆ ಅಂತಾ ಮಾಧ್ಯಮದವರಿಗೆ ಗೊತ್ತಿದೆ ಎಂದರು.

ಕಾಂಗ್ರೆಸ್‌ನಲ್ಲಿ 2 ಬಣ

ತಾನೇ ತಾನಾಗಿ ಎಲ್ಲಾ, ಏನು ಅಂಥ ಆಚೆ ಬರುತ್ತೆ. ಹೆಚ್‌.ಡಿ.ಕುಮಾರಸ್ವಾಮಿಗೆ ಜಿಲ್ಲೆ ಉಳಿಸಿಕೊಳ್ಳಬೇಕೆಂಬ ಬಹಳ ಮನಸ್ಸಿದೆ. ಹೆಚ್‌.ಡಿ.ಕುಮಾರಸ್ವಾಮಿಗೆ ಆ ಜಿಲ್ಲೆಯ ಮೇಲೆ ಪ್ರೀತಿ, ಅಭಿಮಾನ ಇದೆ. ನಮ್ಮ ಕುಟುಂಬಕ್ಕೆ ಆ ಜಿಲ್ಲೆಯ ಜನ ಆಶೀರ್ವದಿಸಿ ಅಧಿಕಾರ ಕೊಟ್ಟಿದ್ದಾರೆ. ಯಾವುದೇ ಸ್ವಾರ್ಥ ಇಲ್ಲದೆ ರಾಮನಗರ ಜಿಲ್ಲೆಗೆ ನಾವು ಸೇವೆ ಮಾಡುತ್ತೇವೆ. ಜಿಲ್ಲೆ ವಿಚಾರದಲ್ಲಿ ನನಗೇನೂ ಗೊತ್ತಿಲ್ಲ ‌ಡಿಸಿಎಂ ಕೇಳಿ ಅಂತಾ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಕಾಂಗ್ರೆಸ್‌ನಲ್ಲಿ 2 ಬಣ ಇರುವುದರಿಂದ ಮೊದಲು ತೀರ್ಮಾನ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಒಬ್ಬರ ಹೆಸರ, ಸಾಧನೆ ಮೇಲಾಗಲಿ ಕಾನೂನು ಬದಲಾಗಲ್ಲ

ವನ್ಯಜೀವಿ ಕಾಯ್ದೆ ಯಾರೂ ಉಲ್ಲಂಘನೆ ಮಾಡಬಾರದು. ಯಾರೇ ತಪ್ಪು ಮಾಡಿದರೂ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಾರೆ. ಕೆಲವರನ್ನು ಟಾರ್ಗೆಟ್ ಮಾಡ್ತಿದ್ದಾರೆ, ಕೆಲವರನ್ನು ಟಾರ್ಗೆಟ್ ಮಾಡ್ತಿಲ್ಲ. ಇಂತಹ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಆ ರೀತಿ ಇರಬಾರದು, ಎಲ್ಲರಿಗೂ ಕಾನೂನು ಒಂದೇ. ಒಬ್ಬರ ಹೆಸರ ಮೇಲಾಗಲಿ, ಸಾಧನೆ ಮೇಲಾಗಲಿ ಕಾನೂನು ಬದಲಾಗಲ್ಲ. ಕಾನೂನು ಉಲ್ಲಂಘಿಸಿದ್ರೆ, ತಪ್ಪು ಸಾಬೀತಾದರೆ ನನಗೂ ಶಿಕ್ಷೆ ಕೊಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:12 pm, Thu, 26 October 23

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್