AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧ ಆರೋಪ ಸ್ನೇಹಿತರಿಂದಲೇ ವ್ಯಕ್ತಿ ಬರ್ಬರ ಹತ್ಯೆ; ಕೊಣನೂರು ಪಟ್ಟಣ ಲಾಡ್ಜ್ನಲ್ಲಿ ಸಿಕ್ತು ಮೃತ ದೇಹ

ಲಾಡ್ಜ್ನಲ್ಲಿ ರೂಂ ಮಾಡಿ ಹರೀಶ್ನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶ್ನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಅಕ್ರಮ ಸಂಬಂಧ ಆರೋಪ ಸ್ನೇಹಿತರಿಂದಲೇ ವ್ಯಕ್ತಿ ಬರ್ಬರ ಹತ್ಯೆ; ಕೊಣನೂರು ಪಟ್ಟಣ ಲಾಡ್ಜ್ನಲ್ಲಿ ಸಿಕ್ತು ಮೃತ ದೇಹ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jan 19, 2022 | 9:39 AM

Share

ಹಾಸನ: ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಸ್ನೇಹಿತರಿಂದಲೇ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೊಣನೂರು ಪಟ್ಟಣದ ಲಾಡ್ಜ್ನಲ್ಲಿ ನಡೆದಿದೆ. ಹರೀಶ್ ಕೊಲೆಯಾದ ವ್ಯಕ್ತಿ.

ಲಾಡ್ಜ್ನಲ್ಲಿ ರೂಂ ಮಾಡಿ ಹರೀಶ್ನನ್ನು ಕರೆಸಿ ಬಾತ್ ರೂಂನಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮದ ನಿವಾಸಿ ಹರೀಶ್ನನ್ನು ಲಕ್ಷ್ಮಣ, ದಿಲೀಪ್, ಸುಶ್ಮಿತಾ ಎಂಬುವವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಬೆಂಗಳೂರಿನ ಮೊಬೈಲ್ ಕಂಪನಿ ಉದ್ಯೋಗಿ ಎಂದು ವಿಳಾಸ ಹೇಳಿ ಸುಸ್ಮಿತಾ ರೂಂ ಪಡೆದಿದ್ದಳು. ಬಳಿಕ ಅದೇ ಲಾಡ್ಜ್ನಲ್ಲಿ ಕೊಲೆಯಾದ ಹರೀಶ್ ಹೆಸರು ಸೇರಿಸಿ ಲಕ್ಷ್ಮಣ ಮತ್ತೊಂದು ರೂಂ ಬಾಡಿಗೆ ಪಡೆದಿದ್ದ. ಮಾತುಕತೆಗೆಂದು ಕರೆದು ಸುಸ್ಮಿತಾ ಬುಕ್ ಮಾಡಿದ್ದ ರೂಂನಲ್ಲಿ ಕೊಚ್ಚಿ ಹರೀಶ್ ಕೊಲೆ ಮಾಡಲಾಗಿದೆ. ಕೊಲೆಯಾದ ಬಳಿಕ ತನ್ನ ಗಂಡ ದಿಲೀಪ್ ಜೊತೆ ಸುಸ್ಮಿತಾ ಎಸ್ಕೇಪ್ ಆಗಿದ್ದಾಳೆ. ಕೊಠಡಿಯಲ್ಲಿ ಜೋರಾದ ಶಬ್ದ ಕೇಳಿ ಬಂದ ಹಿನ್ನೆಲೆ ಮಾಲೀಕ ಹೊರಗಿನಿಂದ ಲಾಡ್ಜ್ ರೂಂ ಬಾಗಿಲು ಮುಚ್ಚಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ರೂಂ‌ಂನಲ್ಲೇ ಬಂದಿಯಾಗಿದ್ದ ಕೊಲೆ ಆರೋಪಿ ಲಕ್ಷ್ಮಣ ಸಿಕ್ಕಿ ಬಿದ್ದಿದ್ದಾನೆ. ಅಕ್ರಮ‌ ಸಂಬಂಧ ಆರೋಪದಲ್ಲಿ ಸ್ನೇಹಿತನನ್ನೇ ಕೊಚ್ಚಿ ಕೊಂದ್ರಾ ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ. ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ತುಮಕೂರು: ಮಾಧ್ಯಮ ವೃತ್ತಿಪರ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ, ರಿಂಗ್ ರಸ್ತೆ ಅಭಿವೃದ್ಧಿಗೆ ಜ. 25 ವರೆಗೆ ವಿದ್ಯುತ್ ವ್ಯತ್ಯಯ

Published On - 9:34 am, Wed, 19 January 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ