ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು

ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು.

ಸಕಲೇಶಪುರ: ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಬೆಂಗಳೂರು ಆಸ್ಪತ್ರೆಯಲ್ಲಿ ಸಾವು
ಫಾರೆಸ್ಟ್ ಗಾರ್ಡ್ ಸುಂದರೇಶ್
Follow us
| Updated By: ಆಯೇಷಾ ಬಾನು

Updated on:Feb 18, 2023 | 10:08 AM

ಹಾಸನ: ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಫೆ.16ರ ಗುರುವಾರ ಮಧ್ಯಾಹ್ನ ಕಾಡುಮನೆ ಎಸ್ಟೇಟ್ ಬಳಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು.

ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು. ವೇಗವಾಗಿ ವ್ಯಾಪಿಸಿದ್ದ ಬೆಂಕಿ ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಸುತ್ತುವರೆದಿತ್ತು. ಬೆಂಕಿಗೆ ಸಿಲುಕಿ ಡಿಆರ್​ಎಫ್ ಓ ಮಂಜುನಾಥ್, ಫಾರೆಸ್ಟ್ ಗಾರ್ಡ್ ಸುಂದರೇಶ್ ವಾಚರ್ ಗಳಾದ ತುಂಗೇಶ್ ಮತ್ತು ಮಹೇಶ್​ಗೆ ಗಾಯಗಳಾಗಿದ್ದವು. ಸುಂದರೇಶ್ ಹಾಗೂ ಮಂಜುನಾಥ್ ಬೆಂಕಿಯಲ್ಲಿ ಬಹುತೇಕ ಬೆಂದು ಹೋಗಿದ್ದರು. ರಸ್ತೆ ಸಂಪರ್ಕ ಇಲ್ಲದ ಸ್ಥಳದಿಂದ ಅಡ್ಡೆಯಲ್ಲಿ ಹೊತ್ತು ತಂದು ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಹಾಗು ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇದನ್ನೂ ಓದಿ:  ಕಾಡ್ಗಿಚ್ಚು ನಂದಿಸಲು ಹೋಗಿದ್ದ ನಾಲ್ವರು ಅರಣ್ಯ ಸಿಬ್ಬಂದಿಗೆ ತಗುಲಿದ ಬೆಂಕಿ, 5 ಕಿ.ಮೀ ದೂರದಿಂದ ಹೊತ್ತುತಂದ ಗ್ರಾಮಸ್ಥರು, ಇಬ್ಬರ ಸ್ಥಿತಿ ಗಂಭೀರ

ಹಾಸನದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಝೀರೊ ಟ್ರಾಫಿಕ್ ಮೂಲಕ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿತ್ತು. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಇಬ್ಬರಲ್ಲಿ ರಾತ್ರಿ ಸುಂದರೇಶ್ ಮೃತಪಟ್ಟಿದ್ದಾರೆ. ಕಾಡು ರಕ್ಷಣೆಗಾಗಿ ತಮ್ಮ ಪ್ರಾಣ ಪಣಕ್ಕಿಟ್ಟು ಹೋರಾಡಿದ ಸಿಬ್ಬಂದಿ ಬದುಕುಳಿಯಲೆಂದು ಸಾವಿರಾರು ಜನರ ಪ್ರಾರ್ಥನೆ ಮಾಡುತ್ತಿದ್ದಾರೆ. ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಸುಂದರೇಶ್ ಅಂತ್ಯಕ್ರಿಯೆ ನಡೆಯಲಿದೆ. ಸುಂದರೇಶ್ ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವರಾಗಿದ್ದಾರೆ. ಹಾಸನದಲ್ಲಿ ಅರಣ್ಯ ಇಲಾಖೆ ವತಿಯಿಂದ ಗೌರವಾರ್ಪಣೆ ಬಳಿಕ ಹುಟ್ಟೂರಿಗೆ ಮೃತದೇಹ ಸ್ಥಳಾಂತರ ಮಾಡುವ ಸಾಧ್ಯತೆ ಇದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:08 am, Sat, 18 February 23

ತಾಜಾ ಸುದ್ದಿ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
‘ನನಗೂ ಅಶ್ಲೀಲ ಮೆಸೇಜ್​ಗಳು ಬರುತ್ತವೆ’: ಕಹಿ ಸತ್ಯ ವಿವರಿಸಿದ ನಟಿ ಅಪೂರ್ವಾ
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು
ಡಿಸಿಎಂಗಳ ಬಗ್ಗೆ ಕೇಳಿದಾಗ ರಾಜಣ್ಣ ವರಿಷ್ಠರು ತೆಪ್ಪಗಿರಲು ಹೇಳಿದ್ದಾರೆಂದರು