AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು

ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು
ಫಾರೆಸ್ಟ್ ಗಾರ್ಡ್ ಸುಂದರೇಶ್
TV9 Web
| Edited By: |

Updated on:Feb 18, 2023 | 10:08 AM

Share

ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಫೆ.16ರ ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ಬಳಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು.

ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರೆದಿತ್ತು. ಬೆಂಕಿಗೆ ಸಿಲುಕಿ ಡಿಆರ್​ಎಫ್ ಓ ಮಂಜುನಾಥ್, ಫಾರೆಸ್ಟ್ ಗಾರ್ಡ್ ಸುಂದರೇಶ್ ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್​ಗೆ ಗಾಯಗಳಾಗಿದ್ದವು. ಸುಂದರೇಶ್ ಹಾಗೂ ಮಂಜುನಾಥ್ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ:  ಕಾಡ್ಗಿಚ್ಚು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿಗೆ ತಗುಲಿದ ಬೆಂಕಿ, 5 ಕಿ.ಮೀ ದೂರದಿಂದ ಹೊತ್ತುತಂದ ಗ್ರಾಮಸ್ಥರು, ಇಬ್ಬರ ಸ್ಥಿತಿ ಗಂಭೀರ

ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ರಾತ್ರಿ ಸುಂದರೇಶ್ ಮೃತಪಟ್ಟಿದ್ದಾರೆ. ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿದ ಸಿಬ್ಬಂದಿ ಬದುಕುಳಿಯಲೆಂದು ಸಾವಿರಾರು ಜನರ ಪ್ರಾರ್ಥನೆ ಮಾಡುತ್ತಿದ್ದಾರೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನಡೆಯಲಿದೆ. ಸುಂದರೇಶ್ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾಗಿದ್ದಾರೆ. ಹಾಸನದಲ್ಲಿ ಅರಣ್ಯ ಇಲಾಖೆ ವತಿಯಿಂದ ಗೌರವಾರ್ಪಣೆ ಬಳಿಕ ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:08 am, Sat, 18 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!