AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರಜ್ ರೇವಣ್ಣ ಮೇಲ್ಮನೆ ಪ್ರವೇಶಿಸಲಿ ಎಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಅಭಿಮಾನಿ ಬೇಡಿಕೆ

ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ಲಲಿ ಎಂದು ಅವರ ಅಭಿಮಾನಿಯೊಬ್ಬ ಶಬರಿಮಲೆಗೆ ಹರಕೆ ಹೊತ್ತು ವೃತಾಚರಣೆ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೊಳೆನರಸೀಪುರದ ಎಂ.ಪಿ‌.ನವೀನ್ ಕುಮಾರ್ ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಮಾಡಿ ತಮ್ಮ ನಾಯಕನ ಗೆಲುವಿಗೆ ಪ್ರಾರ್ಥಸಿದ್ದಾರೆ.

ಸೂರಜ್ ರೇವಣ್ಣ ಮೇಲ್ಮನೆ ಪ್ರವೇಶಿಸಲಿ ಎಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಅಭಿಮಾನಿ ಬೇಡಿಕೆ
ಸೂರಜ್ ರೇವಣ್ಣ ಮೇಲ್ಮನೆ ಪ್ರವೇಶಿಸಲಿ ಎಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಅಭಿಮಾನಿ ಬೇಡಿಕೆ
TV9 Web
| Edited By: ಆಯೇಷಾ ಬಾನು|

Updated on: Dec 01, 2021 | 2:54 PM

Share

ಹಾಸನ: ಹಾಸನ ವಿಧಾನಪರಿಷತ್ ಚುನಾವಣಾ ಕಣ ರಂಗೇರುತ್ತಿದೆ. ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಗೆ 4 ಕಲಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸದ್ಯ ಜೆಡಿಎಸ್ನ ಆರ್.ಸೂರಜ್ ರೇವಣ್ಣ ವಿಧಾನಪರಿಷತ್ ಸದಸ್ಯರಾಗಲಿ ಎಂದು ಅಭಿಮಾನಿಯೊಬ್ಬರು ಮಾಲೆ ಧರಿಸಿ ಶಬರಿಮಲೆ ಸ್ವಾಮಿ ಅಯ್ಯಪ್ಪ ಸನ್ನಿಧಾನದಲ್ಲಿ ಪ್ರಾರ್ಥಿಸಿದ್ದಾರೆ.

ಗೌಡರ ಕುಟುಂಬದ ಕುಡಿ ಡಾ.ಸೂರಜ್ ರೇವಣ್ಣ ಸ್ಪರ್ದೆಯಿಂದ ಕುತೂಹಲ ಮೂಡಿಸಿರೋ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ, ಗೆಲುವಿಗಾಗಿ ಮೂರೂ ಪಕ್ಷದ ಅಭ್ಯರ್ಥಿಗಳು ನಾಯಕರು ಹಗಲಿರುಳು ಶ್ರಮಿಸುತ್ತಿದ್ದಾರೆ. ಇತ್ತ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ಲಲಿ ಎಂದು ಅವರ ಅಭಿಮಾನಿಯೊಬ್ಬ ಶಬರಿಮಲೆಗೆ ಹರಕೆ ಹೊತ್ತು ವೃತಾಚರಣೆ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೊಳೆನರಸೀಪುರದ ಎಂ.ಪಿ‌.ನವೀನ್ ಕುಮಾರ್ ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಮಾಡಿ ತಮ್ಮ ನಾಯಕನ ಗೆಲುವಿಗೆ ಪ್ರಾರ್ಥಸಿದ್ದಾರೆ. ತಮ್ಮ ಕೋರಿಕೆಯನ್ನು ಬಾಳೆ ಹಣ್ಣಿನ ಮೇಲೆ ಬರೆದು ದೇವರಿಗೆ ಸಮರ್ಪಣೆ ಮಾಡಿದ್ದಾರೆ. ಸೂರಜ್ ರೇವಣ್ಣ ರವರು ವಿಧಾನ ಪರಿಷತ್ ಸದಸ್ಯರಾಗಲಿ ಎಂದು ಶಬರಿಮಲೆ ಸ್ವಾಮಿ ಅಯ್ಯಪ್ಪ ಸನ್ನಿಧಾನದಲ್ಲಿ ನವೀನ್ ಕುಮಾರ್ ಎಂ.ಪಿ. ಪ್ರಾರ್ಥನೆ ಸಲ್ಲಿಸಿದ್ದು ತಮ್ಮ ಫೇಸ್​ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನು ಹಾಸನ ವಿಧಾನ ಪರಿಷತ್ ಅಖಾಡದಲ್ಲಿ ಕಾಂಗ್ರೆಸ್ನ ಎಂ.ಶಂಕರ್, ಬಿಜೆಪಿಯ ಹೆಚ್.ಎಂ.ವಿಶ್ವನಾಥ್, ಜೆಡಿಎಸ್ನ ಆರ್.ಸೂರಜ್ ಹಾಗೂ ಪಕ್ಷೇತರ ಅಭ್ಯರ್ಥಿ ಎಚ್.ಡಿ.ರೇವಣ್ಣ ಇದ್ದಾರೆ. ಇದೇ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಧಾರವಾಡ ವಿಧಾನ ಪರಿಷತ್ ಚುನಾವಣೆ; ಸಿಎಂ ಬೊಮ್ಮಾಯಿಗೆ ರಾಜಕೀಯ ನೆಲೆ ಕಲ್ಪಿಸಿದ ಕ್ಷೇತ್ರ ಈ ಬಾರಿ ಯಾರ ಕೈ ಹಿಡಿಯುತ್ತೆ?

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ