AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಡಿಸಿಗೆ ಯಾರಿಂದ ಕಿರುಕುಳ ಇದೆ ಎಲ್ಲರಿಗೂ ಗೊತ್ತು: ಹೆಚ್​​ಡಿ ರೇವಣ್ಣ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷ ವಾಗ್ದಾಳಿ

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಇಂದು ನಡೆದ ಕಸ್ತೂರಿ ರಂಗನ್ ವರದಿ ಕುರಿತ ನೇರ ಸಂವಾದ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್​ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ಹಾಸನದ ಜಿಲ್ಲಾಧಿಕಾರಿಗೆ ಯಾರಿಂದ ಕಿರಕುಳ ಇದೆ ನಿಮಗೆ ಗೊತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಹೆಚ್​​ಡಿ ರೇವಣ್ಣ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಹಾಸನ ಡಿಸಿಗೆ ಯಾರಿಂದ ಕಿರುಕುಳ ಇದೆ ಎಲ್ಲರಿಗೂ ಗೊತ್ತು: ಹೆಚ್​​ಡಿ ರೇವಣ್ಣ ವಿರುದ್ಧ ಡಿಕೆ ಶಿವಕುಮಾರ್ ಪರೋಕ್ಷ ವಾಗ್ದಾಳಿ
ಡಿಕೆ ಶಿವಕುಮಾರ್​Image Credit source: x.com/DKShivakumar
ಮಂಜುನಾಥ ಕೆಬಿ
| Edited By: |

Updated on: Sep 20, 2026 | 7:39 PM

Share

ಹಾಸನ, ಸೆಪ್ಟೆಂಬರ್​​ 20: ‘ಜಿಲ್ಲೆಯಲ್ಲಿ ಉತ್ತಮ‌ ಅಧಿಕಾರಿಗಳ ತಂಡ ಇದೆ. ಆದರೆ ಇಲ್ಲಿನ ಜಿಲ್ಲಾಧಿಕಾರಿಗೆ ಕಿರುಕುಳ ಇದೆ. ಯಾರಿಂದ ಕಿರುಕುಳ ಇದೆ ಎಂಬುದು ಎಲ್ಲರಿಗೂ ಚೆನ್ನಾಗಿ ಗೊತ್ತಿದೆ’ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಆ ಮೂಲಕ ಮಾಜಿ ಸಚಿವ ಹೆಚ್​​.ಡಿ. ರೇವಣ್ಣ ವಿರುದ್ಧ ಅವರು ಪರೋಕ್ಷವಾಗಿ ಆಕ್ರೋಶ ಹೊರಹಾಕಿದ್ದಾರೆ.

ಯಾರಿಗೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ ಎಂದ ಡಿಕೆ ಶಿವಕುಮಾರ್​​

ಸಕಲೇಶಪುರದಲ್ಲಿ ನಡೆದ ಕಸ್ತೂರಿ ರಂಗನ್ ವರದಿ ಕುರಿತ ನೇರ ಸಂವಾದ ಸಭೆಯಲ್ಲಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ‘ನಾನೇ ಖುದ್ದು ಜಿಲ್ಲಾಧಿಕಾರಿಗೆ ಫೋನ್ ಮಾಡಿ ಧೈರ್ಯ ತುಂಬಿದ್ದೇನೆ. ಯಾರಿಗೂ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ. ಬಡವರ ಪರವಾಗಿ ಕೆಲಸ ಮಾಡಮ್ಮ’ ಎಂದು ಹೇಳಿದ್ದೇನೆ ಎಂದರು.

ಘಟನೆ ಹಿನ್ನೆಲೆ

ಇತ್ತೀಚೆಗೆ ಗ್ರಾಮ ಪಂಚಾಯಿತಿ ಚುನಾವಣಾ ಮೀಸಲಾತಿ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್‌.ಡಿ. ರೇವಣ್ಣ ಹಾಗೂ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ನಡುವೆ ತೀವ್ರ ಮಾತಿನ ಸಮರವೇ ನಡೆದಿತ್ತು. ಈ ವೇಳೆ ರೇವಣ್ಣ ಅವರು ಜಿಲ್ಲಾಧಿಕಾರಿಯವರ ವಿರುದ್ಧ ಸಾರ್ವಜನಿಕವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಡಿಸಿ ಕೂಡ ತಮ್ಮ ಮೇಲಿನ ಆರೋಪಗಳಿಗೆ ಖಡಕ್​​ ತಿರುಗೇಟು ನೀಡಿದ್ದರು. ಈ ವಿಚಾರ ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು.

LIVE TV

ಅಧಿಕಾರದ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಡಿಕೆ ಶಿವಕುಮಾರ್​​

ಇನ್ನು ಇದೇ ಸಂದರ್ಭದಲ್ಲಿ ತಮ್ಮ ಅಧಿಕಾರದ ಅವಧಿಯ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ ಡಿಕೆ ಶಿವಕುಮಾರ್​, ‘ನನಗೆ ಎಷ್ಟು ದಿನ ಸಮಯವಿದೆಯೋ ಗೊತ್ತಿಲ್ಲ. ಎಲ್ಲಿಯವರೆಗೂ ನನ್ನ ಶ್ರಮ ಇರುತ್ತದೆಯೋ, ಅಲ್ಲಿಯವರೆಗೂ ಜನರಿಗೆ ಸ್ಪಂದಿಸುತ್ತೇನೆ. ಅಲ್ಲಿಯವರೆಗೂ ನನಗೆ ಶಕ್ತಿ ಇರುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ: ಹಾಸನದಲ್ಲಿ ಮತ್ತೆ ಹೆಚ್​​.ಡಿ.ರೇವಣ್ಣ v/s ಜಿಲ್ಲಾಧಿಕಾರಿ: ಗ್ರಾ.ಪಂ.ಗಳ ಚುನಾವಣೆ ಮೀಸಲು ಸಂಬಂಧ ಜಟಾಪಟಿ

‘ದೇವರು ವರವನ್ನೂ ಕೊಡಲ್ಲ, ಶಾಪವನ್ನೂ ಕೊಡಲ್ಲ, ಕೇವಲ ಅವಕಾಶ ಕೊಡುತ್ತಾನೆ. ನೀವು ನನಗೊಂದು ಅವಕಾಶ ಕೊಟ್ಟಿದ್ದೀರಿ, ನಾನು ನಿಮ್ಮ ಕೆಲಸ ಮಾಡುತ್ತೇನೆ. ಇದೇ ವೇಳೆ, ‘ಬಿಜೆಪಿ ಸ್ನೇಹಿತರು ಅವರ ಸಾಧನೆಗಳನ್ನು ಹೇಳಿಕೊಳ್ಳಲಿ, ಬೇಡ ಎನ್ನಲ್ಲ. ಆದರೆ ಕೆಲಸ ಮಾಡದೆ ಹೋದಾಗ ಪ್ರಶ್ನಿಸಬೇಕಾಗುತ್ತದೆ’ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡರಿಗೆ ಸಿಎಂ ಸಲಹೆ

ಸ್ಥಳೀಯ ನಾಯಕರ ಕಾರ್ಯವೈಖರಿ ಕುರಿತು ಪ್ರಸ್ತಾಪಿಸಿದ ಅವರು, ‘ಶಿವಲಿಂಗೇಗೌಡರಿಗೆ ಅಧಿಕಾರದಲ್ಲಿ ಅವಕಾಶ ನೀಡಿದ್ದೇವೆ. ಅವರೇನು ಪದೇ ಪದೇ ಬೆಂಗಳೂರಿಗೆ ಬರುವ ಅವಶ್ಯಕತೆ ಇಲ್ಲ. ಹಳ್ಳಿ ಹಳ್ಳಿಗೆ ತಿರುಗಿ ಜನರ ಸಮಸ್ಯೆಗಳನ್ನು ಆಲಿಸಿ ಬಗೆಹರಿಸುವ ಕೆಲಸ ಮಾಡಲಿ’ ಎಂದು ಕಿವಿಮಾತು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಇಸ್ಲಾಂಪೇಟೆಯಲ್ಲಿ ಮತ್ತೆ ಗಣಪತಿ ಮೆರವಣಿಗೆಗೆ ಶಾಸಕ ಕೃಷ್ಣಾನಾಯಕ್ ಚಾಲನೆ!
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಇಬ್ಬರು ಅಮಾನತು
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಸೌಂದರ್ಯಾ ಬಗ್ಗೆ ಕೆಟ್ಟದಾಗಿ ಮಾತನಾಡಿದ ಮಂಜನಿಗೆ ಬುದ್ಧಿ ಕಲಿಸಿದ ಕಿಚ್ಚ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ಬೆಂಗಳೂರಿನಲ್ಲಿ ಹೋಟೆಲ್​ ಬಳಿ ನಿಂತಿದ್ದ ಆಡಿ ಕಾರಿನಲ್ಲಿ ಮೃತದೇಹ ಪತ್ತೆ
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು
ತುಂಗಭದ್ರಾ ಡ್ಯಾಂನಿಂದ ನೀರು ಕಳ್ಳತನ ಮಾಡುತ್ತಿರುವ ಕಾರ್ಖಾನೆಗಳು