AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನ ಉಳಿಸಿಯೇ ಆನೆ ಅಂತ್ಯಕ್ರಿಯೆ: ಮಣ್ಣಲ್ಲಿ‌ ಮಣ್ಣಾಯ್ತಾ ಅರ್ಜುನನ ಸಾವಿನ ರಹಸ್ಯ…!

Elephant Arjuna death: ಆನೆ ಅರ್ಜುನನಿಗೆ ಸಾವಿರಾರು ಜನರು ಕಣ್ಣೀದಿನಿಂದ ವಿದಾಯ ಹೇಳಿದ್ದಾರೆ. ಹೋಗಿ ಬಾ ದೊರೆ ಎಂದು ಭಾವುಕ ಬೀಳ್ಕೊಡುಗೆ ನೀಡಿದ್ದಾರೆ. ಇನ್ನು ಮಾವುತರ ಗೋಳಾಟ, ಆಕ್ರಂದನ ಮುಗಿಲು ಮುಟ್ಟಿತ್ತು. ಇದರ ನಡುವೆ ಸಕಲ ಸರ್ಕಾರಿ ಗೌರವಗೊಂದಿಗೆ ಅರ್ಜುನನ ಅಂತ್ಯಕ್ರಿಯೆ ಮಾಡಲಾಗಿದೆ. ಆದ್ರೆ, ಅರ್ಜುನ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಅರ್ಜುನನ ಸಾವಿನ ರಹಸ್ಯ ಮಣ್ಣಲ್ಲಿ ಮಣ್ಣಾಗಿದೆ.

ಅನುಮಾನ ಉಳಿಸಿಯೇ ಆನೆ ಅಂತ್ಯಕ್ರಿಯೆ: ಮಣ್ಣಲ್ಲಿ‌ ಮಣ್ಣಾಯ್ತಾ ಅರ್ಜುನನ ಸಾವಿನ ರಹಸ್ಯ...!
ಅರ್ಜುನ ಆನೆ
Follow us
ಮಂಜುನಾಥ ಕೆಬಿ
| Updated By: ರಮೇಶ್ ಬಿ. ಜವಳಗೇರಾ

Updated on: Dec 06, 2023 | 8:40 AM

ಹಾಸನ, (ಡಿಸೆಂಬರ್ 06): ಸಾಕಾನೆ ಅರ್ಜುನನ (elephant arjuna)ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಮಹಾ ಪ್ರಮಾದ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾಲಿಗೆ ಗುಂಡೇಟು ಬಿದ್ದು ಅರ್ಜುನ ನೆಲಕ್ಕುರುಳಿದ್ದ. ಆಗ ಕಾಡಾನೆ ಕೋರೆಯಿಂದ ತಿವಿದು ಸಾಯಿಸಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಅರ್ಜುನನ ಸಾವಿನ ಬಗ್ಗೆ ಸ್ವತಃ ಮಾವುತನೇ ಅನುಮಾನ ವ್ಯಕ್ತಪಡಿಸಿದರೂ ಸಹ ತಲೆ ಕೆಡಿಸಿಕೊಳ್ಳದ ಅರಣ್ಯ ಇಲಾಖೆ ಅಧಿಕಾರಿಗಳು ಆತುರಾತುರವಾಗಿ ಗುಂಡಿಗೆ ಹಾಕಿ ಮಣ್ಣು ಮುಚ್ಚಿದ್ದಾರೆ.

ಅರ್ಜುನನ ದೇಹಕ್ಕೆ ಗುಂಡೇಟು ತಗುಲಿದೆ ಎಂಬ ಅನುಮಾನ ಇದ್ದರೂ ಸಹ ವಿಸ್ತ್ರತ ಮರಣೋತ್ತರ ಪರೀಕ್ಷೆ ನಡೆಯಲಿಲ್ಲ. ಅದಿಕಾರಿಗಳು ಕೇವಲ ಬಾಹ್ಯ ಮರಣೋತ್ತರ ಪರೀಕ್ಷೆ ನಡೆಸಿ ಕೈತೊಳೆದುಕೊಂಡಿದ್ದಾರೆ. ಅಲ್ಲದೇ ಕನಿಷ್ಟ ಅರ್ಜನನ ಮೃತದೇಹದ ಮತ್ತೊಂದು ಭಾಗವನ್ನು ನೋಡದೇ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ. ಇದರೊಂದಿಗೆ ಅರ್ಜುನ ಸಾವಿನ ರಹಸ್ಯ ಮಣ್ಣಲ್ಲಿ ಮಣ್ಣಾಗಿದೆ.

ಇದನ್ನೂ ಓದಿ: ಮೈಸೂರು, ಹಾಸನ ಜಿಲ್ಲೆಯಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆಗೆ ಸ್ಮಾರಕ ನಿರ್ಮಾಣ; ಈಶ್ವರ ಖಂಡ್ರೆ ನೇತೃತ್ವದ ಸಭೆಯಲ್ಲಿ ನಿರ್ಧಾರ

ಮೃತಪಟ್ಟ ವೇಳೆ ದೇಹದ ಎಡಭಾಗದ ಎರಡು ಕಾಲುಗಳನ್ನು ಮೇಲೆ ಮಾಡಿ ಬಿದ್ದಿದ್ದ. ಅರ್ಜುನನ ಬಲ‌ಕಾಲಿಗೆ ಗುಂಡೇಟು ಬಿದ್ದಿತ್ತು. ಗುಂಡೇಟು ತಗುಲಿದ ಬಳಿಕ ಅರ್ಜುನ ಬಲ ಹೀನನಾದ, ಬಳಿಕ ಕಾಡಾನೆ ಜೊತೆ ಹೋರಾಟ ಸಾದ್ಯವಾಗಲಿಲ್ಲ ಎಂದು ಮಾವುತ ವಿನು ಹಾಗೂ ಕಾವಾಡಿಗ ಅನಿಲ್ ಹೇಳಿದ್ದಾರೆ. ಇದರಿಂದ ಅರ್ಜುನನ ಸಾವಿಗೆ ಗುಂಡೇಟು ಒಂದು ಕಾರಣ ಇರಬಹುದಾ ಎಂಬ ಅನುಮಾನ ಇದ್ದರೂ ಕೂಡ ಮರಣೋತ್ತರ ಪರೀಕ್ಷೆ ನಡೆಯಲಿಲ್ಲ. ಮೃತದೇಹದ ಮತ್ತೊಂದು ಮಗ್ಗುಲು ಹೊರಳಿಸಿ ನೋಡೋ ಬಗ್ಗೆಯೂ ಅಧಿಕಾರಿಗಳು ಕ್ರಮ ವಹಿಸಿಲ್ಲ. ಬದಲಾಗಿ ಅರ್ಜುನ ಮೃತಪಟ್ಟು ಬಿದ್ದ ಸ್ಥಿತಿಯಂತೆಯೇ ಗುಂಡಿಗಿಳಿಸಿದ್ದಾರೆ.

ಕೇವಲ ದಂತ ತೆಗೆದು, ದೇಹದ ಒಂದು ಭಾಗದ ಬಾಹ್ಯ ಪರೀಕ್ಷೆ ನಡೆಸಿ ಇದೇ ಮರಣೋತ್ತರ ಪರೀಕ್ಷೆ ಎನ್ನುತ್ತಿದ್ದಾರೆ. ಆದರೆ ಕನಿಷ್ಠ ಜನರ ಅನುಮಾನ ದೂರಮಾಡಲಾದರೂ ಸೂಕ್ತ ಮರಣೋತ್ತರ ಪರೀಕ್ಷೆ ಪ್ರಕ್ರಿಯೆ ನಡೆಸದ ಅಧಿಕಾರಿಗಳು, ದಸರಾ ಆನೆ, ಅಂಬಾರಿ ಆನೆ ಎನ್ನೋ ನೆಪ ಹೇಳಿ ಅನುಮಾನ ಉಳಿಸಿಯೇ ಅಂತ್ಯಕ್ರಿಯೆ ಮಾಡಿ ಮುಗಿಸಿದ್ದಾರೆ. ಇದರಿಂದ ಅರಣ್ಯ ಇಲಾಖೆ ಅಧಿಕಾರಿಗಳ ನಡೆ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಉನ್ನತ ತನಿಖೆಯಾಗಬೇಕೆಂದು ಜನರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ