AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide ಮಗಳ ಸಾವಿನಿಂದ ಮನನೊಂದು ಅಳಿಯನ ಮನೆ ಮುಂದೆ ತಂದೆ ನೇಣಿಗೆ ಶರಣು

ಮಗಳು ಇಷ್ಟಪಡುತ್ತಿದ್ದ ಅಹಾರ ಪದಾರ್ಥಗಳನ್ನು ಮನೆ ಬಾಗಿಲಲ್ಲಿ ಎಡೆಯಿಟ್ಟು ಬಾಗಿಲಿನಲ್ಲೇ ನೇಣುಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Suicide ಮಗಳ ಸಾವಿನಿಂದ ಮನನೊಂದು ಅಳಿಯನ ಮನೆ ಮುಂದೆ ತಂದೆ ನೇಣಿಗೆ ಶರಣು
ಮಗಳ ಸಾವಿನಿಂದ ಮನನೊಂದು ಅಳಿಯನ ಮನೆ ಮುಂದೆ ತಂದೆ ನೇಣಿಗೆ ಶರಣು
Follow us
TV9 Web
| Updated By: ಆಯೇಷಾ ಬಾನು

Updated on: Dec 09, 2021 | 7:38 AM

ಹಾಸನ: ಮಗಳ ಸಾವಿನಿಂದ ಮನನೊಂದು ತಂದೆ ನೇಣಿಗೆ ಶರಣಾದ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಮಾಳೆಗೆರೆ ಗ್ರಾಮದಲ್ಲಿ ನಡೆದಿದೆ. ಅಳಿಯನ ಮನೆ ಮುಂದೆ ತಂದೆ ನಾಗರಾಜ್(55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಗಳು ಇಷ್ಟಪಡುತ್ತಿದ್ದ ಅಹಾರ ಪದಾರ್ಥಗಳನ್ನು ಮನೆ ಬಾಗಿಲಲ್ಲಿ ಎಡೆಯಿಟ್ಟು ಬಾಗಿಲಿನಲ್ಲೇ ನೇಣುಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಳಿಯ ಪ್ರವೀಣ್, ಬೀಗರಾದ ಭದ್ರಮ್ಮ ಅವರ ಸಂಬಂಧಿ ವಿರುದ್ದ ಮಾನಸಿಕ ಕಿರುಕುಳ ಆರೋಪ ಕೇಳಿ ಬಂದಿದೆ. ವರ್ಷದ ಹಿಂದೆ ನಾಗರಾಜ್ ಪುತ್ರಿ ಹೇಮಶ್ರಿಯನ್ನು ಮಾಳೆಗೆರೆಯ ಪ್ರವೀಣ್ಗೆ ವಿವಾಹ ಮಾಡಿಕೊಡಲಾಗಿತ್ತು. ಮಗಳು ಗರ್ಭಿಣಿಯಾದ ವೇಳೆ ಮಗಳ ಗರ್ಭಪಾತಕ್ಕೆ ಯತ್ನಿಸಲಾಗಿದೆ ಎಂದು ಮೃತ ನಾಗರಾಜ್ ಕುಟುಂಬ ಆರೋಪಿಸಿದೆ. ಮಗಳಿಗೆ ಕಿರುಕುಳ ನೀಡಿದ್ದರಿಂದ ಆಕೆ ಹೆರಿಗೆ ವೇಳೆಯಲ್ಲಿ ಮೃತಪಟ್ಟಿದ್ದಾಳೆ ಎಂದು ದೂರು ನೀಡಲಾಗಿದೆ. ಸಾವಿನ ಬಳಿಕ ಮಗಳ ಕಾರ್ಯಗಳನ್ನು ಸರಿಯಾಗಿ ಮಾಡಿಲ್ಲ ಎಂದು ನಾಗರಾಜ್ ಮನನೊಂದಿದ್ದರು. ಜೊತೆಗೆ ಅಳಿಯ ಪಡೆದಿದ್ದ ಎರಡು ಲಕ್ಷ ಸಾಲ ಹಿಂದಿರುಗಿಸದೆ ಸತಾಯಿಸುತ್ತಿದ್ದರಿಂದ ಬೇಸತ್ತಿದ್ದರು.

ನಿನ್ನೆ ಹಾಡ ಹಗಲೇ ಅಳಿಯನ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿ ಅಳಿಯ, ಆತನ ತಾಯಿ ಹಾಗು ಸಂಬಂಧಿಕರ ಬಗ್ಗೆ ಆರೋಪ ಮಾಡಿದ್ದಾರೆ. ಮೂವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿ ಮಗಳಿಗೆ ಎಡೆ ಇಟ್ಟು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Father Suicide

ಅಳಿಯ ಮಗಳು

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 399 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು

ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​