AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಆರೋಪ ಸ್ನೇಹಿತರಿಂದಲೇ ವ್ಯಕ್ತಿ ಬರ್ಬರ ಹತ್ಯೆ; ಕೊಣನೂರು ಪಟ್ಟಣ ಲಾಡ್ಜ್ನಲ್ಲಿ ಸಿಕ್ತು ಮೃತ ದೇಹ

ಲಾಡ್ಜ್ನಲ್ಲಿ ರೂಂ ಮಾಡಿ ಹರೀಶ್ನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶ್ನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅಕ್ರಮ ಸಂಬಂಧ ಆರೋಪ ಸ್ನೇಹಿತರಿಂದಲೇ ವ್ಯಕ್ತಿ ಬರ್ಬರ ಹತ್ಯೆ; ಕೊಣನೂರು ಪಟ್ಟಣ ಲಾಡ್ಜ್ನಲ್ಲಿ ಸಿಕ್ತು ಮೃತ ದೇಹ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jan 19, 2022 | 9:39 AM

Share

ಹಾಸನ: ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ. ಹರೀಶ್ ಕೊಲೆಯಾದ ವ್ಯಕ್ತಿ.

ಲಾಡ್ಜ್ನಲ್ಲಿ ರೂಂ ಮಾಡಿ ಹರೀಶ್ನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶ್ನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಮೊಬೈಲ್ ಕಂಪನಿ ಉದ್ಯೋಗಿ ಎಂದು ವಿಳಾಸ ಹೇಳಿ ಸುಸ್ಮಿತಾ ರೂಂ ಪಡೆದಿದ್ದಳು. ಬಳಿಕ ಅದೇ ಲಾಡ್ಜ್ನಲ್ಲಿ ಕೊಲೆಯಾದ ಹರೀಶ್ ಹೆಸರು ಸೇರಿಸಿ ಲಕ್ಷ್ಮಣ ಮತ್ತೊಂದು ರೂಂ ಬಾಡಿಗೆ ಪಡೆದಿದ್ದ. ಮಾತುಕತೆಗೆಂದು ಕರೆದು ಸುಸ್ಮಿತಾ ಬುಕ್ ಮಾಡಿದ್ದ ರೂಂನಲ್ಲಿ ಕೊಚ್ಚಿ ಹರೀಶ್ ಕೊಲೆ ಮಾಡಲಾಗಿದೆ. ಕೊಲೆಯಾದ ಬಳಿಕ ತನ್ನ ಗಂಡ ದಿಲೀಪ್ ಜೊತೆ ಸುಸ್ಮಿತಾ ಎಸ್ಕೇಪ್ ಆಗಿದ್ದಾಳೆ. ಕೊಠಡಿಯಲ್ಲಿ ಜೋರಾದ ಶಬ್ದ ಕೇಳಿ ಬಂದ ಹಿನ್ನೆಲೆ ಮಾಲೀಕ ಹೊರಗಿನಿಂದ ಲಾಡ್ಜ್ ರೂಂ ಬಾಗಿಲು ಮುಚ್ಚಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ರೂಂ‌ಂನಲ್ಲೇ ಬಂದಿಯಾಗಿದ್ದ ಕೊಲೆ ಆರೋಪಿ ಲಕ್ಷ್ಮಣ ಸಿಕ್ಕಿ ಬಿದ್ದಿದ್ದಾನೆ. ಅಕ್ರಮ‌ ಸಂಬಂಧ ಆರೋಪದಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರಾ ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಮಾಧ್ಯಮ ವೃತ್ತಿಪರ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ, ರಿಂಗ್ ರಸ್ತೆ ಅಭಿವೃದ್ಧಿಗೆ ಜ. 25 ವರೆಗೆ ವಿದ್ಯುತ್ ವ್ಯತ್ಯಯ

Published On - 9:34 am, Wed, 19 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!