Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ; ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಭಾಗಿ

ಯಾವುದೇ ಸಂಶೋದನೆ ಅಥವಾ ಆವಿಷ್ಕಾರಗಳು ಪರಿಸರಕ್ಕೆ ಮಾರಕ ಆಗುವ ರೀತಿ ಇರಬಾರದು. ಪರಿಸರಕ್ಕೆ ಎಲ್ಲರೂ ಗೌರವ ಕೊಡಬೇಕು. ಜೊತೆಗೆ ಪರಿಸರವನ್ನು ಎಂದಿಗೂ ದುರುಪಯೋಗ ಪಡಿಸಿಕೊಳ್ಳಬಾರದು. ಜೊತೆಗೆ ಪದವಿಧರರು ಗುರುಗಳು ಹೇಳಿಕೊಟ್ಟ ಬದುಕಿನ ಮೌಲ್ಯಗಳನ್ನು ಎಂದಿಗೂ ಮರೆಯಬಾರದು ಎಂದು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.

ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ; ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಭಾಗಿ
ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪ್ರದಾನ ಕಾರ್ಯಕ್ರಮ
Follow us
TV9 Web
| Updated By: preethi shettigar

Updated on: Feb 19, 2022 | 4:21 PM

ಹಾಸನ: ನಗರದ ಸರ್ಕಾರಿ ವಿಜ್ಞಾನ (ಸ್ವಾಯತ್ತ) ಕಾಲೇಜಿನಲ್ಲಿ ಶನಿವಾರ (ಫೆಬ್ರವರಿ 19) ಆಯೋಜಿಸಿದ್ದ ಮೊದಲ ಪದವಿ ಪ್ರದಾನ ಸಮಾರಂಭದಲ್ಲಿ ಬೆಂಗಳೂರಿನ ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ಉಪಸ್ಥಿತರಿದ್ದರು. ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಡೆದ ಪದವಿಗಳು ವೈಯಕ್ತಿಕ ಹಾಗೂ ದೇಶದ ಬೆಳವಣಿಗೆಗೆ ಸಹಕಾರಿಯಾಗಲಿ. ಕಲಿತ ವಿದ್ಯೆಯಿಂದ ದೇಶ ಹಾಗೂ ಸಮಾಜಕ್ಕೆ ಉಪಯೋಗ ಆಗುವ ರೀತಿಯ ಯೋಚನೆ ಮನಸ್ಸಿನಲ್ಲಿ ಹೊಂದಬೇಕು. ಕೆಲ ದಶಕಗಳ ಹಿಂದಿಗಿಂತ ಇಂದು ಅವಕಾಶ ಹೆಚ್ಚಿವೆ. ಅದರ ಜೊತೆಯಲ್ಲೇ ಸ್ಪರ್ಧೆ ಮತ್ತು ಸವಾಲುಗಳು ಹೆಚ್ಚಿವೆ. ಈ ಸವಾಲುಗಳನ್ನು ಎದುರಿಸಬೇಕಾದಲ್ಲಿ ಕೌಶಲಗಳನ್ನು ಮೈಗೂಡಿಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು.

ಯಾವುದೇ ಸಂಶೋದನೆ ಅಥವಾ ಆವಿಷ್ಕಾರಗಳು ಪರಿಸರಕ್ಕೆ ಮಾರಕ ಆಗುವ ರೀತಿ ಇರಬಾರದು. ಪರಿಸರಕ್ಕೆ ಎಲ್ಲರೂ ಗೌರವ ಕೊಡಬೇಕು. ಜೊತೆಗೆ ಪರಿಸರವನ್ನು ಎಂದಿಗೂ ದುರುಪಯೋಗ ಪಡಿಸಿಕೊಳ್ಳಬಾರದು. ಜೊತೆಗೆ ಪದವಿಧರರು ಗುರುಗಳು ಹೇಳಿಕೊಟ್ಟ ಬದುಕಿನ ಮೌಲ್ಯಗಳನ್ನು ಎಂದಿಗೂ ಮರೆಯಬಾರದು ಎಂದು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾರ್ಥಿ ಜೀವನದಲ್ಲಿ ಇದ್ದಷ್ಟು ಸ್ವಾತಂತ್ರ್ಯ ಮುಂದಿನ ಬದುಕಿನಲ್ಲಿ ಇರುವುದಿಲ್ಲ. ಪ್ರಸ್ತುತ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ವೇಗವಾಗಿ ಬೆಳವಣಿಗೆ ಆಗುತ್ತಿದೆ. ಅ ವೇಗಕ್ಕೆ ಹೊಂದಿಕೊಳ್ಳಬೇಕಿದೆ. ಇಂದಿನ ಪದವಿ ಜೀವನ ರೂಪಿಸಿಕೊಳ್ಳಲು ಕೇವಲ ಒಂದು ಮಾತ್ರವೇ ಬಳಕೆಗೆ ಬರಬಹುದು. ಆದರೆ 60 ದಶಕಗಳ ಹಿಂದೆ ಕಲಿತ ವಿದ್ಯೆ 20 ವರ್ಷದ ವರೆಗೂ ವೃತ್ತಿ ಜೀವನಕ್ಕೆ ಅನುಕೂಲ ಆಗುತ್ತಿತ್ತು ಎಂದು ಇಸ್ರೋದ ವಿಶ್ರಾಂತ ಅಧ್ಯಕ್ಷ ಡಾ.ಕಿರಣ್ ಕುಮಾರ್ ತಿಳಿಸಿದರು.

ಬಳಿಕ ಮಾತನಾಡಿದ ಅವರು, ಭಾರತ ಆರ್ಥಿಕವಾಗಿ ವಿಶ್ವದಲ್ಲಿ 6ನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ಬರಲು ಹೆಜ್ಜೆ ಇಡುತ್ತಿದೆ. ಅದು ಸಾಕಾರವಾಗಬೇಕಾದರೆ ಯುವಕರು ಎಲ್ಲಾ ಕ್ಷೇತ್ರದಲ್ಲಿಯೂ ಹೆಚ್ಚು ಕೆಲಸ ಮಾಡುವ ಮೂಲಕ ದೇಶವನ್ನು ಮುನ್ನಡೆಸಬೇಕಾಗಿದೆ ಎಂದು ಹೇಳಿದರು.

ಉಪಗ್ರಹಗಳಿಂದ ಇಂದು ಸಾಕಷ್ಟು ಉಪಯೋಗ ಪಡೆಯುತ್ತಿದ್ದೇವೆ. ಮಾಹಿತಿ ತಂತ್ರಜ್ಞಾನ, ಸಂವಾಹನ, ಹವಮಾನ ಮಾಹಿತಿ ಇತ್ಯಾದಿ ಸಾಕಷ್ಟು ಅನುಕೂಲ ಪಡೆಯುತ್ತಿದ್ದೇವೆ. ವಿಜ್ಞಾನ ಪದವಿ ಪಡೆದ ವಿದ್ಯಾರ್ಥಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಬಳಿಕ ತಾನೂ ಕೂಡ ಇದೇ ಕಾಲೇಜಿನಲ್ಲಿ ಓದಿದ್ದು ಎಂದು ಕಿರಣ್ ಕುಮಾರ್ ಸ್ಮರಿಸಿದರು.

ಕಿರಣ್ ಕುಮಾರ್ ಅವರು 1968 ರಿಂದ 1971 ಅವದಿಯಲ್ಲಿ ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು. ಕಿರಣ್ ಕುಮಾರ ನಂತರ ವಿಜ್ಞಾನ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೆ ಸೇರಿದರು. ಕಾರ್ಯಕ್ರಮದಲ್ಲಿ ವಿವಿಧ ವಿಷಯಗಳಲ್ಲಿ ಗರಿಷ್ಟ ಅಂಕಗಳಿಸಿದ ವಿದ್ಯಾರ್ಥಿಗಳಿಗೆ 25 ಚಿನ್ನದ ಪದಕ ನೀಡಿ ಗೌರವಿಸಲಾಯಿತು.  ಹಾಗೆಯೆ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಸ್.ಎಚ್ ಗಂಗೇಗೌಡ, ಶೈಕ್ಷಣಿಕ ಡೀನ್ ಎಂ.ಅಬ್ದುಲ್ ರಹಿಮಾನ್, ಪರೀಕ್ಷಾ ನಿಯಂತ್ರಕ ಕೆ.ಹರ್ಷೇಂದ್ರ, ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ತಾರಾ ಎಸ್.ಸ್ವಾಮಿ, ಎಚ್.ವಿ.ಲಕ್ಷ್ಮೀ ನಾರಾಯಣ್, ಸುಬ್ರಹ್ಮಣ್ಯ ಇತರರು ಉಪಸ್ಥಿತರಿದ್ದರು.

ವರದಿ: ಮಂಜುನಾಥ್ ಕೆಬಿ

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ, ಜನಪದ ಕಲಾವಿದ ಮಹಾದೇವ ವೇಳಿಪ ಅಸ್ತಂಗತ

Bill Gates: ಬಿಲ್​ ಗೇಟ್ಸ್​​ಗೆ ಪಾಕಿಸ್ತಾನದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಹಿಲಾಲ್-ಎ-ಪಾಕಿಸ್ತಾನ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ