ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧವೇ ಎಫ್‌ಐಆರ್

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಆದ್ರೆ, ಇತ್ತ ಆರೋಪ ಮಾಡಿದ ಕಾರ್ಯಕರ್ತನ ವಿರುದ್ದವೇ ಇದೀಗ ಎಫ್‌ಐಆರ್‌ ದಾಖಲಾಗಿದೆ.

ಸೂರಜ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧವೇ  ಎಫ್‌ಐಆರ್
ಪ್ರಾತಿನಿಧಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 21, 2024 | 9:34 PM

ಹಾಸನ, (ಜೂನ್ 21): ಪ್ರಜ್ವಲ್‌ ಸಹೋದರ ಸೂರಜ್‌ ರೇವಣ್ಣ (Suraj Revanna Case) ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (unnatural sexual abuse) ಆರೋಪ ಕೇಳಿಬಂದಿದೆ. ಆದ್ರೆ, ಇತ್ತ ಆರೋಪ ಮಾಡಿರುವ ಜೆಡಿಎಸ್​ ಕಾರ್ಯಕರ್ತನ ವಿರುದ್ಧವೇ ಎಫ್‌ಐಆರ್‌ ದಾಖಲಾಗಿದೆ. ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ ಆರೋಪ ಮಾಡಿ ಅರಕಲಗೂಡಿನ ಜೆಡಿಎಸ್‌ ಕಾರ್ಯಕರ್ತ ದೂರು ನೀಡಿದ್ದರು. ಆದರೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದ. ಐದು ಕೋಟಿ ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ಸುಳ್ಳು ದೂರು ನೀಡಿ ಬೆದರಿಕೆ ಹಾಕಿರುವ ಬಗ್ಗೆ ಉಲ್ಲೇಖಿಸಿ ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ದೂರು ಸಲ್ಲಿಕೆ ಮಾಡಿದ್ದರಿಂದ ಐಪಿಸಿ ಸೆಕ್ಸೆನ್ 384, 506 ರ ಅಡಿಯಲ್ಲಿ 168/2024 ರಡಿ ಕೇಸ್ ದಾಖಲಾಗಿದೆ.

ನಿಮ್ಮ ಬಾಸ್ ಬಳಿ ಕೆಲಸ ಕೊಡಿಸು ಎಂದು ಅರಕಲಗೂಡು ಮೂಲದ ಯುವಕ ಕೇಳಿಕೊಂಡಿದ್ದ. ನೀನೇ ಹೋಗಿ ಬಾಸ್ ಭೇಟಿ ಮಾಡು ಎಂದು ಫೊನ್ ನಂಬರ್ ಕೊಟ್ಟಿದ್ದೆ. ಜೂನ್ 16 ರಂದು ಗನ್ನಿಕಡದ ತೋಟದ ಮನೆಗೆ ಕೆಲಸ ಕೇಳಲು ಸಂತ್ರಸ್ತ ಹೋಗಿದ್ದ. ಕೆಲಸ ಕೇಳಿ ವಾಪಸ್ ಬಂದ ಬಳಿಕ ಬ್ಲ್ಯಾಕ್ ಮೇಲ್ ಮಾಡಿರೊದಾಗಿ ಆರೋಪಿಸಲಾಗಿದೆ. ನೀನು ಕೆಲಸ ಕೊಡಿಸಲ್ಲ, ನಿಮ್ಮ ಬಾಸೂ ಕೆಲಸ ಕೊಡಿಸ್ತಿಲ್ಲ. ನನಗೆ ತುಂಬಾ ಕಷ್ಟ ಇದೆ, ನನಗೆ ಹಣ ಬೇಕು. ನೀನು, ನಿಮ್ಮ ಬಾಸ್‌ನಿಂದ ಐದು ಕೋಟಿ ಹಣ ಕೊಡಿಸದಿದ್ದರೆ, ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಸಂತ್ರಸ್ತ ಬೆದರಿಕೆ ಹಾಕಿದ್ದಾನೆ ಎಂದು ದೂರುದಾರ ಶಿವಕುಮಾರ್‌ ಹೇಳಿದ್ದಾರೆ.

ಈ ವಿಚಾರವನ್ನು ನಾನು ನಮ್ಮ ಬಾಸ್‌ಗೆ ತಿಳಿಸಿದೆ. ಆತ ಕೆಲಸ ಕೇಳಿಕೊಂಡು ಮನೆಗೆ ಬಂದಾಗ ಭದ್ರತೆಗಾಗಿ ಇದ್ದ ಪೊಲೀಸ್ ಸೇರಿ ಹಲವಾರು ಜನರು ಇದ್ದರು. ನಾನೇನು ತಪ್ಪು ಮಾಡಿಲ್ಲ, ಯಾಕೆ ಹಣ ಕೊಡಬೇಕು ಎಂದು ಬಾಸ್ ಹೇಳಿದರು. ನಂತರ ಜೂನ್ 18 ರಂದು ಹಾಸನದ ಜಿಲ್ಲಾಸ್ಪತ್ರೆಗೆ ಬಂದು ಆಸ್ಪತ್ರೆ ಚೀಟಿಗೆ ಎಂಎಲ್‌ಸಿ ಸೀಲ್ ಹಾಕಿಸಿ ಫೋಟೊ ಹಾಕಿ ಬೆದರಿಕೆ ಹಾಕಿದ್ದಾನೆ. ಆಸ್ಪತ್ರೆ ಚೀಟಿ ತೋರಿಸಿ ಮತ್ತೆ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾನೆ.

ಐದು ಕೋಟಿ ಬಳಿಕ ಮೂರು ಕೋಟಿ ಅಥವಾ ಕಡೆಗೆ ಎರಡೂವರೆ ಕೋಟಿಯಾದ್ರು ಹಣ ಕೊಡಿಸು ಎಂದು ಡಿಮ್ಯಾಂಡ್ ಮಾಡಿದ್ದಾನೆ. ಹಣ ಕೊಡಿಸದಿದ್ದರೆ ದೊಡ್ಡ ಕುಟುಂಬವಾದ ಅವರ ಮರ್ಯಾದೆ ಕಳೆಯುತ್ತೇನೆ ಎಂದು ಬ್ಲ್ಯಾಕ್ ಮೇಲ್ ಮಾಡಿದ ಬಗ್ಗೆ ದೂರು ಸಲ್ಲಿಸಲಾಗಿದೆ ಎಂದು ಸೂರಜ್‌ ಆಪ್ತ ಶಿವಕುಮಾರ್‌ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:31 pm, Fri, 21 June 24

ತಾಜಾ ಸುದ್ದಿ
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ