AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ರೈತರ ಕಡತ ನಾಪತ್ತೆ: ತಹಸೀಲ್ದಾರ್‌ಗೆ ದೂರು ನೀಡಿದ ಗ್ರಾಮಸ್ಥರು

ಕಲ್ಲು ಗಣಿಗಾರಿಕೆ ಮಾಲೀಕರು ನಮ್ಮ ಜಮೀನು ಒತ್ತುವರಿ ಮಾಡಿದ್ದಾರೆ. ಕೇವಲ ಎರಡು ತಿಂಗಳಿನಲ್ಲಿ ಗಣಿಗಾರಿಕೆ ನಡೆಸುವವರಿಗೆ ಜಮೀನು ಖಾತೆ ಮಾಡಿ ಕೊಟ್ಟಿದ್ದಾರೆ. ನಮ್ಮ ಹೆಸರಿಗೆ ಖಾತೆ ಮಾಡಿಸಲು ದಾಖಲೆ ಕೇಳಿದರೆ ಕಡತ ಇಲ್ಲ ಎನ್ನುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ರೈತರ ಕಡತ ನಾಪತ್ತೆ: ತಹಸೀಲ್ದಾರ್‌ಗೆ ದೂರು ನೀಡಿದ ಗ್ರಾಮಸ್ಥರು
ರೈತರ ಕಡತ ನಾಪತ್ತೆ
TV9 Web
| Edited By: |

Updated on: May 17, 2022 | 10:30 AM

Share

ಹಾಸನ : ತಾಲ್ಲೂಕು ಕಚೇರಿಯಲ್ಲೇ ರೈತರ ಕಡತಗಳು ನಾಪತ್ತೆಯಾಗಿದ್ದು, ನಾಲ್ವರು ಸಿಬ್ಬಂದಿಗೆ ಜಿಲ್ಲೆಯ ಹೊಳೆನರಸೀಪುರ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿಯಿಂದ ನೋಟೀಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ಕಲ್ಲೋರೆ ಬೋರೆ ಕಾವಲ್ ಗ್ರಾಮದ ಸರ್ವೆ ನಂ.1 ರ ಮಂಜೂರಾತಿ ಕಡತಗಳು ನಾಪತ್ತೆಯಾಗಿವೆ. ದ್ವಿತೀಯ ದರ್ಜೆ ಸಹಾಯಕರುಗಳಾದ ಎಂ.ಜಿ.ಸತೀಶ್‌ಕುಮಾರ್, ಮಾದಯ್ಯ.ಡಿ, ರಂಗರಾಜು, ರವಿ ಎಂಬುವವರಿಗೆ ನೋಟೀಸ್ ಜಾರಿ ಮಾಡಲಾಗಿದೆ. ತಾಲ್ಲೂಕಿನ ಸಿ.ಹಿಂದಲಹಳ್ಳಿ ಗ್ರಾಮಸ್ಥರು ದಾಖಲೆ ಕೇಳಿದಾಗ ಪ್ರಕರಣ ಬಯಲಾಗಿದೆ. 80 ವರ್ಷದಿಂದ ಸರ್ಕಾರಿ ಜಮೀನು ಉಳುಮೆ ಮಾಡುತ್ತಿದ್ದ ಗ್ರಾಮಸ್ಥರು, ದರಕಾಸ್ತಿನಲ್ಲಿ ಜಮೀನು ಖಾತೆಗಾಗಿ 65 ಕುಟಂಬಗಳು ದಾಖಲೆ‌ ಕೇಳಿದ್ದಾರೆ. ಮೇ.5 ರಂದು ಸಾಗುವಳಿ ಪತ್ರ, ಮಂಜೂರಾತಿ ಪತ್ರದ ನಕಲುಗಳನ್ನು ನೀಡಿದ್ದ ತಾಲ್ಲೂಕು ಕಚೇರಿ ಸಿಬ್ಬಂದಿ, ಮೇ.9 ರಂದು ಬಾಂಡ್ ಪೇಪರ್, ಮ್ಯೂಟೇಷನ್ ನೀಡುವುದಾಗಿ ಹೇಳಿದ್ದರು. ಕಛೇರಿಗೆ ಬಂದು ದಾಖಲೆ ಕೇಳಿದಾಗ ಕಡತ ಕಳೆದು ಹೋಗಿದೆ ಎಂದು ಗ್ರಾಮ ಸಹಾಯಕರು ಹೇಳಿದ್ದು, ತಕ್ಷಣ ಗ್ರಾಮಸ್ಥರು ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ.

ಕಲ್ಲು ಗಣಿಗಾರಿಕೆ ಮಾಲೀಕರು ನಮ್ಮ ಜಮೀನು ಒತ್ತುವರಿ ಮಾಡಿದ್ದಾರೆ. ಕೇವಲ ಎರಡು ತಿಂಗಳಿನಲ್ಲಿ ಗಣಿಗಾರಿಕೆ ನಡೆಸುವವರಿಗೆ ಜಮೀನು ಖಾತೆ ಮಾಡಿ ಕೊಟ್ಟಿದ್ದಾರೆ. ನಮ್ಮ ಹೆಸರಿಗೆ ಖಾತೆ ಮಾಡಿಸಲು ದಾಖಲೆ ಕೇಳಿದರೆ ಕಡತ ಇಲ್ಲ ಎನ್ನುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಸಿ.ಹಿಂದಲಹಳ್ಳಿ ಗ್ರಾಮಸ್ಥರು, ಕಲ್ಲು ಗಣಿಗಾರಿಕೆ ನಡೆಸುವವರಿಗೆ ಅನುಕೂಲ ಮಾಡಿ ಕೊಡಲು ಅಧಿಕಾರಿಗಳಿಂದ ಅಕ್ರಮ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?