AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅರೆಸ್ಟ್

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜತೆ ಇದ್ದ ಬಾಲಕಿ ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಪೋಷಕರ ಜತೆ ಕೂಲಿಗಾಗಿ ಹಾಸನಕ್ಕೆ ಬಂದಿದ್ದ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರು ಅರೆಸ್ಟ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Dec 13, 2022 | 2:46 PM

ಹಾಸನ: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು ಬಾಲಕಿ ಗರ್ಭಿಣಿಯಾದ ಬಳಿಕ ಪ್ರಕರಣ ಬಯಲಾಗಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜತೆ ಇದ್ದ ಬಾಲಕಿ ತೋಟಕ್ಕೆ ಬಂದಿದ್ದಾಗ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸಮೂಹಿಕವಾಗಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಅನಾರೋಗ್ಯ ಹಿನ್ನೆಲೆ ಬಾಲಕಿ ಆಸ್ಪತ್ರೆಗೆ ಹೋಗಿದ್ದಾಗ ಆಕೆ ಗರ್ಭಿಣಿಯಾಗಿರುವುದು ಪತ್ತೆಯಾಗಿದ್ದು ಪ್ರಕರಣ ತಡವಾಗಿ ಬಯಲಾಗಿದೆ. ಇನ್ನು ಸಂತ್ರಸ್ತ ಬಾಲಕಿಗೆ ರಕ್ಷಣೆ ನೀಡಿ ಆರೋಪಿಗಳ ಬಂಧನಕ್ಕೆ ಕ್ರಮ ವಹಿಸಿರೋ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Viral Video: ಹುಡುಗಾಟದ ವಯಸ್ಕರು ರಸ್ತೆ ಮೇಲೆ ಶೇಖರಗೊಂಡಿದ್ದ ನೀರು ತಮ್ಮ ಮೇಲೆ ಚಿಮ್ಮಿಸಿ ಅಂತ ವಾಹನ ಚಾಲಕರನ್ನು ಗೋಗರೆದರು!

ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ಸಾವು

ಇನ್ನು ಮತ್ತೊಂದೆಡೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಪಾರಸನಹಳ್ಳಿಯಲ್ಲಿ ಪ್ರೇಮಿ ಜೊತೆಗಿದ್ದ ವಿಚ್ಚೇದಿತ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಪ್ರೇಮಿಯ ವಿರುದ್ಧ ಪ್ರೇಯಸಿಯನ್ನು ಕೊಂದು ಶವವನ್ನು ಕಬ್ಬಿನ ಗದ್ದೆಯಲ್ಲಿ ಹೂತ ಹಾಕಿರುವ ಆರೋಪ ಕೇಳಿ ಬಂದಿದೆ.ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆಂದು ಪೋಷಕರು ಆರೋಪ ಮಾಡಿದ್ದಾರೆ. ಅರಕಲಗೂಡು ತಾಲೂಕು ಮೂಲದ ಕಾವ್ಯ (25) ಮೃತಪಟ್ಟ ಮಹಿಳೆ

ಕಾವ್ಯಳನ್ನು ಮದುವೆಯಾಗುವುದಾಗಿ ಜೊತೆಗಿಟ್ಟುಕೊಂಡಿದ್ದ ಪ್ರಿಯಕರ ಅವಿನಾಶ್ ವಿರುದ್ಧ ಪೋಷಕರು ಆರೋಪ ಮಾಡಿದ್ದಾರೆ. ತಹಸೀಲ್ದಾರ್ ಕೃಷ್ಣಮೂರ್ತಿ ಸಮ್ಮುಖದಲ್ಲಿ ಪೊಲೀಸರು ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ಬಿಬಿಎಂ ಓದುವಾಗ ಪ್ರೀತಿಸಿ ಮದುವೆಯಾಗಿದ್ದ ಕಾವ್ಯ ನಂತರ ಸಂಸಾರದಲ್ಲಿ ಹೊಂದಾಣಿಕೆ ಬಾರದ ಕಾರಣ ಗಂಡನಿಂದ ವಿಚ್ಚೇಧನ ಪಡೆದಿದ್ದಳು. ಬಳಿಕ ಪಾರಸನಹಳ್ಳಿಯ ಅವಿನಾಶ್‌ನನ್ನು ಪ್ರೀತಿಸಿ ಆತನ ಮನೆಯಲ್ಲೇ ವಾಸವಾಗಿದ್ದಳು. ಕಳೆದ ಹದಿನೈದು ದಿನಗಳಿಂದ ಇದ್ದಕ್ಕಿದ್ದಂತೆ ಕಾವ್ಯ ಕಾಣೆಯಾಗಿದ್ದು ಕಾವ್ಯಳನ್ನು ಕೊಲೆಮಾಡಿ ಹೂತು ಹಾಕಿರೊದಾಗಿ ಹೇಳಲಾಗುತ್ತಿದೆ. ಅವಿನಾಶ್‌ನನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Published On - 2:14 pm, Tue, 13 December 22

ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು