AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ: ಟಿಕೆಟ್​ಗಾಗಿ ಮಾರಾಮಾರಿ, ಪೊಲೀಸ್ ಮೆಟ್ಟಿಲೇರಿದ ಕೈ ನಾಯಕರ ಜಗಳ

ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದ್ದು, ಸ್ವ ಪಕ್ಷೀಯ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಶುರುವಾಗಿದ್ದು, ಹೊಡೆದಾಡುವ ಮಟ್ಟಿಗೆ ಹೋಗಿದೆ.

ಹಾಸನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ: ಟಿಕೆಟ್​ಗಾಗಿ ಮಾರಾಮಾರಿ, ಪೊಲೀಸ್ ಮೆಟ್ಟಿಲೇರಿದ ಕೈ ನಾಯಕರ ಜಗಳ
ಹಲ್ಲೆಗೊಳಗಾದ ಹಿರಿಯ ಮುಖಂಡ ಶಿವಣ್ನ
TV9 Web
| Edited By: |

Updated on: Dec 07, 2022 | 3:31 PM

Share

ಹಾಸನ:  ಬೇಲೂರು ಕಾಂಗ್ರೆಸ್ ಟಿಕೆಟ್‌ಗಾಗಿ‌ ಬಿ.ಶಿವರಾಂ, ವೈ.ಎನ್ ಕೃಷ್ಣೇಗೌಡ ಹಾಗೂ ರಾಜಶೇಖರ್ ಎಂಬುವವರು ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ಹಳೇಬೀಡಿನ ಕಾಂಗ್ರೆಸ್ ‌ಕಾರ್ಯಕರ್ತರ ಸಭೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಶಿವಣ್ಣ ಆಗ್ರಹಿಸಿದ್ದಾರೆ. ಬಿ. ಶಿವರಾಂ ಸಹಚರರಾಗಿರುವ ನಿಶಾಂತ್​ಗೆ ಇದು ಮುಜುಗರವಾಗಿದ್ದು, ಸಭೆಯಲ್ಲಿ ಬಿ.ಶಿವರಾಂ ವಿರುದ್ಧ ಮಾತನಾಡಿದ್ದಕ್ಕೆ ಸಿಟ್ಟಾಗಿ ಹಲ್ಲೆ‌ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ನಿನ್ನೆ (ಡಿ.6) ರಾತ್ರಿ ಬೇಲೂರು ಪಟ್ಟಣದಲ್ಲಿ ಶಿವಣ್ಣ ಮೇಲೆ ಎರಗಿರುವ ಬ್ಲಾಕ್ ಕಾಂಗ್ರೆಸ್ ‌ಅಧ್ಯಕ್ಷ ನಿಶಾಂತ್ ಸ್ಥಳೀಯರಿಗೆ ಟಿಕೆಟ್ ಕೇಳುತ್ತಿಯಲ್ಲ ನಿನ್ನ ರಕ್ಷಣೆಗೆ ಯಾರು ಬರುತ್ತಾರೆ. ಹೀಗೇ‌ ಎಗರಾಡಿದ್ರೆ ಕೊಲೆ ಮಾಡಿಸುತ್ತೇನೆ ಎಂದು ಆವಾಜ್ ಹಾಕಿದ್ದು,. ಕೈಯಲ್ಲಿ ಮಚ್ಚು ಹಿಡಿದು ಕೊಲೆ‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ‌ಮುಖಂಡ ಶಿವಣ್ಣ ಬೇಲೂರು ಪೊಲೀಸರಿಗೆ ದೂರು ನೀಡಿದ್ದಾರೆ. ನಿಶಾಂತ್‌ ಜೊತೆ ಸಫಾಯಿ‌ ಕರ್ಮಚಾರಿ‌ ನಿಗಮದ ಮಾಜಿ ಅಧ್ಯಕ್ಷ ಎಂ.ಆರ್‌ವೆಂಕಟೇಶ್ ಕೂಡ ಇದ್ದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೋದ್​ ಮುತಾಲಿಕ್ ಕಾಂಗ್ರೆಸ್​ ಪಕ್ಷದ ಬಿ ಟೀಮ್ ಎಂದ ಬಿಜೆಪಿ; ಕಮಲ ಪಕ್ಷದ ವಿರುದ್ಧ ಗರಂ

ಅಧ್ಯಕ್ಷ ನಿಶಾಂತ್ ವರ್ತನೆಗೆ ಬೇಲೂರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿಂದೆಯೂ ನಿಶಾಂತ್ ಅಲ್ಪಸಂಖ್ಯಾತ ಮುಖಂಡನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕಿಡಿಕಾರಿದ್ದಾರೆ. ಕೂಡಲೇ ನಿಶಾಂತ್, ಎಂ.ಆರ್ ವೆಂಕಟೇಶ್​ರನ್ನು ಕಾಂಗ್ರೆಸ್​ ಪಕ್ಷದಿಂದ ವಜಾ ಮಾಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ