AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ: ಟಿಕೆಟ್​ಗಾಗಿ ಮಾರಾಮಾರಿ, ಪೊಲೀಸ್ ಮೆಟ್ಟಿಲೇರಿದ ಕೈ ನಾಯಕರ ಜಗಳ

ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದ್ದು, ಸ್ವ ಪಕ್ಷೀಯ ಮುಖಂಡರುಗಳ ನಡುವೆ ಭಿನ್ನಾಭಿಪ್ರಾಯ ಶುರುವಾಗಿದ್ದು, ಹೊಡೆದಾಡುವ ಮಟ್ಟಿಗೆ ಹೋಗಿದೆ.

ಹಾಸನ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಭಿನ್ನಮತ: ಟಿಕೆಟ್​ಗಾಗಿ ಮಾರಾಮಾರಿ, ಪೊಲೀಸ್ ಮೆಟ್ಟಿಲೇರಿದ ಕೈ ನಾಯಕರ ಜಗಳ
ಹಲ್ಲೆಗೊಳಗಾದ ಹಿರಿಯ ಮುಖಂಡ ಶಿವಣ್ನ
TV9 Web
| Edited By: |

Updated on: Dec 07, 2022 | 3:31 PM

Share

ಹಾಸನ:  ಬೇಲೂರು ಕಾಂಗ್ರೆಸ್ ಟಿಕೆಟ್‌ಗಾಗಿ‌ ಬಿ.ಶಿವರಾಂ, ವೈ.ಎನ್ ಕೃಷ್ಣೇಗೌಡ ಹಾಗೂ ರಾಜಶೇಖರ್ ಎಂಬುವವರು ಪೈಪೋಟಿ ನಡೆಸುತ್ತಿದ್ದಾರೆ. ಈ ಮಧ್ಯೆ ಹಳೇಬೀಡಿನ ಕಾಂಗ್ರೆಸ್ ‌ಕಾರ್ಯಕರ್ತರ ಸಭೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಶಿವಣ್ಣ ಆಗ್ರಹಿಸಿದ್ದಾರೆ. ಬಿ. ಶಿವರಾಂ ಸಹಚರರಾಗಿರುವ ನಿಶಾಂತ್​ಗೆ ಇದು ಮುಜುಗರವಾಗಿದ್ದು, ಸಭೆಯಲ್ಲಿ ಬಿ.ಶಿವರಾಂ ವಿರುದ್ಧ ಮಾತನಾಡಿದ್ದಕ್ಕೆ ಸಿಟ್ಟಾಗಿ ಹಲ್ಲೆ‌ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿದೆ.

ನಿನ್ನೆ (ಡಿ.6) ರಾತ್ರಿ ಬೇಲೂರು ಪಟ್ಟಣದಲ್ಲಿ ಶಿವಣ್ಣ ಮೇಲೆ ಎರಗಿರುವ ಬ್ಲಾಕ್ ಕಾಂಗ್ರೆಸ್ ‌ಅಧ್ಯಕ್ಷ ನಿಶಾಂತ್ ಸ್ಥಳೀಯರಿಗೆ ಟಿಕೆಟ್ ಕೇಳುತ್ತಿಯಲ್ಲ ನಿನ್ನ ರಕ್ಷಣೆಗೆ ಯಾರು ಬರುತ್ತಾರೆ. ಹೀಗೇ‌ ಎಗರಾಡಿದ್ರೆ ಕೊಲೆ ಮಾಡಿಸುತ್ತೇನೆ ಎಂದು ಆವಾಜ್ ಹಾಕಿದ್ದು,. ಕೈಯಲ್ಲಿ ಮಚ್ಚು ಹಿಡಿದು ಕೊಲೆ‌ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ‌ಮುಖಂಡ ಶಿವಣ್ಣ ಬೇಲೂರು ಪೊಲೀಸರಿಗೆ ದೂರು ನೀಡಿದ್ದಾರೆ. ನಿಶಾಂತ್‌ ಜೊತೆ ಸಫಾಯಿ‌ ಕರ್ಮಚಾರಿ‌ ನಿಗಮದ ಮಾಜಿ ಅಧ್ಯಕ್ಷ ಎಂ.ಆರ್‌ವೆಂಕಟೇಶ್ ಕೂಡ ಇದ್ದರು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಪ್ರಮೋದ್​ ಮುತಾಲಿಕ್ ಕಾಂಗ್ರೆಸ್​ ಪಕ್ಷದ ಬಿ ಟೀಮ್ ಎಂದ ಬಿಜೆಪಿ; ಕಮಲ ಪಕ್ಷದ ವಿರುದ್ಧ ಗರಂ

ಅಧ್ಯಕ್ಷ ನಿಶಾಂತ್ ವರ್ತನೆಗೆ ಬೇಲೂರು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಹಿಂದೆಯೂ ನಿಶಾಂತ್ ಅಲ್ಪಸಂಖ್ಯಾತ ಮುಖಂಡನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕಿಡಿಕಾರಿದ್ದಾರೆ. ಕೂಡಲೇ ನಿಶಾಂತ್, ಎಂ.ಆರ್ ವೆಂಕಟೇಶ್​ರನ್ನು ಕಾಂಗ್ರೆಸ್​ ಪಕ್ಷದಿಂದ ವಜಾ ಮಾಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಎಚ್ಚರ, ದಕ್ಷಿಣ ದಿಕ್ಕಿಗೆ ತಿರುಗಿ ನಮಸ್ಕಾರ ಮಾಡಲೇಬಾರದು! ಕಾರಣ ಇಲ್ಲಿದೆ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಮಕರ ರಾಶಿಗೆ ಶುಕ್ರ ಪ್ರವೇಶ: ಈ ದಿನದ ರಾಶಿ ಭವಿಷ್ಯ ಹೇಗಿದೆ ನೋಡಿ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ