AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 10 ರಿಂದ ಹಾಸನ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಆರಂಭ: ಹೆಚ್​. ಡಿ ರೇವಣ್ಣ

ಮಾರ್ಚ್ 10 ರಿಂದ ಜಿಲ್ಲೆಯ ಬೇಲೂರಿನಿಂದ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ, ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನೇತೃತ್ವದಲ್ಲಿ ಪಂಚರತ್ನ ಯಾತ್ರೆ ಪ್ರಾರಂಭವಾಗುತ್ತದೆ ಎಂದು ಮಾಜಿ ಸಚಿವ ಹೆಚ್​. ಡಿ ರೇವಣ್ಣ ಹೇಳಿದ್ದಾರೆ.

ಮಾರ್ಚ್ 10 ರಿಂದ ಹಾಸನ ಜಿಲ್ಲೆಯಲ್ಲಿ ಪಂಚರತ್ನ ಯಾತ್ರೆ ಆರಂಭ: ಹೆಚ್​. ಡಿ ರೇವಣ್ಣ
ಮಾಜಿ ಸಚಿವ ಹೆಚ್​ ಡಿ ರೇವಣ್ಣ
Follow us
ವಿವೇಕ ಬಿರಾದಾರ
|

Updated on:Mar 06, 2023 | 2:34 PM

ಹಾಸನ: ಮಾರ್ಚ್ 10 ರಿಂದ ಜಿಲ್ಲೆಯ ಬೇಲೂರಿನಿಂದ ಮಾಜಿ ಮುಖ್ಯಮಂತ್ರಿ ಹೆಚ್​. ಡಿ ಕುಮಾರಸ್ವಾಮಿ (HD Kuamrswamy), ಜೆಡಿಎಸ್​ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ನೇತೃತ್ವದಲ್ಲಿ ಪಂಚರತ್ನ ಯಾತ್ರೆ (Pancharatna Yatre) ಪ್ರಾರಂಭವಾಗುತ್ತದೆ ಎಂದು ಮಾಜಿ ಸಚಿವ ಹೆಚ್​. ಡಿ ರೇವಣ್ಣ (HD Revanna) ಹೇಳಿದ್ದಾರೆ. 13 ಚನ್ನರಾಯಪಟ್ಟಣ, 14 ಅರಸೀಕೆರೆ, 15 ಹೊಳೆನರಸೀಪುರ, 16 ಅರಕಲಗೂಡು, 17 ಸಕಲೇಶಪುರ ದಲ್ಲಿ ಪಂಚರತ್ನ ಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

ಹಾಸನದ ಸಂಸದರ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹಾಸನ ಕ್ಷೇತ್ರದ ಪಂಚರತ್ನ ಯಾತ್ರೆ ಪ್ರತ್ಯೇಕವಾಗಿ ನಡೆಯಲಿದೆ. ಈ ಜಿಲ್ಲೆಗೆ ಕಳೆದ 4 ವರ್ಷದಿಂದ ಬಿಜೆಪಿ ಸರ್ಕಾರ ಏನೆಲ್ಲ ತಡೆ ಹಿಡಿದಿದೆ ಎನ್ನೋದು ಗೊತ್ತಿದೆ. ಈ ಜಿಲ್ಲೆಗೆ ಈ ಸರ್ಕಾರ ಯಾವುದೆ ಸೌಲಭ್ಯ ಕೊಟ್ಟಿಲ್ಲ. ನಮ್ಮ ಜಿಲ್ಲೆಗೆ ಜಾರಿಯಾಗಿದ್ದ ತೋಟಗಾರಿಕೆ ಕಾಲೇಜು, ತಾಂತ್ರಿಕ ವಿವಿ ಬಜೆಟ್​​ನಲ್ಲಿ ಘೋಷಣೆ ಆಗಿತ್ತು. ಆದರೆ ಬಿಜೆಪಿ ಸರ್ಕಾರ ಎಲ್ಲ ಯೋಜನೆಗಳನ್ನು ರದ್ದು ಮಾಡಿದೆ ಎಂದು ಆರೋಪ ಮಾಡಿದರು.

ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಆಗುತ್ತೆ ಯಾರು ಗಾಬರಿ ಆಗಬೇಕಿಲ್ಲ

ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಆಗುತ್ತೆ ಯಾರು ಗಾಬರಿ ಆಗಬೇಕಿಲ್ಲ. ಕುಮಾರಣ್ಣ, ದೇವೇಗೌಡರು, ಜಿಲ್ಲೆಯ ಮುಖಂಡರ ವಿಶ್ವಾಸಕ್ಕೆ ತಗೊಂಡು ಅಭ್ಯರ್ಥಿ ಆಯ್ಕೆ ಮಾಡುತ್ತೇವೆ. ಕುಮಾರಣ್ಣ ಏನು ಹೇಳಿದಾರೆ, ರಾಜ್ಯದ ಎಲ್ಲ 224 ಬಿ ಫಾರಂ ದೇವೇಗೌಡರ ಕೈಲಿ ಕೊಡುತ್ತೇನೆ, ಅವರೇ ಟಿಕೇಟ್ ಹಂಚಲಿ ಎಂದಿದ್ದಾರೆ. ಕೊಟ್ಟಮಾತು ಉಳಿಸಿಕೊಳ್ಳುವ ಮುಖ್ಯಮಂತ್ರಿ ಎಂದರೇ ಅದು ಕುಮಾರಸ್ವಾಮಿ ಎಂದು ಹೇಳಿದರು.

ಸ್ವಾತಂತ್ರ್ಯ ಸರ್ಕಾರ ರಚನೆಗೆ ಜನರ ಬಳಿ ಕುಮಾರಸ್ವಾಮಿ ಬೆಂಬಲ ಕೇಳುತ್ತಿದ್ದಾರೆ. ಕಾಂಗ್ರೆಸ್​ನವರು ಎರಡು ವರ್ಷದಿಂದ ಅಭ್ಯರ್ಥಿ ಆಯ್ಕೆಗೆ ಅವರ ಮನೆ ಇವರ ಮನೆ ಬಾಗಿಲು ತಿರುಗುತ್ತಿದ್ದಾರೆ. ದೇವೇಗೌಡರ ಮೇಲೆ ಈ ದೇಶದಲ್ಲಿ ಯಾವುದಾದರು ಆರೋಪ ಇದೆಯಾ ? ಸಚಿವರಾಗಿ, ಮುಖ್ಯಮಂತ್ರಿಯಾಗಿ, ಪ್ರಧಾನಿಯಾಗಿ ಸೇವೆಸಲ್ಲಿಸಿದ್ದಾರೆ. ಆದರೆ ಯಾವುದೇ ಆರೋಪವಿಲ್ಲದ ನಾಯಕ ದೇವೇಗೌಡರು ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಅರಸೀಕೆರೆ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಈ ಪಕ್ಷ 15 ವರ್ಷ ಎಲ್ಲ ಸಕಲ ಸವಲತ್ತು ಕೊಟ್ಟಿದೆ. ಈಗ ಹೊರಟಿದ್ದಾರೆ ಅವರಿಗೆ ಒಳ್ಳೆಯದಾಗಲಿ. ಅವರಿಗೆ ಅನುಕೂಲ ಆಗಲಿ ಎಂದು ಎಲ್ಲ ತ್ಯಾಗ ಮಾಡಿದೆವು. ಅವರು ಇಲ್ಲೇ ಇರುತ್ತೇವೆ ಎಂದು ಹೇಳಿದರು. ರಾಗಿ ಕಳ್ಳ ಅಂತಾ ಯಾರೋ ಟೀಕೆ ಮಾಡಿದಾಗ ಧರ್ಮಸ್ಥಳಕ್ಕೆ ಹೋಗಿ ಅಣೆ ಮಾಡಿದರು. ಹಾಗೆ ಕುಮಾರಸ್ವಾಮಿ ಮುಂದೆಯೇ ಪಕ್ಷ ಬಿಡಲ್ಲ, ಎಂದು ಹೇಳಿದ್ದರು ಹೇಳಿಲ್ಲ ಎಂದು ಆಣೆಮಾಡಲಿ ನೋಡೊಣಾ ಎಂದು ವಾಗ್ದಾಳಿ ಮಾಡಿದರು.

ಅರಸೀಕೆರೆಗೆ ಕುಡಿಯೊ ನೀರು ಯೋಜನೆ ಕೊಟ್ಟಿದ್ದು ನಾವು. ನಾವು ಶಾಸಕರನ್ನಾಗಿ ಮಾಡದೆ ಇದ್ದರೇ ಅವರು ಹೇಗೆ ಅಭಿವೃದ್ಧಿ ಮಾಡುತ್ತಿದ್ದರು. ಅರಸೀಕೆರೆ ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯ ಕೊಡುಗೆ ಎಂದ ಶಿವಲಿಂಗೇಗೌಡ ಹೇಳಿಕೆಗೆ ರೇವಣ್ಣ ತಿರುಗೇಟು ನೀಡಿದರು. ಇವರು ಶಾಸಕರಾಗೊ ಮೊದಲೆ ನಾವು ಸಾಕಷ್ಟು ಕೆಲಸ ಆ ಕ್ಷೇತ್ರಕ್ಕೆ ಮಾಡಿದ್ದೇವೆ ಎಂದು ಮಾತನಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:30 pm, Mon, 6 March 23

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ