Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್‌, ಮುಂದಿನ ವರ್ಷ ಅಮ್ಮನ ದರ್ಶನೋತ್ಸವಕ್ಕೆ ದಿನಾಂಕವೂ ಫಿಕ್ಸ್

Hasanamba Temple: ಪ್ರಸಕ್ತ ವರ್ಷ ಹಾಸನದ ಶಕ್ತಿದೇವತೆ ಹಾಸನಾಂಬೆ ಉತ್ಸವಕ್ಕೆ ತೆರೆ ಬಿದ್ದಿದೆ. ನವೆಂಬರ್ 02ರಂದು ಓಪನ್​ ಆಗಿದ್ದ ಹಾಸನಾಂಬೆ ದೇವಸ್ಥಾನವನ್ನು ಇಂದು (ನವೆಂಬರ್ 15) ಬಂದ್ ಮಾಡಲಾಗಿದೆ. ಅಲ್ಲದೇ ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕವನ್ನೂ ಸಹ ನಿಗದಿ ಮಾಡಲಾಗಿದೆ.

ಹಾಸನಾಂಬೆ ಗರ್ಭಗುಡಿ ಬಾಗಿಲು ಬಂದ್‌, ಮುಂದಿನ ವರ್ಷ ಅಮ್ಮನ ದರ್ಶನೋತ್ಸವಕ್ಕೆ ದಿನಾಂಕವೂ ಫಿಕ್ಸ್
ಹಾಸನಾಂಬೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 15, 2023 | 1:05 PM

ಹಾಸನ (ನವೆಂಬರ್ 15): ಪ್ರಸಕ್ತ ವರ್ಷ ಶಕ್ತಿದೇವತೆ ಹಾಸನಾಂಬೆ (Hasanamba Temple) ಉತ್ಸವ ಸಂಪನ್ನಗೊಂಡಿದೆ. ನವೆಂಬರ್ 2ರಿಂದ 14 ದಿನಗಳ ಕಾಲನಡೆದ ಹಾಸನಾಂಬೆ ಉತ್ಸವಕ್ಕೆ ಇಂದು(ನವೆಂಬರ್ 15) ವಿದ್ಯುಕ್ತವಾಗಿ ತೆರೆ ಕಂಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ, ಜಿಲ್ಲಾಧಿಕಾರಿ ಸೇರಿದಂತೆ ಹಲವರ ಸಮ್ಮುಖದಲ್ಲಿ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಬಂದ್ ಮಾಡಲಾಯ್ತು. ಹಾಸನಾಂಬೆಗೆ ಮಾಡಲಾಗಿದ್ದ ಅಲಂಕಾರ ತೆರವುಗೊಳಿಸಿ ಬಳಿಕ ಅರ್ಚಕ ನಾಗರಾಜ್ ಪೂಜೆ ಮಾಡಿ ಗರ್ಭಗುಡಿ ಬಾಗಿಲಿಗೆ ಬೀಗ ಹಾಕಿದರು. ಮುಂದಿನ ವರ್ಷವೇ ಹಾಸನಾಂಬೆ ದೇಗುಲ ಓಪನ್ ಆಗಲಿದೆ. ಮುಂದಿನ ವರ್ಷ ಅಂದರೆ 2024ರ ಅಕ್ಟೋಬರ್ 24 ರಿಂದ ನವೆಂಬರ್ 3 ರ ವರೆಗೆ ಹಾಸನಾಂಬೆ ದರ್ಶನೋತ್ಸವದ ದಿನಾಂಕ ನಿಗದಿ ಮಾಡಲಾಗಿದೆ.

ಮುಂದಿನ ವರ್ಷ ಅ.24ರಿಂದ ನ. 3ರವರೆಗೆ ಅಮ್ಮನ ದರ್ಶನ

ಪ್ರಸಕ್ತ ವರ್ಷ ನವೆಂಬರ್ 2ರಂದು ಹಾಸನಬಾಂಬೆ ದೇವಸ್ಥಾನ ತೆರೆಯಲಾಗಿತ್ತು. ಆದ್ರೆ, ನವೆಂಬರ್ 3ರಿಂದ ನ.15ರ ಬೆಳಗ್ಗೆ 7 ಗಂಟೆ ವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಇದೀಗ ಮುಂದಿನ ವರ್ಷ ಹಾಸನಾಂಬೆ ದರ್ಶನೋತ್ಸವಕ್ಕೆ ದಿನಾಂಕವನ್ನು ನಿಗದಿ ಮಾಡಲಾಗಿದ್ದು, 2024ರ ಅಕ್ಟೋಬರ್ 24ರಿಂದ ನವೆಂಬರ್ 3ರ ವರೆಗೆ ಹಾಸನಾಂಬೆ ದರ್ಶನ ಇರಲಿದೆ. ಇದರೊಂದಿಗೆ ಒಟ್ಟು 9 ದಿನಗಳ ಕಾಲ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಗುತ್ತದೆ.

ಈ ವರ್ಷ ಒಟ್ಟು 12 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಆದ್ರೆ, ಮುಂದಿನ ವರ್ಷ 9 ದಿನ ಮಾತ್ರ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಇರಲಿದೆ.

ಇನ್ನು ಈ ವರ್ಷ ಹಾಸನ ಜಿಲ್ಲಾಡಳಿ ಹಾಸನಾಂಬೆ ಉತ್ಸವನ್ನು ಬಹಳ ಅಚ್ಚುಕಟ್ಟಾಗಿ ಮಾಡಿತ್ತು. ಒಟ್ಟು 14 ಲಕ್ಷ ಭಕ್ತರು ಅಮ್ಮನ ದರ್ಶನಕ್ಕೆ ಆಗಮಿಸಿದ್ದು, ಒಟ್ಟು 6 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ.

Published On - 12:53 pm, Wed, 15 November 23

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು