AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಅನರ್ಹಗೊಂಡ ನಗರಸಭೆ ಸದಸ್ಯನ ಮೇಲೆ‌ ಮಾರಣಾಂತಿಕ ಹಲ್ಲೆ; ಐವರು ಅರೆಸ್ಟ್

ಜೆಡಿಎಸ್ ನಿಂದ ಗೆದ್ದು ಬಿಜೆಪಿಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಅರಸೀಕೆರೆ ನಗರಸಭೆ ಸದಸ್ಯ ಹರ್ಷ ಅನರ್ಹಗೊಂಡಿದ್ದರು. ಇದೇ ವಿಚಾರವಾಗಿ ನಿನ್ನೆ ಹಲ್ಲೆ ಕೂಡ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ಹೋಟೆಲ್ನಲ್ಲಿ ಊಟ ಮಾಡುವ ವೇಳೆ ಏಕಾ ಏಕಿ ದಾಳಿ ಮಾಡಿ ಹಲ್ಲೆ ಮಾಡಲಾಗಿದೆಯಂತೆ.

ಹಾಸನದಲ್ಲಿ ಅನರ್ಹಗೊಂಡ ನಗರಸಭೆ ಸದಸ್ಯನ ಮೇಲೆ‌ ಮಾರಣಾಂತಿಕ ಹಲ್ಲೆ; ಐವರು ಅರೆಸ್ಟ್
ಹಾಸನದಲ್ಲಿ ಅನರ್ಹಗೊಂಡ ನಗರಸಭೆ ಸದಸ್ಯನ ಮೇಲೆ‌ ಮಾರಣಾಂತಿಕ ಹಲ್ಲೆ
TV9 Web
| Edited By: |

Updated on: Mar 21, 2022 | 4:08 PM

Share

ಹಾಸನ: ಅನರ್ಹಗೊಂಡ ನಗರಸಭೆ ಸದಸ್ಯ ಹರ್ಷವರ್ಧನ್ ಮೇಲೆ‌ ಮಾರಣಾಂತಿಕ ಹಲ್ಲೆ(Murder Attempt) ನಡೆಸಲಾಗಿದೆ. ಜೆಡಿಎಸ್ನಿಂದ(JDS) ಗೆದ್ದು ಬಿಜೆಪಿಗೆ(BJP) ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಶಾಸಕ ಶಿವಲಿಂಗೇಗೌಡ ಅವರ ಆಪ್ತ ಸಮೀವುಲ್ಲಾ ಕುಮ್ಮಕ್ಕಿನಿಂದ ಹಲ್ಲೆ ಮಾಡಿಸಲಾಗಿದೆ ಎಂದು ದೂರು ದಾಖಲಿಸಲಾಗಿದೆ. ಘಟನೆ ಸಂಬಂಧ ರಾಘು, ಜಗ್ಗು, ಪ್ರವೀಣ್ ಸೇರಿ ಐವರನ್ನು ಅರಸೀಕೆರೆ ನಗರ ಪೊಲೀಸರು ಬಂಧಿಸಿದ್ದಾರೆ.

ಜೆಡಿಎಸ್ ನಿಂದ ಗೆದ್ದು ಬಿಜೆಪಿಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಅರಸೀಕೆರೆ ನಗರಸಭೆ ಸದಸ್ಯ ಹರ್ಷ ಅನರ್ಹಗೊಂಡಿದ್ದರು. ಇದೇ ವಿಚಾರವಾಗಿ ನಿನ್ನೆ ಹಲ್ಲೆ ಕೂಡ ಮಾಡಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ನಿನ್ನೆ ಹೋಟೆಲ್ನಲ್ಲಿ ಊಟ ಮಾಡುವ ವೇಳೆ ಏಕಾ ಏಕಿ ದಾಳಿ ಮಾಡಿ ಹಲ್ಲೆ ಮಾಡಲಾಗಿದೆಯಂತೆ. ಜೆಡಿಎಸ್ ಬೆಂಬಲಿಗರಿಂದ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಶಾಸಕ ಶಿವಲಿಂಗೇಗೌಡ ಮತ್ತು ಅವರ ಆಪ್ತ ಸಮಿವುಲ್ಲಾ ಕುಮ್ಮಕ್ಕಿನಿಂದ ಹಲ್ಲೆ ಎಂದು ದೂರಿನಲ್ಲಿ ಉಲ್ಲೇಖಿಸಾಗಿದೆ. ನಿನ್ನೆ ರಾತ್ರಿ ಚಾಕು, ಬಿಯರ್ ಬಾಟಲ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಲು ಯತ್ನಿಸಿದ್ದು ತಲೆ ಕುತ್ತಿಗೆ ಬೆನ್ನಿನ ಭಾಗಗಳಿಗೆ ಇರಿದು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಾಳು ಹರ್ಷವರ್ಧನ್ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೋಟೆಲ್ ಒಳಗೆ ಗಲಾಟೆ ನಡೆದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಊಟಕ್ಕೆ ಕುಳಿತವರ ಮೇಲೆ ಏಕಾ ಏಕಿ ಹಲ್ಲೆಗೆ ಯತ್ನ ಮಾಡಲಾಗಿದೆ. ಈ ವೇಳೆ ಪ್ರತಿರೋಧ ತೋರಿದಾಗ ಹಲವರು ಸೇರಿ ಹರ್ಷವರ್ಧನ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಘಟನೆ ಸಂಬಂಧ ರಾಘು, ಜಗ್ಗು, ಪ್ರವೀಣ್ ಸೇರಿ ಐವರನ್ನು ಅರಸೀಕೆರೆ ನಗರ ಪೊಲೀಸರು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಹರ್ಷವರ್ಧನ್ ವಿರುದ್ಧವೂ ದೂರು ದಾಖಲಾಗಿದೆ. ತಮ್ಮ ಮೇಲೆ‌ ಹಲ್ಲೆ ಮಾಡಿಸಿದ್ದಾರೆ ಎಂದು ಆರೋಪಿಸಿ ಹಲ್ಲೆ ಆರೋಪಿ ರಾಘು ನೀಡಿದ ದೂರು ಆಧರಿಸಿ ಹರ್ಷವರ್ಧನ್ ವಿರುಧ್ದ ಎಫ್ಐಆರ್ ದಾಖಲಾಗಿದೆ. ಪರಸ್ಪರ ದೂರು ಪ್ರತಿದೂರು ದಾಖಲಿಸಿಕೊಂಡ ಅರಸೀಕೆರೆ ನಗರ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಇದನ್ನೂ ಓದಿ: ಕೆಲಸದ ಅವಧಿ ವಿಸ್ತರಣೆ ಮಾಡಿದ್ದಕ್ಕೆ ಆಕ್ರೋಶ; ಹಾಸಿಗೆ ದಿಂಬು, ಕುಟುಂಬ ಸಹಿತ ಕಚೇರಿಗೆ ಬರುತ್ತೇವೆ ಎಂದ ಸಿಬ್ಬಂದಿ!

ಅಡಿಕೆ ನಿಷೇಧ ಮಾಡದಂತೆ ಕೇಂದ್ರಕ್ಕೆ ಮನವಿ; ಅಡಿಕೆ ಬೆಳೆಗಾರರಿಗೆ ಸಮಾಧಾನಕರ ಸುದ್ದಿ ಕೊಟ್ಟ ಆರಗ ಜ್ಞಾನೇಂದ್ರ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್