AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ ಯೋಜನೆಗೆ ಇದ್ದ ಅರಣ್ಯ ಇಲಾಖೆಯ ತೊಡಕು ನಿವಾರಣೆ: ಅರಣ್ಯದಲ್ಲಿ ಕಾಲುವೆ ನಿರ್ಮಿಸಲು ಮುಹೂರ್ತ ಫಿಕ್ಸ್

ಮಲೆನಾಡಿನಿಂದ ಬಯಲು ಸೀಮೆ ಜನರಿಗೆ ಜೀವ ಜಲ ಸಾಗಿಸುವ, ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆ ಎತ್ತಿನಹೊಳೆ ಯೋಜನೆಗೆ ಇದ್ದ ಬಹುದೊಡ್ಡ ತೊಡಕೊಂದು ಕೊನೆಗೂ ನಿವಾರಣೆಯಾಗಿದೆ. ಉದ್ದೇಶಿತ ಮಾರ್ಗದಲ್ಲಿ ನೀರು ಹರಿಯಲು ಇದ್ದ ಅರಣ್ಯ ಇಲಾಖೆಯ ಅಡ್ಡಿ ಇದೀಗ ನಿವಾರಣೆಯಾಗಿದೆ. ಹಾಸನ ಜಿಲ್ಲೆಯಬೇಲೂರು, ಹಾಸನ, ಅರಸೀಕೆರೆ ಭಾಗದ ಅರಣ್ಯದಲ್ಲಿ ನೀರು ಹರಿಯಲು ಬೇಕಾದ ಕಾಲುವೆ ನಿರ್ಮಾಣಕ್ಕೆ ಇದ್ದ ಅಡ್ಡಿ ಆತಂಕ ದೂರವಾಗಿದೆ. 415 ಎಕರೆ ಪರ್ಯಾಯ ಭೂಮಿ ಕೊಡುವ ಮೂಲಕ, ಯೋಜನೆ ಸಾಕಾರಕ್ಕೆ ಸರ್ಕಾರ ಮುಂದಡಿಯಿಟ್ಟಿದೆ.

ಎತ್ತಿನಹೊಳೆ ಯೋಜನೆಗೆ ಇದ್ದ ಅರಣ್ಯ ಇಲಾಖೆಯ ತೊಡಕು ನಿವಾರಣೆ: ಅರಣ್ಯದಲ್ಲಿ ಕಾಲುವೆ ನಿರ್ಮಿಸಲು ಮುಹೂರ್ತ ಫಿಕ್ಸ್
ಎತ್ತಿನಹೊಳೆ ಯೋಜನೆ (ಸಂಗ್ರಹ ಚಿತ್ರ)
ಮಂಜುನಾಥ ಕೆಬಿ
| Edited By: |

Updated on: May 01, 2025 | 1:06 PM

Share

ಹಾಸನ, ಮೇ 1: ಎತ್ತಿನಹೊಳೆ ಯೋಜನೆಗೆ (Yettinahole Project) ಇದ್ದ ಅರಣ್ಯ ಇಲಾಖೆಯ (Forest Department) ತೊಡಕು ಕೊನೆಗೂ ನಿವಾರಣೆಯಾಗಿದೆ. ಅರಣ್ಯ ಪ್ರದೇಶದಲ್ಲಿ ಕಾಲುವೆ ನಿರ್ಮಿಸಲು ಇದ್ದ ಅಡ್ಡಿಯನ್ನು ನಿವಾರಣೆ ಮಾಡುವಲ್ಲಿ ಸರ್ಕಾರ ಯಶಸ್ವಿಯಾಗಿದ್ದು, ಅರಣ್ಯ ಇಲಾಖೆಗೆ ಪರ್ಯಾಯ ಭೂಮಿ ನೀಡಲಿದೆ. ಅರಣ್ಯದಲ್ಲಿ ಕಾಲುವೆ ಸಾಗಲು ಕಡೆಗೂ ಮುಹೂರ್ತ ನಿಗದಿಯಾಗಿದೆ. ಈ ವರ್ಷದ ಮಳೆಗಾಲದಲ್ಲಿ ಅರಸೀಕೆರೆಯತ್ತ ಎತ್ತಿನಹೊಳೆ ನೀರು ಹರಿಯುವುದು ನಿಶ್ಚಿತವಾಗಿದೆ.

ಎತ್ತಿನಹೊಳೆ ಯೋಜನೆಗೆ ಆಗಿದ್ದ ಅಡ್ಡಿಯೇನು?

ಎತ್ತಿನಹೊಳೆ ಯೋಜನೆ ಆರಂಭದಲ್ಲಿ ಹಲವು ಅಪಸ್ವರಗಳಿಗೆ ಕಾರಣವಾಗಿತ್ತು. ಆದರೆ, ದಿನ ಕಳೆದಂತೆ ಯೋಜನೆ ಹಂತ ಹಂತವಾಗಿ ಯಶಸ್ಸಿನೆಡೆಗೆ ಸಾಗಿ, ಕಳೆದ ವರ್ಷ ಮೊದಲ ಹಂತದ ಯೋಜನೆಗೆ ಸರ್ಕಾರ ಚಾಲನೆಯನ್ನೂ ನೀಡಿತ್ತು. ಹೀಗಾಗಿ ಎತ್ತಿನಹೊಳೆ ನೀರು ಚಿತ್ರದುರ್ಗದ ವಾಣಿವಿಲಾಸ ಸಾಗರಕ್ಕೆ ಹರಿದದ್ದು ಈಗ ಇತಿಹಾಸ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು,ಬೆಂಗಳೂರು ಗ್ರಾಮಾಂತರ ಭಾಗಕ್ಕೆ ಹರಿಯಬೇಕಾಗಿದ್ದ ನೀರಿಗೆ ಅರಣ್ಯ ಇಲಾಖೆಯ ಅನುಮತಿ ದೊರೆಯದಿರುವುದು ಅಡ್ಡಿಯಾಗಿತ್ತು. ಹಾಸನ ಬೇಲೂರು, ಅರಸೀಕೆರೆ ತಾಲ್ಲೂಕಿನ ಭಾಗದಲ್ಲಿ ಹರಡಿರೊ ಐದಳ್ಳ ಕಾವಲು ಅರಣ್ಯದಲ್ಲಿ ಸುಮಾರು 415 ಎಕರೆ ಪ್ರದೇಶದಲ್ಲಿ ಎತ್ತಿನಹೊಳೆ ಕಾಲುವೆ ನಿರ್ಮಾಣವಾಗಬೇಕಿತ್ತು. ಆದರೆ, ಅದಕ್ಕೆ ಅರಣ್ಯ ಇಲಾಖೆ ಅವಕಾಶ ನೀಡಿರಲಿಲ್ಲ.

ಪರ್ಯಾಯ ಭೂಮಿ ನೀಡಿ ಸಮಸ್ಯೆ ಬಗೆಹರಿಸಿದ ಸರ್ಕಾರ

ಇದೀಗ ಬೇಲೂರು, ಅರಸೀಕೆರೆ ತಾಲ್ಲೂಕಿನ ಹಲವು ಕಡೆ ಒಟ್ಟು 415 ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಾಗಿದೆ. ಹೀಗಾಗಿ ಅರಣ್ಯ ಇಲಾಖೆಯು ಎತ್ತಿನಹೊಳೆ ಯೋಜನೆಗೆ ನಿರಾಕ್ಷೇಪಣಾ ಪತ್ರವನ್ನೂ ನೀಡಿದೆ. ಕೇಂದ್ರದ ನೋಡಲ್ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದರೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು ಯೋಜನೆಗೆ ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ.

ಇದನ್ನೂ ಓದಿ
Image
ಕರ್ನಾಟಕ ಕರವಾಳಿಯಲ್ಲಿ ಭಾರಿ ಕಟ್ಟೆಚ್ಚರ: ಪ್ರವಾಸಿ ತಾಣಗಳ ಮೇಲೆ ನಿಗಾ
Image
ಬೆಂಗಳೂರು ಮೆಟ್ರೋ ಹಳದಿ ಮಾರ್ಗ: ಮೂರು ಹೆಚ್ಚುವರಿ ಹೊಸ ಬೋಗಿಗಳ ರವಾನೆ
Image
ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಏರಿಕೆ ಖಚಿತ, ಮೇ 13ಕ್ಕೆ ಆದೇಶ ಸಾಧ್ಯತೆ
Image
ಎತ್ತಿನಹೊಳೆ ಯೋಜನೆ ಬಗ್ಗೆ ತಿಳಿಯಲೇಬೇಕಾದ ಅಂಶಗಳು

ಹಾಸನ ಜಿಲ್ಲೆಯ ಸಕಲೇಶಪುರ ಭಾಗದಿಂದ ಬಯಲುಸೀಮೆ ಪ್ರದೇಶಕ್ಕೆ ನೀರು ಹರಿಸೋದು ಎತ್ತಿನಹೊಳೆ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಆರಂಭದಲ್ಲಿ 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಯೋಜನೆ ಜಾರಿಗೆ ಉದ್ದೇಶಿಸಲಾಗಿತ್ತು. ನಂತರ ಯೋಜನಾ ವೆಚ್ಚ 24 ಸಾವಿರ ಕೋಟಿ ರೂಪಾಯಿಗೆ ಮುಟ್ಟಿದೆ. ಬಹುತೇಕ ನೀರೆತ್ತುವ ಪ್ರದೇಶದ ಕಾಮಗಾರಿ ಮುಗಿದಿದ್ದು 8 ಫೀಡರ್​​​ಗಳ ಮೂಲಕ ಒಟ್ಟು 24 ಟಿಎಂಸಿಯಷ್ಟು ನೀರನ್ನು ಮಳೆಗಾಲದಲ್ಲಿ ಬಯಲುಸೀಮೆ ಪ್ರದೇಶಕ್ಕೆ ಹರಿಸಬಹುದು ಎಂಬ ಲೆಕ್ಕಾಚಾರ ಇದೆ.

ಇದನ್ನೂ ಓದಿ: Yettinahole Project: ಎತ್ತಿನಹೊಳೆ ಯೋಜನೆ ಬಗ್ಗೆ ತಿಳಿಯಲೇಬೇಕಾದ ಅಂಶಗಳು

ಒಟ್ಟಿನಲ್ಲಿ, ಇಷ್ಟು ವರ್​ಷ ಕುಂಟು ನೆಪ ಹೇಳಿ ಯೋಜನೆಗೆ ಅಡ್ಡಿ ಮಾಡುತ್ತಿದ್ದ ಅರಣ್ಯ ಇಲಾಖೆ ಇದೀಗ ಅರಣ್ಯ ಭೂಮಿಯಲ್ಲಿ ನೀರಾವರಿ ಯೋಜನೆಗೆ ಅಸ್ತು ಎಂದಿದೆ. ಅರಣ್ಯ ಇಲಾಖೆಯ ಭೂಮಿ ಹಸ್ತಾಂತರ ಪ್ರಕ್ರಿಯೆ ಮುಗಿದಿದ್ದು, ಕೇಂದ್ರದ ಅಧಿಕಾರಿಗಳ ಪರಿಶೀಲನೆ ಮುಗಿದರೆ ಯೋಜನೆ ಸಾಕಾರಗೊಳ್ಳುವ ದಿನ ದೂರವಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ