ಹನಿ ಟ್ಯ್ರಾಪ್ ಮೂಲಕ​ ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ: ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅವಳವಡಿಕೆ

ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ ಹಿನ್ನೆಲೆ ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್​ ಮೊರೆ ಹೋಗಿದೆ. ಹೌದು ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲು ಅರಣ್ಯ ಇಲಾಖೆ ಸಿದ್ದತೆ ನಡೆಸಿದೆ.

ಹನಿ ಟ್ಯ್ರಾಪ್ ಮೂಲಕ​ ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ: ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ಅವಳವಡಿಕೆ
ಆನೆಗೆ ರೇಡಿಯೋ ಕಾಲರ್ ಅವಳವಡಿಕೆ
Follow us
|

Updated on: May 15, 2023 | 2:45 PM

ಹಾಸನ: ಜಿಲ್ಲೆಯಲ್ಲಿ ಕಾಡಾನೆಗಳ (Elephant) ಉಪಟಳ ಮಿತಿಮೀರಿದ ಹಿನ್ನೆಲೆ ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಹನಿ ಟ್ಯ್ರಾಪ್ (Honey Trap)​ ಮೊರೆ ಹೋಗಿದೆ. ಹೌದು ಮೂರು ಹೆಣ್ಣಾನೆಗಳಿಗೆ ರೇಡಿಯೋ ಕಾಲರ್ ( Radio collar) ಅಳವಡಿಸಲು ಅರಣ್ಯ ಇಲಾಖೆ (Forest Department) ಸಿದ್ದತೆ ನಡೆಸಿದೆ. ಹೆಣ್ಣಾನೆ ಮೋಹಕ್ಕೆ ಬಿದ್ದು, ಕಾಡಾನೆಗಳು ಸೆರೆ ಸಿಗುವ ಸಾಧ್ಯತೆ ಇದೆ. ಹೀಗಾಗಿ ಇಂದಿನಿಂದ ಮೇ.25 ರವರೆಗೆ ಸಕಲೇಶಪುರ, ಬೇಲೂರು ವಲಯಗಳಲ್ಲಿ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಯಲಿದೆ. ಇನ್ನು ರೇಡಿಯೋ ಕಾಲರ್ ಅಳವಡಿಕೆಗೆ ಸಾಕಾನೆಗಳನ್ನು ಬಳಸಿಕೊಳ್ಳಲಾಗಿದ್ದು, ಮತ್ತಿಗೋಡು ಆನೆ ಶಿಬಿರದಿಂದ ಅಭಿಮನ್ಯು ಮತ್ತು ಮಹೇಂದ್ರ ಹಾಗೂ ದುಬಾರೆ ಆನೆ ಶಿಬಿರದಿಂದ ಅಜ್ಜಯ್ಯ, ಪ್ರಶಾಂತ ಮತ್ತು ವಿಕ್ರಮ ಆನೆಗಳನ್ನು ಕರೆಸಿಕೊಳ್ಳಲಾಗಿದೆ.

ಈ ಆನೆಗಳನ್ನು ತಾತ್ಕಾಲಿಕವಾಗಿ ಸ್ಥಾಪಿಸಿರುವ ಬೇಲೂರು ವಲಯದ, ಬಿಕ್ಕೋಡು ಸಸ್ಯಕ್ಷೇತ್ರದ ಕ್ಯಾಂಪ್‌ನಲ್ಲಿ ಇರಿಸಲಾಗಿದೆ. ಈ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಸೂಚನೆಗಳನ್ನು ಪಾಲಿಸಿ ಸಾರ್ವಜನಿಕರು ಸಹಕರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಹೆಚ್ಚಾದ ಆನೆ ಹಾವಳಿ; ಕೋಲಾರ-ಆಂಧ್ರ ಗಡಿಯಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ

ಏನಿದು ರೇಡಿಯೋ ಕಾಲರ್

ಆನೆಗಳ ಟ್ರ್ಯಾಕಿಂಗ್‌ಗೆ ರೇಡಿಯೋ ಕಾಲರ್‌ ವ್ಯವಸ್ಥೆ ಸಹಕಾರಿಯಾಗಿದೆ. ಈ ಮೂಲಕ ಪುಂಡಾನೆಗಳ ಚಲನವಲನದ ಮೇಲೆ ನಿಗಾ ಇಡಲು ಅರಣ್ಯ ಇಲಾಖೆ ಹೊಸ ಮಾರ್ಗವನ್ನು ಕಂಡುಕೊಂಡಿದೆ. ಆನೆಗಳ ಹಿಂಡು ಯಾವ ದಿಕ್ಕಿನತ್ತ ಸಂಚರಿಸುತ್ತಿದೆ, ಯಾವ ಪ್ರದೇಶದಲ್ಲಿವೆ ಎನ್ನುವ ಮಾಹಿತಿ ತಿಳಿಯಲು ಅನುಕೂಲವಾಗುವ ವ್ಯವಸ್ಥೆಯೇ ರೇಡಿಯೋ ಕಾಲರ್‌.

ಈ ವ್ಯವಸ್ಥೆಯಡಿ ಆನೆ ಹಿಂಡಿನಲ್ಲಿನ ಒಂದಕ್ಕೆ ಮತ್ತು ತರಿಸುವ ಔಷಧ ನೀಡಿ, ಕುತ್ತಿಗೆಗೆ ಬೆಲ್ಟ್‌ ರೀತಿಯ ಟ್ರ್ಯಾಕರ್‌ ಅಳವಡಿಸಲಾಗುತ್ತದೆ. ಡೆಹ್ರಾಡೂನ್‌ ವನ್ಯಜೀವಿ ಸಂಸ್ಥೆ (ಡಬ್ಲೂತ್ರ್ಯಐಐ), ಜರ್ಮನಿಯ ವನ್ಯಜೀವಿ ಸಂಸ್ಥೆಯೊಂದರ ಸಹಯೋಗದಲ್ಲಿ ಅರಣ್ಯ ಇಲಾಖೆ 2015-16ರಲ್ಲಿ ರೇಡಿಯೋ ಕಾಲರ್‌ ಅಳವಡಿಕೆಗೆ ಯೋಜನೆ ರೂಪಿಸಿತು. ಇದನ್ನು ಮೊದಲ ಬಾರಿಗೆ 2019ರಲ್ಲಿ ಕೊಡಗಿನ ಅರಣ್ಯ ಪ್ರದೇಶದಲ್ಲಿ ಅಳವಡಿಕೆಗೆ ಚಾಲನೆ ದೊರಕಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​