AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ರೈತರ ಕಡತ ನಾಪತ್ತೆ: ತಹಸೀಲ್ದಾರ್‌ಗೆ ದೂರು ನೀಡಿದ ಗ್ರಾಮಸ್ಥರು

ಕಲ್ಲು ಗಣಿಗಾರಿಕೆ ಮಾಲೀಕರು ನಮ್ಮ ಜಮೀನು ಒತ್ತುವರಿ ಮಾಡಿದ್ದಾರೆ. ಕೇವಲ ಎರಡು ತಿಂಗಳಿನಲ್ಲಿ ಗಣಿಗಾರಿಕೆ ನಡೆಸುವವರಿಗೆ ಜಮೀನು ಖಾತೆ ಮಾಡಿ ಕೊಟ್ಟಿದ್ದಾರೆ. ನಮ್ಮ ಹೆಸರಿಗೆ ಖಾತೆ ಮಾಡಿಸಲು ದಾಖಲೆ ಕೇಳಿದರೆ ಕಡತ ಇಲ್ಲ ಎನ್ನುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಹೊಳೆನರಸೀಪುರ ತಾಲೂಕು ಕಚೇರಿಯಲ್ಲಿ ರೈತರ ಕಡತ ನಾಪತ್ತೆ: ತಹಸೀಲ್ದಾರ್‌ಗೆ ದೂರು ನೀಡಿದ ಗ್ರಾಮಸ್ಥರು
ರೈತರ ಕಡತ ನಾಪತ್ತೆ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: May 17, 2022 | 10:30 AM

Share

ಹಾಸನ : ತಾಲ್ಲೂಕು ಕಚೇರಿಯಲ್ಲೇ ರೈತರ ಕಡತಗಳು ನಾಪತ್ತೆಯಾಗಿದ್ದು, ನಾಲ್ವರು ಸಿಬ್ಬಂದಿಗೆ ಜಿಲ್ಲೆಯ ಹೊಳೆನರಸೀಪುರ ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿಯಿಂದ ನೋಟೀಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ತಾಲ್ಲೂಕಿನ ಹಳ್ಳಿಮೈಸೂರು ಹೋಬಳಿಯ ಕಲ್ಲೋರೆ ಬೋರೆ ಕಾವಲ್ ಗ್ರಾಮದ ಸರ್ವೆ ನಂ.1 ರ ಮಂಜೂರಾತಿ ಕಡತಗಳು ನಾಪತ್ತೆಯಾಗಿವೆ. ದ್ವಿತೀಯ ದರ್ಜೆ ಸಹಾಯಕರುಗಳಾದ ಎಂ.ಜಿ.ಸತೀಶ್‌ಕುಮಾರ್, ಮಾದಯ್ಯ.ಡಿ, ರಂಗರಾಜು, ರವಿ ಎಂಬುವವರಿಗೆ ನೋಟೀಸ್ ಜಾರಿ ಮಾಡಲಾಗಿದೆ. ತಾಲ್ಲೂಕಿನ ಸಿ.ಹಿಂದಲಹಳ್ಳಿ ಗ್ರಾಮಸ್ಥರು ದಾಖಲೆ ಕೇಳಿದಾಗ ಪ್ರಕರಣ ಬಯಲಾಗಿದೆ. 80 ವರ್ಷದಿಂದ ಸರ್ಕಾರಿ ಜಮೀನು ಉಳುಮೆ ಮಾಡುತ್ತಿದ್ದ ಗ್ರಾಮಸ್ಥರು, ದರಕಾಸ್ತಿನಲ್ಲಿ ಜಮೀನು ಖಾತೆಗಾಗಿ 65 ಕುಟಂಬಗಳು ದಾಖಲೆ‌ ಕೇಳಿದ್ದಾರೆ. ಮೇ.5 ರಂದು ಸಾಗುವಳಿ ಪತ್ರ, ಮಂಜೂರಾತಿ ಪತ್ರದ ನಕಲುಗಳನ್ನು ನೀಡಿದ್ದ ತಾಲ್ಲೂಕು ಕಚೇರಿ ಸಿಬ್ಬಂದಿ, ಮೇ.9 ರಂದು ಬಾಂಡ್ ಪೇಪರ್, ಮ್ಯೂಟೇಷನ್ ನೀಡುವುದಾಗಿ ಹೇಳಿದ್ದರು. ಕಛೇರಿಗೆ ಬಂದು ದಾಖಲೆ ಕೇಳಿದಾಗ ಕಡತ ಕಳೆದು ಹೋಗಿದೆ ಎಂದು ಗ್ರಾಮ ಸಹಾಯಕರು ಹೇಳಿದ್ದು, ತಕ್ಷಣ ಗ್ರಾಮಸ್ಥರು ತಹಸೀಲ್ದಾರ್‌ಗೆ ದೂರು ನೀಡಿದ್ದಾರೆ.

ಕಲ್ಲು ಗಣಿಗಾರಿಕೆ ಮಾಲೀಕರು ನಮ್ಮ ಜಮೀನು ಒತ್ತುವರಿ ಮಾಡಿದ್ದಾರೆ. ಕೇವಲ ಎರಡು ತಿಂಗಳಿನಲ್ಲಿ ಗಣಿಗಾರಿಕೆ ನಡೆಸುವವರಿಗೆ ಜಮೀನು ಖಾತೆ ಮಾಡಿ ಕೊಟ್ಟಿದ್ದಾರೆ. ನಮ್ಮ ಹೆಸರಿಗೆ ಖಾತೆ ಮಾಡಿಸಲು ದಾಖಲೆ ಕೇಳಿದರೆ ಕಡತ ಇಲ್ಲ ಎನ್ನುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ಸಿ.ಹಿಂದಲಹಳ್ಳಿ ಗ್ರಾಮಸ್ಥರು, ಕಲ್ಲು ಗಣಿಗಾರಿಕೆ ನಡೆಸುವವರಿಗೆ ಅನುಕೂಲ ಮಾಡಿ ಕೊಡಲು ಅಧಿಕಾರಿಗಳಿಂದ ಅಕ್ರಮ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ